Homeಚಳವಳಿಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

- Advertisement -
- Advertisement -

ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಅಯೋನಿಜ ಇರಬಹುದು?! ಆದರೆ ಅಂತಹ ಅಯೋನಿಜ ಅಯ್ಯಪ್ಪನನ್ನು ಪೂಜಿಸುವವರೆಲ್ಲ ಯೋನಿಜರಲ್ಲವೇ? ದೇವಳದ ಅರ್ಚಕರು, ಭಕ್ತರು ಕೂಡ ಯೋನಿಜರೇ ಆಗಿದ್ದಾರೆ. ಅಂದರೆ ಅವರೆಲ್ಲ ಜನಿಸಿರುವುದು ಮಹಿಳೆಯರ ಗರ್ಭದಿಂದಲೇ ಅಲ್ಲವೇ? ಯೋನಿಜ ಪುರುಷಭಕ್ತರು ಅಯ್ಯಪ್ಪನ ಸನ್ನಿಧಿಗೆ ಹೋಗಬಹುದಾದರೆ, ಮಹಿಳೆಯರಿಗೆ ಏಕೆ ಪ್ರವೇಶವಿಲ್ಲ. ಇಂತಹ ಸಾಮಾನ್ಯ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಕೇವಲ ಮುಟ್ಟಿನ ಕಾರಣಕ್ಕೆ ಮಹಿಳಾ ಭಕ್ತರಿಗೆ ಪ್ರವೇಶ ನಿರಾಕರಿಸುವುದಾದರೆ ಪುರುಷಭಕ್ತರೂ ಹೋಗುವಂತಿಲ್ಲ.

ಮಹಿಳೆ-ಪುರುಷ ಏಕವಾಗಿ ಮುಟ್ಟೆಂಬುದು ನಿಂತ ಮೇಲೆಯೇ ಮತ್ತೊಂದು ಕೂಸಿನ ಜನನ. ಇದು ಪ್ರಕೃತಿ ಸಹಜ. ವೇದ- ಶಾಸ್ತ್ರ-ಪುರಾಣ ಗ್ರಂಥಗಳು ‘ಪ್ರಕೃತಿ ಮಾತೆ’ ಎಂದು ಕರೆದಿವೆ. ಪ್ರಕೃತಿಯೇ ಎಲ್ಲ ಸೃಷ್ಟಿಗೂ ಕಾರಣವೆಂಬ ಸತ್ಯ ಒಪ್ಪಿಕೊಳ್ಳಲು ಹಿಂದೆಮುಂದೆ ನೋಡುವುದೇಕೆ? ಅಯ್ಯಪ್ಪನೇ ‘ಪ್ರಕೃತಿಮಾತೆ’ ಮಡಿಲಲ್ಲಿ ಇದ್ದಾಗ ಅಂತಹ ಸಷ್ಟಿಗೆ ಕಾರಣರಾದ ಮಹಿಳೆಯರನ್ನೇಕೆ ದೇವಳಕ್ಕೆ ಪ್ರವೇಶ ನಿರಾಕರಿಸುವುದು? ಹೋಗಲಿ ನಾವು ರಾಜಪ್ರಭುತ್ವ ಕಾಲದಲ್ಲಿದ್ದೇವೆಯೇ? ಇಲ್ಲವಲ್ಲ. ರಾಜ ಮಾಡಿದ  ಆಜ್ಞೆ ಉಲ್ಲಂಘಿಸಿದರೆ ಅದು ಶಕ್ಷೆಗೆ ಗುರಿಪಡಿಸುತ್ತದೆ. ಆದರೆ ಈಗ ಇರುವುದು ರಾಜಪ್ರಭುತ್ವವಲ್ಲ, ಪ್ರಜಾಪ್ರಭುತ್ವ. ಇಲ್ಲಿ ನಾವೆಲ್ಲರೂ ಸಮಾನರು.

ಭಾರತದ ಸಂವಿಧಾನವನ್ನು ನಮಗೆ ನಾವೇ ಒಪ್ಪಿಕೊಂಡಿದ್ದೇವೆ.”ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ;” ಅಂದರೆ ತಾರತಮ್ಯ ನೀತಿಯಿಂದ ಯಾರೊಬ್ಬರ ಹಕ್ಕುಗಳು ಬಾಧಿತವಾಗಬಾರದು ಎಂಬುದು ಸಂವಿಧಾನದ ಆಶಯ. ನಂಬಿಕೆಯೊಂದರ ನೆಪದಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುವುದು ಸರಿಯಾದ ಕ್ರಮವಲ್ಲ.

ಪುರಾಣ-ಶಾಸ್ತ್ರಗಳನ್ನು ಒಪ್ಪುವ ಮಹಿಳಾ ವಿರೋಧಿಗಳು ಮಹಿಳೆ ಕ್ಷಮಯಾಧರಿತ್ರಿ ‘ಯತ್ರಾ ನಾರೀ ಪೂಜ್ಯಂತೆ ರಮಂತೇ’ ಎನ್ನುವ ಪುರೋಹಿತಶಾಹಿ ಮನಸ್ಥಿತಿಗಳು ಅದೇ ಹೆಣ್ಣಿನ ಮೇಲೆ ಪಾಶ್ವದೃಷ್ಟಿ ಹರಿಸುವುದೇಕೆ? ಹೆಣ್ಣು ಭೂಮಿಯಾದರೆ ಮುಟ್ಟಿನ ಕಾರಣಕ್ಕೆ ಅಯ್ಯಪ್ಪ ಸ್ವಾಮಿ ಅಲ್ಲಿರಲು ಹೇಗೆ ಅರ್ಹ? ಭೂಮಿಗೆ ಮಹಿಳೆಯನ್ನು ಹೋಲಿಸುವುದಾದರೆ ಅದೇ ಭೂಮಿಯ ಮೇಲೆ ನೆಲೆಸಿರುವ ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಅಡ್ಡಿಪಡಿಸುವುದೇಕೆ? ಇದು ಪುರೋಹಿತಶಾಹಿಗಳು ಮತ್ತು ಅವರ ಬೆಂಬಲಿಗರ ದ್ವಂದ್ವವೂ, ಪುರುಷ ಪ್ರಧಾನ ದೌರ್ಜನ್ಯವೂ  ಆಗಿದೆ ಎಂದು ಬೇರೆ ಹೇಳಬೇಕಾಗಿಲ್ಲ. ಮಹಿಳೆಯರಿಗೆ ಅಯ್ಯಪ್ಪ ದೇವಳ ಪ್ರವೇಶ ಕಲ್ಪಿಸದೆ ಅವಮಾನಿಸುವುದು ಭೂಮಿಯನ್ನೇ ಅವಮಾನಿಸಿದಂತೆ.

ಅಯ್ಯಪ್ಪ ಸ್ವಾಮಿಗೆ ಪಡಿ ಹೊರುವವರು ಬೀಡಿ, ಸಿಗರೇಟು, ಗುಟುಕ, ಮಾಂಸ ಮಹಿಳೆಯ ಸಂಪರ್ಕ ಹೀಗೆ ಎಲ್ಲಾ ತ್ಯಜಿಸುತ್ತಾರೆ ಎನ್ನುವುದು ಸತ್ಯ. ಅವುಗಳನ್ನು ತೊರೆದ ಮಾತ್ರಕ್ಕೆ ಅವರು ದೇವಳಕ್ಕೆ ಹೋಗಬಹುದಾದರೆ, ಮಹಿಳೆಯರು ಯಾಕೆ ಹೋಗಬಾರದು? ಆದ್ಯವಚನಕಾರ ದೇವರ ದಾಸಿಮಯ್ಯ ತನ್ನ ವಚನವೊಂದರಲ್ಲಿ ‘ಬರಿ ಸಟಗನ ಭಕ್ತಿ ನೆಚ್ಚಲು ಬೇಡ, ಮಠದ ಬೆಕ್ಕು ಇಲಿಯ ಕಂಡು ಪುಟನೆಗೆದಂತಾಯ್ತು’ ಎನ್ನುತ್ತಾನೆ. ಅಂದರೆ ಒಂದು ತಿಂಗಳು ಮಾತ್ರ ಎಲ್ಲವನ್ನೂ ತ್ಯಜಿಸಿದವರದು ಬೆಕ್ಕಿನ ಭಕ್ತಿ. ಭಕ್ತಿ ಮುಗಿದ ಮೇಲೆ ಕಾಮನೆಗಳು ಚಿಮ್ಮುತ್ತವೆ. ಇಂಥ ಸುಳ್ಳಿನ ಭಕ್ತಿ ಬೇಡ ಎನ್ನುತ್ತಾನೆ ದಾಸಿಮಯ್ಯ.

“ಕಿರಣ ಸೋಂಕದ ಮುನ್ನ, ಅಳಿ ಮುಟ್ಟದ ಹೂ, ಎಂಜಲಾಗದ ನೀರು ತಂದು” ಪೂಜಿಸು ಎನ್ನುತ್ತಾನೆ ಹರಿಹರ. ಅಯ್ಯಪ್ಪನಿಗೆ ನೀವು ತೆಗೆದುಕೊಂಡು ಹೋಗುವುದು ಅದೇ ಮಹಿಳೆಯರು ಮುಟ್ಟಿದ ವಸ್ತುಗಳನ್ನು ತಾನೆ? ಎಲ್ಲೋ ಒಂದು ಕಡೆ ಅಯ್ಯಪ್ಪ ಭಕ್ತರು ತೆಗೆದುಕೊಂಡು ಹೋಗುವ ಮುಡಿ ಮತ್ತು ಅದರಲ್ಲಿನ ವಸ್ತುಗಳನ್ನು ಮಹಿಳೆ ಮುಟ್ಟಿಯೇ ಮುಟ್ಟಿರುತ್ತಾಳೆ. ಅಂಥ ಮುಟ್ಟಿನ ವಸ್ತುವನ್ನು ಅಯ್ಯಪ್ಪನಿಗೆ ಅರ್ಜಪಿಸಿದಾಗ ಮೈಲಿಗೆಯಾಗುವುದಿಲ್ಲವೇ? ಅಯ್ಯಪ್ಪನೇ ಹುಟ್ಟೇ ವಿಚಿತ್ರದ್ದು ಎಂದು ನಂಬಿರುವ ಭಕ್ತರು ಅದನ್ನು ಪ್ರಶ್ನಿಸಲು ಹೋಗುವುದಿಲ್ಲ. ಇಬ್ಬರು ಯೋನಿಜರೇ ಕೂಡಿಯೇ ಅಯ್ಯಪ್ಪ ಹುಟ್ಟಿದ್ದು. ಅಂದಮೇಲೆ ಮಹಿಳೆಯರಿಗೆ ಪ್ರವೇಶ ನೀಡುವುದು ಉಚಿತವಾದ ಕ್ರಮ.

ನೈಸರ್ಗಿಕ ನ್ಯಾಯದ ಪ್ರಕಾರ ಮಹಿಳೆ ಎಲ್ಲಾ ದೇವಾಲಯ ಪ್ರವೇಶಕ್ಕೂ ಹಕ್ಕಿದೆ. ನೈಸರ್ಗಿಕ ನ್ಯಾಯವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯುವಂತಹ ತೀರ್ಪುಗಳನ್ನು ನೀಡಿದಾಗ ಸಾಮಾನ್ಯ ಜನರು ನ್ಯಾಯಾಲಯದ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟುಕೊಳ್ಳುತ್ತಾರೆ. ನೈಸರ್ಗಿಕ ನ್ಯಾಯ ಎಲ್ಲ ಜೀವಿಗಳು ಸಮಾನವಾಗಿ ಇರುವಂತೆ ನೋಡಿಕೊಳ್ಳುತ್ತದೆ. ಸಮಾನತೆಯೇ ನೈಸರ್ಗಿಕ ನ್ಯಾಯದ ಜೀವಾಳ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ಏಕೆ ಕೂಡದು? ಎಂಬುದನ್ನು ಎಲ್ಲರೂ ಕೇಳಬೇಕಾಗಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...