Homeಚಳವಳಿಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

- Advertisement -
- Advertisement -

ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಅಯೋನಿಜ ಇರಬಹುದು?! ಆದರೆ ಅಂತಹ ಅಯೋನಿಜ ಅಯ್ಯಪ್ಪನನ್ನು ಪೂಜಿಸುವವರೆಲ್ಲ ಯೋನಿಜರಲ್ಲವೇ? ದೇವಳದ ಅರ್ಚಕರು, ಭಕ್ತರು ಕೂಡ ಯೋನಿಜರೇ ಆಗಿದ್ದಾರೆ. ಅಂದರೆ ಅವರೆಲ್ಲ ಜನಿಸಿರುವುದು ಮಹಿಳೆಯರ ಗರ್ಭದಿಂದಲೇ ಅಲ್ಲವೇ? ಯೋನಿಜ ಪುರುಷಭಕ್ತರು ಅಯ್ಯಪ್ಪನ ಸನ್ನಿಧಿಗೆ ಹೋಗಬಹುದಾದರೆ, ಮಹಿಳೆಯರಿಗೆ ಏಕೆ ಪ್ರವೇಶವಿಲ್ಲ. ಇಂತಹ ಸಾಮಾನ್ಯ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಕೇವಲ ಮುಟ್ಟಿನ ಕಾರಣಕ್ಕೆ ಮಹಿಳಾ ಭಕ್ತರಿಗೆ ಪ್ರವೇಶ ನಿರಾಕರಿಸುವುದಾದರೆ ಪುರುಷಭಕ್ತರೂ ಹೋಗುವಂತಿಲ್ಲ.

ಮಹಿಳೆ-ಪುರುಷ ಏಕವಾಗಿ ಮುಟ್ಟೆಂಬುದು ನಿಂತ ಮೇಲೆಯೇ ಮತ್ತೊಂದು ಕೂಸಿನ ಜನನ. ಇದು ಪ್ರಕೃತಿ ಸಹಜ. ವೇದ- ಶಾಸ್ತ್ರ-ಪುರಾಣ ಗ್ರಂಥಗಳು ‘ಪ್ರಕೃತಿ ಮಾತೆ’ ಎಂದು ಕರೆದಿವೆ. ಪ್ರಕೃತಿಯೇ ಎಲ್ಲ ಸೃಷ್ಟಿಗೂ ಕಾರಣವೆಂಬ ಸತ್ಯ ಒಪ್ಪಿಕೊಳ್ಳಲು ಹಿಂದೆಮುಂದೆ ನೋಡುವುದೇಕೆ? ಅಯ್ಯಪ್ಪನೇ ‘ಪ್ರಕೃತಿಮಾತೆ’ ಮಡಿಲಲ್ಲಿ ಇದ್ದಾಗ ಅಂತಹ ಸಷ್ಟಿಗೆ ಕಾರಣರಾದ ಮಹಿಳೆಯರನ್ನೇಕೆ ದೇವಳಕ್ಕೆ ಪ್ರವೇಶ ನಿರಾಕರಿಸುವುದು? ಹೋಗಲಿ ನಾವು ರಾಜಪ್ರಭುತ್ವ ಕಾಲದಲ್ಲಿದ್ದೇವೆಯೇ? ಇಲ್ಲವಲ್ಲ. ರಾಜ ಮಾಡಿದ  ಆಜ್ಞೆ ಉಲ್ಲಂಘಿಸಿದರೆ ಅದು ಶಕ್ಷೆಗೆ ಗುರಿಪಡಿಸುತ್ತದೆ. ಆದರೆ ಈಗ ಇರುವುದು ರಾಜಪ್ರಭುತ್ವವಲ್ಲ, ಪ್ರಜಾಪ್ರಭುತ್ವ. ಇಲ್ಲಿ ನಾವೆಲ್ಲರೂ ಸಮಾನರು.

ಭಾರತದ ಸಂವಿಧಾನವನ್ನು ನಮಗೆ ನಾವೇ ಒಪ್ಪಿಕೊಂಡಿದ್ದೇವೆ.”ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ;” ಅಂದರೆ ತಾರತಮ್ಯ ನೀತಿಯಿಂದ ಯಾರೊಬ್ಬರ ಹಕ್ಕುಗಳು ಬಾಧಿತವಾಗಬಾರದು ಎಂಬುದು ಸಂವಿಧಾನದ ಆಶಯ. ನಂಬಿಕೆಯೊಂದರ ನೆಪದಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುವುದು ಸರಿಯಾದ ಕ್ರಮವಲ್ಲ.

ಪುರಾಣ-ಶಾಸ್ತ್ರಗಳನ್ನು ಒಪ್ಪುವ ಮಹಿಳಾ ವಿರೋಧಿಗಳು ಮಹಿಳೆ ಕ್ಷಮಯಾಧರಿತ್ರಿ ‘ಯತ್ರಾ ನಾರೀ ಪೂಜ್ಯಂತೆ ರಮಂತೇ’ ಎನ್ನುವ ಪುರೋಹಿತಶಾಹಿ ಮನಸ್ಥಿತಿಗಳು ಅದೇ ಹೆಣ್ಣಿನ ಮೇಲೆ ಪಾಶ್ವದೃಷ್ಟಿ ಹರಿಸುವುದೇಕೆ? ಹೆಣ್ಣು ಭೂಮಿಯಾದರೆ ಮುಟ್ಟಿನ ಕಾರಣಕ್ಕೆ ಅಯ್ಯಪ್ಪ ಸ್ವಾಮಿ ಅಲ್ಲಿರಲು ಹೇಗೆ ಅರ್ಹ? ಭೂಮಿಗೆ ಮಹಿಳೆಯನ್ನು ಹೋಲಿಸುವುದಾದರೆ ಅದೇ ಭೂಮಿಯ ಮೇಲೆ ನೆಲೆಸಿರುವ ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಅಡ್ಡಿಪಡಿಸುವುದೇಕೆ? ಇದು ಪುರೋಹಿತಶಾಹಿಗಳು ಮತ್ತು ಅವರ ಬೆಂಬಲಿಗರ ದ್ವಂದ್ವವೂ, ಪುರುಷ ಪ್ರಧಾನ ದೌರ್ಜನ್ಯವೂ  ಆಗಿದೆ ಎಂದು ಬೇರೆ ಹೇಳಬೇಕಾಗಿಲ್ಲ. ಮಹಿಳೆಯರಿಗೆ ಅಯ್ಯಪ್ಪ ದೇವಳ ಪ್ರವೇಶ ಕಲ್ಪಿಸದೆ ಅವಮಾನಿಸುವುದು ಭೂಮಿಯನ್ನೇ ಅವಮಾನಿಸಿದಂತೆ.

ಅಯ್ಯಪ್ಪ ಸ್ವಾಮಿಗೆ ಪಡಿ ಹೊರುವವರು ಬೀಡಿ, ಸಿಗರೇಟು, ಗುಟುಕ, ಮಾಂಸ ಮಹಿಳೆಯ ಸಂಪರ್ಕ ಹೀಗೆ ಎಲ್ಲಾ ತ್ಯಜಿಸುತ್ತಾರೆ ಎನ್ನುವುದು ಸತ್ಯ. ಅವುಗಳನ್ನು ತೊರೆದ ಮಾತ್ರಕ್ಕೆ ಅವರು ದೇವಳಕ್ಕೆ ಹೋಗಬಹುದಾದರೆ, ಮಹಿಳೆಯರು ಯಾಕೆ ಹೋಗಬಾರದು? ಆದ್ಯವಚನಕಾರ ದೇವರ ದಾಸಿಮಯ್ಯ ತನ್ನ ವಚನವೊಂದರಲ್ಲಿ ‘ಬರಿ ಸಟಗನ ಭಕ್ತಿ ನೆಚ್ಚಲು ಬೇಡ, ಮಠದ ಬೆಕ್ಕು ಇಲಿಯ ಕಂಡು ಪುಟನೆಗೆದಂತಾಯ್ತು’ ಎನ್ನುತ್ತಾನೆ. ಅಂದರೆ ಒಂದು ತಿಂಗಳು ಮಾತ್ರ ಎಲ್ಲವನ್ನೂ ತ್ಯಜಿಸಿದವರದು ಬೆಕ್ಕಿನ ಭಕ್ತಿ. ಭಕ್ತಿ ಮುಗಿದ ಮೇಲೆ ಕಾಮನೆಗಳು ಚಿಮ್ಮುತ್ತವೆ. ಇಂಥ ಸುಳ್ಳಿನ ಭಕ್ತಿ ಬೇಡ ಎನ್ನುತ್ತಾನೆ ದಾಸಿಮಯ್ಯ.

“ಕಿರಣ ಸೋಂಕದ ಮುನ್ನ, ಅಳಿ ಮುಟ್ಟದ ಹೂ, ಎಂಜಲಾಗದ ನೀರು ತಂದು” ಪೂಜಿಸು ಎನ್ನುತ್ತಾನೆ ಹರಿಹರ. ಅಯ್ಯಪ್ಪನಿಗೆ ನೀವು ತೆಗೆದುಕೊಂಡು ಹೋಗುವುದು ಅದೇ ಮಹಿಳೆಯರು ಮುಟ್ಟಿದ ವಸ್ತುಗಳನ್ನು ತಾನೆ? ಎಲ್ಲೋ ಒಂದು ಕಡೆ ಅಯ್ಯಪ್ಪ ಭಕ್ತರು ತೆಗೆದುಕೊಂಡು ಹೋಗುವ ಮುಡಿ ಮತ್ತು ಅದರಲ್ಲಿನ ವಸ್ತುಗಳನ್ನು ಮಹಿಳೆ ಮುಟ್ಟಿಯೇ ಮುಟ್ಟಿರುತ್ತಾಳೆ. ಅಂಥ ಮುಟ್ಟಿನ ವಸ್ತುವನ್ನು ಅಯ್ಯಪ್ಪನಿಗೆ ಅರ್ಜಪಿಸಿದಾಗ ಮೈಲಿಗೆಯಾಗುವುದಿಲ್ಲವೇ? ಅಯ್ಯಪ್ಪನೇ ಹುಟ್ಟೇ ವಿಚಿತ್ರದ್ದು ಎಂದು ನಂಬಿರುವ ಭಕ್ತರು ಅದನ್ನು ಪ್ರಶ್ನಿಸಲು ಹೋಗುವುದಿಲ್ಲ. ಇಬ್ಬರು ಯೋನಿಜರೇ ಕೂಡಿಯೇ ಅಯ್ಯಪ್ಪ ಹುಟ್ಟಿದ್ದು. ಅಂದಮೇಲೆ ಮಹಿಳೆಯರಿಗೆ ಪ್ರವೇಶ ನೀಡುವುದು ಉಚಿತವಾದ ಕ್ರಮ.

ನೈಸರ್ಗಿಕ ನ್ಯಾಯದ ಪ್ರಕಾರ ಮಹಿಳೆ ಎಲ್ಲಾ ದೇವಾಲಯ ಪ್ರವೇಶಕ್ಕೂ ಹಕ್ಕಿದೆ. ನೈಸರ್ಗಿಕ ನ್ಯಾಯವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯುವಂತಹ ತೀರ್ಪುಗಳನ್ನು ನೀಡಿದಾಗ ಸಾಮಾನ್ಯ ಜನರು ನ್ಯಾಯಾಲಯದ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟುಕೊಳ್ಳುತ್ತಾರೆ. ನೈಸರ್ಗಿಕ ನ್ಯಾಯ ಎಲ್ಲ ಜೀವಿಗಳು ಸಮಾನವಾಗಿ ಇರುವಂತೆ ನೋಡಿಕೊಳ್ಳುತ್ತದೆ. ಸಮಾನತೆಯೇ ನೈಸರ್ಗಿಕ ನ್ಯಾಯದ ಜೀವಾಳ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ಏಕೆ ಕೂಡದು? ಎಂಬುದನ್ನು ಎಲ್ಲರೂ ಕೇಳಬೇಕಾಗಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...