Homeಚಳವಳಿಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

- Advertisement -
- Advertisement -

ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಅಯೋನಿಜ ಇರಬಹುದು?! ಆದರೆ ಅಂತಹ ಅಯೋನಿಜ ಅಯ್ಯಪ್ಪನನ್ನು ಪೂಜಿಸುವವರೆಲ್ಲ ಯೋನಿಜರಲ್ಲವೇ? ದೇವಳದ ಅರ್ಚಕರು, ಭಕ್ತರು ಕೂಡ ಯೋನಿಜರೇ ಆಗಿದ್ದಾರೆ. ಅಂದರೆ ಅವರೆಲ್ಲ ಜನಿಸಿರುವುದು ಮಹಿಳೆಯರ ಗರ್ಭದಿಂದಲೇ ಅಲ್ಲವೇ? ಯೋನಿಜ ಪುರುಷಭಕ್ತರು ಅಯ್ಯಪ್ಪನ ಸನ್ನಿಧಿಗೆ ಹೋಗಬಹುದಾದರೆ, ಮಹಿಳೆಯರಿಗೆ ಏಕೆ ಪ್ರವೇಶವಿಲ್ಲ. ಇಂತಹ ಸಾಮಾನ್ಯ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಕೇವಲ ಮುಟ್ಟಿನ ಕಾರಣಕ್ಕೆ ಮಹಿಳಾ ಭಕ್ತರಿಗೆ ಪ್ರವೇಶ ನಿರಾಕರಿಸುವುದಾದರೆ ಪುರುಷಭಕ್ತರೂ ಹೋಗುವಂತಿಲ್ಲ.

ಮಹಿಳೆ-ಪುರುಷ ಏಕವಾಗಿ ಮುಟ್ಟೆಂಬುದು ನಿಂತ ಮೇಲೆಯೇ ಮತ್ತೊಂದು ಕೂಸಿನ ಜನನ. ಇದು ಪ್ರಕೃತಿ ಸಹಜ. ವೇದ- ಶಾಸ್ತ್ರ-ಪುರಾಣ ಗ್ರಂಥಗಳು ‘ಪ್ರಕೃತಿ ಮಾತೆ’ ಎಂದು ಕರೆದಿವೆ. ಪ್ರಕೃತಿಯೇ ಎಲ್ಲ ಸೃಷ್ಟಿಗೂ ಕಾರಣವೆಂಬ ಸತ್ಯ ಒಪ್ಪಿಕೊಳ್ಳಲು ಹಿಂದೆಮುಂದೆ ನೋಡುವುದೇಕೆ? ಅಯ್ಯಪ್ಪನೇ ‘ಪ್ರಕೃತಿಮಾತೆ’ ಮಡಿಲಲ್ಲಿ ಇದ್ದಾಗ ಅಂತಹ ಸಷ್ಟಿಗೆ ಕಾರಣರಾದ ಮಹಿಳೆಯರನ್ನೇಕೆ ದೇವಳಕ್ಕೆ ಪ್ರವೇಶ ನಿರಾಕರಿಸುವುದು? ಹೋಗಲಿ ನಾವು ರಾಜಪ್ರಭುತ್ವ ಕಾಲದಲ್ಲಿದ್ದೇವೆಯೇ? ಇಲ್ಲವಲ್ಲ. ರಾಜ ಮಾಡಿದ  ಆಜ್ಞೆ ಉಲ್ಲಂಘಿಸಿದರೆ ಅದು ಶಕ್ಷೆಗೆ ಗುರಿಪಡಿಸುತ್ತದೆ. ಆದರೆ ಈಗ ಇರುವುದು ರಾಜಪ್ರಭುತ್ವವಲ್ಲ, ಪ್ರಜಾಪ್ರಭುತ್ವ. ಇಲ್ಲಿ ನಾವೆಲ್ಲರೂ ಸಮಾನರು.

ಭಾರತದ ಸಂವಿಧಾನವನ್ನು ನಮಗೆ ನಾವೇ ಒಪ್ಪಿಕೊಂಡಿದ್ದೇವೆ.”ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ;” ಅಂದರೆ ತಾರತಮ್ಯ ನೀತಿಯಿಂದ ಯಾರೊಬ್ಬರ ಹಕ್ಕುಗಳು ಬಾಧಿತವಾಗಬಾರದು ಎಂಬುದು ಸಂವಿಧಾನದ ಆಶಯ. ನಂಬಿಕೆಯೊಂದರ ನೆಪದಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುವುದು ಸರಿಯಾದ ಕ್ರಮವಲ್ಲ.

ಪುರಾಣ-ಶಾಸ್ತ್ರಗಳನ್ನು ಒಪ್ಪುವ ಮಹಿಳಾ ವಿರೋಧಿಗಳು ಮಹಿಳೆ ಕ್ಷಮಯಾಧರಿತ್ರಿ ‘ಯತ್ರಾ ನಾರೀ ಪೂಜ್ಯಂತೆ ರಮಂತೇ’ ಎನ್ನುವ ಪುರೋಹಿತಶಾಹಿ ಮನಸ್ಥಿತಿಗಳು ಅದೇ ಹೆಣ್ಣಿನ ಮೇಲೆ ಪಾಶ್ವದೃಷ್ಟಿ ಹರಿಸುವುದೇಕೆ? ಹೆಣ್ಣು ಭೂಮಿಯಾದರೆ ಮುಟ್ಟಿನ ಕಾರಣಕ್ಕೆ ಅಯ್ಯಪ್ಪ ಸ್ವಾಮಿ ಅಲ್ಲಿರಲು ಹೇಗೆ ಅರ್ಹ? ಭೂಮಿಗೆ ಮಹಿಳೆಯನ್ನು ಹೋಲಿಸುವುದಾದರೆ ಅದೇ ಭೂಮಿಯ ಮೇಲೆ ನೆಲೆಸಿರುವ ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಅಡ್ಡಿಪಡಿಸುವುದೇಕೆ? ಇದು ಪುರೋಹಿತಶಾಹಿಗಳು ಮತ್ತು ಅವರ ಬೆಂಬಲಿಗರ ದ್ವಂದ್ವವೂ, ಪುರುಷ ಪ್ರಧಾನ ದೌರ್ಜನ್ಯವೂ  ಆಗಿದೆ ಎಂದು ಬೇರೆ ಹೇಳಬೇಕಾಗಿಲ್ಲ. ಮಹಿಳೆಯರಿಗೆ ಅಯ್ಯಪ್ಪ ದೇವಳ ಪ್ರವೇಶ ಕಲ್ಪಿಸದೆ ಅವಮಾನಿಸುವುದು ಭೂಮಿಯನ್ನೇ ಅವಮಾನಿಸಿದಂತೆ.

ಅಯ್ಯಪ್ಪ ಸ್ವಾಮಿಗೆ ಪಡಿ ಹೊರುವವರು ಬೀಡಿ, ಸಿಗರೇಟು, ಗುಟುಕ, ಮಾಂಸ ಮಹಿಳೆಯ ಸಂಪರ್ಕ ಹೀಗೆ ಎಲ್ಲಾ ತ್ಯಜಿಸುತ್ತಾರೆ ಎನ್ನುವುದು ಸತ್ಯ. ಅವುಗಳನ್ನು ತೊರೆದ ಮಾತ್ರಕ್ಕೆ ಅವರು ದೇವಳಕ್ಕೆ ಹೋಗಬಹುದಾದರೆ, ಮಹಿಳೆಯರು ಯಾಕೆ ಹೋಗಬಾರದು? ಆದ್ಯವಚನಕಾರ ದೇವರ ದಾಸಿಮಯ್ಯ ತನ್ನ ವಚನವೊಂದರಲ್ಲಿ ‘ಬರಿ ಸಟಗನ ಭಕ್ತಿ ನೆಚ್ಚಲು ಬೇಡ, ಮಠದ ಬೆಕ್ಕು ಇಲಿಯ ಕಂಡು ಪುಟನೆಗೆದಂತಾಯ್ತು’ ಎನ್ನುತ್ತಾನೆ. ಅಂದರೆ ಒಂದು ತಿಂಗಳು ಮಾತ್ರ ಎಲ್ಲವನ್ನೂ ತ್ಯಜಿಸಿದವರದು ಬೆಕ್ಕಿನ ಭಕ್ತಿ. ಭಕ್ತಿ ಮುಗಿದ ಮೇಲೆ ಕಾಮನೆಗಳು ಚಿಮ್ಮುತ್ತವೆ. ಇಂಥ ಸುಳ್ಳಿನ ಭಕ್ತಿ ಬೇಡ ಎನ್ನುತ್ತಾನೆ ದಾಸಿಮಯ್ಯ.

“ಕಿರಣ ಸೋಂಕದ ಮುನ್ನ, ಅಳಿ ಮುಟ್ಟದ ಹೂ, ಎಂಜಲಾಗದ ನೀರು ತಂದು” ಪೂಜಿಸು ಎನ್ನುತ್ತಾನೆ ಹರಿಹರ. ಅಯ್ಯಪ್ಪನಿಗೆ ನೀವು ತೆಗೆದುಕೊಂಡು ಹೋಗುವುದು ಅದೇ ಮಹಿಳೆಯರು ಮುಟ್ಟಿದ ವಸ್ತುಗಳನ್ನು ತಾನೆ? ಎಲ್ಲೋ ಒಂದು ಕಡೆ ಅಯ್ಯಪ್ಪ ಭಕ್ತರು ತೆಗೆದುಕೊಂಡು ಹೋಗುವ ಮುಡಿ ಮತ್ತು ಅದರಲ್ಲಿನ ವಸ್ತುಗಳನ್ನು ಮಹಿಳೆ ಮುಟ್ಟಿಯೇ ಮುಟ್ಟಿರುತ್ತಾಳೆ. ಅಂಥ ಮುಟ್ಟಿನ ವಸ್ತುವನ್ನು ಅಯ್ಯಪ್ಪನಿಗೆ ಅರ್ಜಪಿಸಿದಾಗ ಮೈಲಿಗೆಯಾಗುವುದಿಲ್ಲವೇ? ಅಯ್ಯಪ್ಪನೇ ಹುಟ್ಟೇ ವಿಚಿತ್ರದ್ದು ಎಂದು ನಂಬಿರುವ ಭಕ್ತರು ಅದನ್ನು ಪ್ರಶ್ನಿಸಲು ಹೋಗುವುದಿಲ್ಲ. ಇಬ್ಬರು ಯೋನಿಜರೇ ಕೂಡಿಯೇ ಅಯ್ಯಪ್ಪ ಹುಟ್ಟಿದ್ದು. ಅಂದಮೇಲೆ ಮಹಿಳೆಯರಿಗೆ ಪ್ರವೇಶ ನೀಡುವುದು ಉಚಿತವಾದ ಕ್ರಮ.

ನೈಸರ್ಗಿಕ ನ್ಯಾಯದ ಪ್ರಕಾರ ಮಹಿಳೆ ಎಲ್ಲಾ ದೇವಾಲಯ ಪ್ರವೇಶಕ್ಕೂ ಹಕ್ಕಿದೆ. ನೈಸರ್ಗಿಕ ನ್ಯಾಯವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯುವಂತಹ ತೀರ್ಪುಗಳನ್ನು ನೀಡಿದಾಗ ಸಾಮಾನ್ಯ ಜನರು ನ್ಯಾಯಾಲಯದ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟುಕೊಳ್ಳುತ್ತಾರೆ. ನೈಸರ್ಗಿಕ ನ್ಯಾಯ ಎಲ್ಲ ಜೀವಿಗಳು ಸಮಾನವಾಗಿ ಇರುವಂತೆ ನೋಡಿಕೊಳ್ಳುತ್ತದೆ. ಸಮಾನತೆಯೇ ನೈಸರ್ಗಿಕ ನ್ಯಾಯದ ಜೀವಾಳ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ಏಕೆ ಕೂಡದು? ಎಂಬುದನ್ನು ಎಲ್ಲರೂ ಕೇಳಬೇಕಾಗಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...