Homeಕರ್ನಾಟಕಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

- Advertisement -
- Advertisement -

“ಮಾಧ್ಯಮಗಳು ಬಿತ್ತರಿಸುತ್ತಿರುವುದನ್ನು ನೋಡಿದರೆ, ಅಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ ಎನಿಸುತ್ತದೆ” ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ರೈತರ ಚಳವಳಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, “ನಮಗೆ ತಿಳಿದಂತೆ ಇಂದು ದೇಶದಲ್ಲಿ ನಡೆಯುತ್ತಿರುವುದು ರೈತರ ಚಳವಳಿ ಅಲ್ಲ. ಅದರ ಮುಖವಾಡದಲ್ಲಿ ಇನ್ನೇನೋ ನಡೆಯುತ್ತಿದೆ. ಇದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

“ಪ್ರಧಾನಿಯವರು ಚಳುವಳಿ ನಿರತರನ್ನು ಮಾತುಕತೆಗೆ ಬರುವಂತೆ ಕರೆಯುತ್ತಲೇ ಇದ್ದಾರೆ. ಆದರೆ ಇದಕ್ಕೆ ಒಪ್ಪದೆ ಇನ್ನೇನೋ ಮಾಡಬೇಕು ಎಂದು ಅವರು ಹೇಳುತ್ತಿರುವುದರಿಂದ ಚಳುವಳಿ ದಿಕ್ಕು ತಪ್ಪಿದೆ. ಹೀಗಾಗಿ ಈ ಚಳುವಳಿಗೆ ನಮ್ಮ ಸಂಪೂರ್ಣ ಸಹಮತ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

“ಮಾಧ್ಯಮಗಳಲ್ಲಿ ಬಿತ್ತರವಾಗುವ ದೈನಂದಿನ ಸುದ್ಧಿ ನೋಡಿದರೆ ರೈತರೇ ಚಳವಳಿ ಮಾಡುತ್ತಿದ್ದಾರೆಯೇ ಎಂಬುದರ ಬಗ್ಗೆ ನಮಗೆ ಸಂಶಯ ಇದೆ. ಮಾಧ್ಯಮಗಳನ್ನು ನೋಡಿ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಹೋರಾಟಗಾರರು ಹೇಳುವ ಪ್ರಕಾರ,ಸುದ್ದಿ ಮಾಡುತ್ತಿರುವವರು ಮಾಧ್ಯಮದವರಲ್ಲ ಅವರು ಬಿಜೆಪಿಯವರು..

  2. ರೈತರ ಚಳುವಳಿಗೆ ನಿಮ್ಮಂಥ ಮೂರ್ಖರ ಅವಶ್ಯಕತೆ ಇಲ್ಲ, ಸಾರ್ವಜನಿಕವಾಗಿ ಮಾತನಾಡುವಾಗ ಜವಾಬ್ದಾರಿ ಹಾಗೂ ನಿಮ್ಮ ಇತಿ ಮಿತಿಗಳನ್ನು ಅರಿತು ಮಾತನಾಡಿದರೆ ಸರ್ವರಿಗೂ ಒಳಿತು….

  3. ಇವ ಯಾವ ಸೀಮೆಯ ಸ್ವಾಮಿ?
    ತನ್ನ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಟಿವಿಯಲ್ಲಿ ನೋಡಿ ಉತ್ತರಿಸುವವ.
    ಅಷ್ಟೊಂದು ಜವಾಬ್ದಾರಿ ಇದ್ದರೆ ಸ್ವತಃ ದೆಹಲಿಗೆ ಹೋಗಿ ಬರಬೇಕಿತ್ತು.

  4. ಇವರು ಹೇಳುವ ಮಾಧ್ಯಮಗಳ ಕಾರ್ಯವೈಖರಿ ನೋಡಿದ್ರೆ ಅವು ಮಾಧ್ಯಮಗಳಾ ಅಥವಾ ಭಯೋದ್ಪಕರಾ ಅಂತ ಸಂಶಯ ಬರುತ್ದೆ. ಇವರಿಗೇನು ಸ್ವಂತ ಆಲೋಚನಾ ಶಕ್ತಿಯಿಲ್ಲವಾ ?

  5. ಸ್ವಾಮಿಜಿ, ನೀವೂ ನಿಮ್ಮ ದಿವಂಗತ ಪೇಜಾವರ ಸ್ವಾಮಿಗಿಂತಾ ಭಿನ್ನರೇನಲ್ಲ . ನೀವೂ ಅರೆಸ್ಸೆಸ್ ಏಜಂಟ್ ಅಷ್ಟೇ. ದಿಲ್ಲಿಯ ಕೊರೆಯುವ ಚಳಿಯಲ್ಲಿ ನೀವು ಕೇವಲ ಒಂದೇ ಒಂದು ರಾತ್ರಿ ಇರಿ, ಅಷ್ಟೇ ಸಾಕು. ಯಾರು ರೈತರು ಎಂದು ನಿಮ್ಮ ಪೂರ್ವಗ್ರಹ ಪೀಡಿತ ಬುದ್ದಿಗೆ ಗೊತ್ತಾಗುತ್ತದೆ.

  6. ತಾವು ಉಣ್ಣುವ ಅನ್ನ ರೈತರಿಂದಲೇ ಬೆಳೆದದ್ದು ಅನ್ನುವುದನ್ನು ಸ್ವಾಮಿಗಳು ಮರೆತಂತೆ ಕಾಣುತ್ತದೆ. ಸ್ವಾಮಿಗಳು ಕೆಲಸ ನೋಡಿಕೊಳ್ಳುವುದು ಒಳಿತು. ರೈತರ ಕಷ್ಟ ರೈತರಿಗೇ ಗೊತ್ತು. ಅನಗತ್ಯವಾಗಿ ಎಲ್ಲದರಲ್ಲೂ ಮೂಗು ತೂರಿಸಬಾರಸದು

  7. ಅದೇ ಮತ್ತೆ ಇವರು ಹೇಳಿಕೆಯನ್ನು ನೋಡಿದರೆ ಯಾವುದೋ ರಾಜಕೀಯ ಪಕ್ಷದ ಕುಮ್ಮಕ್ಕಿನಿಂದಲೋ ಅಥವಾ ಪರವಾಗಿಯೋ ಮಾತನಾಡುತ್ತಿದ್ದಾರೆ ಅನಿಸುತ್ತೆ. ಈ ರೀತಿಯ ರಾಜಕೀಯ ಪ್ರೇರಿತ ಸ್ವಾಮೀಜಿಗಳು ದೇಶಕ್ಕೆ ಅಲ್ಲ ನಮ್ಮ ಸಮಾಜಕ್ಕೂ ಹಾನಿಕರ.

  8. ಮಾಧ್ಯಮಗಳು ನಿಮ್ಮನ್ನು ನಿಮ್ಮ ಮಠವನ್ನು ಕಳ್ಳರಂತೆ ತೋರಿಸಿದ್ದುದ್ದನ್ನು ನೆನಪಿಸಿಕೊಂಡರೆ, ನೀವೆಲ್ಲರೂ ಕಳ್ಳರೆ ಇರಬೇಕೆನಿಸುತಿದೆ.

  9. ಇವತ್ತಿನ ಮಾಧ್ಯಮಗಳು ಹೇಳುವ ಬೊಗಳೆಯನ್ನು ಕೇಳುವಷ್ಟು ದಡ್ಡರೆ ಪೇಜಾವರ ಶ್ರೀಗಳು..?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...