Homeಚಳವಳಿನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

ನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೂ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
- Advertisement -

ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು ಬಳಿ ಅಪಘಾತ ಸಂಭವಿಸಿದ್ದು ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.

ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೆ  ಗಾಯಗಳಾಗಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ನರಗುಂದ ರೈತ ಹೋರಾಟ ಕಾರ್ಯಕ್ರಮ ಆಯೋಜಿಸುವಲ್ಲಿ ನಿರತರಾಗಿದ್ದ ಜಿ.ಟಿ ರಾಮಸ್ವಾಮಿ ಮತ್ತು ರಾಮಣ್ಣನವರು ನಿನ್ನೆ ಕಾರ್ಯಕ್ರಮ ಮುಗಿಸಿ ರಾತ್ರಿ 10ರ ವೇಳೆಗೆ ಅಲ್ಲಿಂದ ಹೊರಟಿದ್ದು, ಬೆಳಗ್ಗಿನ ಜಾವ 5 ಗಂಟೆಯ ಸಮಯದಲ್ಲಿ ಚಿಕ್ಕಮಗಳೂರು ಬಳಿ ಅಪಘಾತಕ್ಕೀಡಾಗಿದ್ದಾರೆ.

ನರಗುಂದ ರೈತ ಬಂಡಾಯ ಹೋರಾಟದಲ್ಲಿ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡುತ್ತಿರುವುದು

ಮೂಲತಃ ಕನಕಪುರದವರಾದ ಜಿ.ಟಿ ರಾಮಸ್ವಾಮಿಯವರು ಸೈನ್ಯದಲ್ಲಿ ಕೆಲ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ನಂತರ ಕೆಎಎಸ್‌ ಪಾಸು ಮಾಡಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯಾಗಿದ್ದವರು. ಅದಕ್ಕೂ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ನಂತರ ಅಲ್ಲಿಂದ ಸಕ್ರಿಯ ರೈತ ಚಳವಳಿಯಲ್ಲಿ ತೊಡಗಿಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಅವರು ಹಾಸನ ಜಿಲ್ಲೆಯ ಆಲೂರಿನ ಬೆಳ್ಳವಾರದಲ್ಲಿ ತೋಟ ಮಾಡಿಕೊಂಡು ಕುಟುಂಬ ಸಮೇತ ವಾಸವಾಗಿದ್ದರು.

ಚನ್ನಪಟ್ಟಣ ರಾಮು ಎಂದೇ ಖ್ಯಾತಿಯಾಗಿದ್ದ ರಾಮಣ್ಣನವರು ಹಲವು ದಶಕಗಳಿಂದ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.

ಸದಾ ರೈತ ಪರವಾಗಿ ನೂರಾರು ಹೋರಾಟಗಳನ್ನು ಸಂಘಟಿಸಿದ್ದ, ಸರಳ ಜೀವಿಗಳಾಗಿದ್ದ ಅವರ ಸಾವು ಬಹಳ ದುಃಖದ ಸಂಗತಿ, ನಾವು ಇಬ್ಬರು ಹೋರಾಟದ ಸಂಗಾತಿಗಳನ್ನು ಕಳೆದುಕೊಂಡಿದ್ದೇವೆ ಎಂದು ಅವರ ನಿಧನಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು, ಕಾರ್ಯದರ್ಶಿ ಗೋಪಾಲ್ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸದ್ಯ ಅವರ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಇಡಲಾಗಿದ್ದು ಮರಣೋತ್ತರ ಪರೀಕ್ಷೆ ಮುಗಿದ ನಂತರ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತದೆ ಎನ್ನಲಾಗಿದೆ. ಜಿ ಟಿ ರಾಮಸ್ವಾಮಿ ಅವರ ಅಂತ್ಯಕ್ರಿಯೆಯು ಇಂದು ಸಂಜೆ 4 ಗಂಟೆಗೆ ಅವರ ತೋಟ ಹಾಸನ ಜಿಲ್ಲೆ ಆಲೂರು ತಾಲೂಕಿನ ಬೆಳ್ಳವಾರದಲ್ಲಿ ನಡೆಯಲಿದೆ.

ದಿವಂಗತ ಚನ್ನಪಟ್ಟಣ ರಾಮು ಅವರ ಅಂತ್ಯಕ್ರಿಯೆಯು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಅವರ ಸ್ವಗ್ರಾಮ ಮೊಗೇನಹಳ್ಳಿಯಲ್ಲಿ ನಡೆಯಲಿದೆ.


ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...