Homeಚಳವಳಿನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

ನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೂ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
- Advertisement -

ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು ಬಳಿ ಅಪಘಾತ ಸಂಭವಿಸಿದ್ದು ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.

ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೆ  ಗಾಯಗಳಾಗಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ನರಗುಂದ ರೈತ ಹೋರಾಟ ಕಾರ್ಯಕ್ರಮ ಆಯೋಜಿಸುವಲ್ಲಿ ನಿರತರಾಗಿದ್ದ ಜಿ.ಟಿ ರಾಮಸ್ವಾಮಿ ಮತ್ತು ರಾಮಣ್ಣನವರು ನಿನ್ನೆ ಕಾರ್ಯಕ್ರಮ ಮುಗಿಸಿ ರಾತ್ರಿ 10ರ ವೇಳೆಗೆ ಅಲ್ಲಿಂದ ಹೊರಟಿದ್ದು, ಬೆಳಗ್ಗಿನ ಜಾವ 5 ಗಂಟೆಯ ಸಮಯದಲ್ಲಿ ಚಿಕ್ಕಮಗಳೂರು ಬಳಿ ಅಪಘಾತಕ್ಕೀಡಾಗಿದ್ದಾರೆ.

ನರಗುಂದ ರೈತ ಬಂಡಾಯ ಹೋರಾಟದಲ್ಲಿ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡುತ್ತಿರುವುದು

ಮೂಲತಃ ಕನಕಪುರದವರಾದ ಜಿ.ಟಿ ರಾಮಸ್ವಾಮಿಯವರು ಸೈನ್ಯದಲ್ಲಿ ಕೆಲ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ನಂತರ ಕೆಎಎಸ್‌ ಪಾಸು ಮಾಡಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯಾಗಿದ್ದವರು. ಅದಕ್ಕೂ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ನಂತರ ಅಲ್ಲಿಂದ ಸಕ್ರಿಯ ರೈತ ಚಳವಳಿಯಲ್ಲಿ ತೊಡಗಿಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಅವರು ಹಾಸನ ಜಿಲ್ಲೆಯ ಆಲೂರಿನ ಬೆಳ್ಳವಾರದಲ್ಲಿ ತೋಟ ಮಾಡಿಕೊಂಡು ಕುಟುಂಬ ಸಮೇತ ವಾಸವಾಗಿದ್ದರು.

ಚನ್ನಪಟ್ಟಣ ರಾಮು ಎಂದೇ ಖ್ಯಾತಿಯಾಗಿದ್ದ ರಾಮಣ್ಣನವರು ಹಲವು ದಶಕಗಳಿಂದ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.

ಸದಾ ರೈತ ಪರವಾಗಿ ನೂರಾರು ಹೋರಾಟಗಳನ್ನು ಸಂಘಟಿಸಿದ್ದ, ಸರಳ ಜೀವಿಗಳಾಗಿದ್ದ ಅವರ ಸಾವು ಬಹಳ ದುಃಖದ ಸಂಗತಿ, ನಾವು ಇಬ್ಬರು ಹೋರಾಟದ ಸಂಗಾತಿಗಳನ್ನು ಕಳೆದುಕೊಂಡಿದ್ದೇವೆ ಎಂದು ಅವರ ನಿಧನಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು, ಕಾರ್ಯದರ್ಶಿ ಗೋಪಾಲ್ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸದ್ಯ ಅವರ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಇಡಲಾಗಿದ್ದು ಮರಣೋತ್ತರ ಪರೀಕ್ಷೆ ಮುಗಿದ ನಂತರ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತದೆ ಎನ್ನಲಾಗಿದೆ. ಜಿ ಟಿ ರಾಮಸ್ವಾಮಿ ಅವರ ಅಂತ್ಯಕ್ರಿಯೆಯು ಇಂದು ಸಂಜೆ 4 ಗಂಟೆಗೆ ಅವರ ತೋಟ ಹಾಸನ ಜಿಲ್ಲೆ ಆಲೂರು ತಾಲೂಕಿನ ಬೆಳ್ಳವಾರದಲ್ಲಿ ನಡೆಯಲಿದೆ.

ದಿವಂಗತ ಚನ್ನಪಟ್ಟಣ ರಾಮು ಅವರ ಅಂತ್ಯಕ್ರಿಯೆಯು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಅವರ ಸ್ವಗ್ರಾಮ ಮೊಗೇನಹಳ್ಳಿಯಲ್ಲಿ ನಡೆಯಲಿದೆ.


ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....