Homeಕರ್ನಾಟಕಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

- Advertisement -
- Advertisement -

“ಮಾಧ್ಯಮಗಳು ಬಿತ್ತರಿಸುತ್ತಿರುವುದನ್ನು ನೋಡಿದರೆ, ಅಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ ಎನಿಸುತ್ತದೆ” ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ರೈತರ ಚಳವಳಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, “ನಮಗೆ ತಿಳಿದಂತೆ ಇಂದು ದೇಶದಲ್ಲಿ ನಡೆಯುತ್ತಿರುವುದು ರೈತರ ಚಳವಳಿ ಅಲ್ಲ. ಅದರ ಮುಖವಾಡದಲ್ಲಿ ಇನ್ನೇನೋ ನಡೆಯುತ್ತಿದೆ. ಇದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

“ಪ್ರಧಾನಿಯವರು ಚಳುವಳಿ ನಿರತರನ್ನು ಮಾತುಕತೆಗೆ ಬರುವಂತೆ ಕರೆಯುತ್ತಲೇ ಇದ್ದಾರೆ. ಆದರೆ ಇದಕ್ಕೆ ಒಪ್ಪದೆ ಇನ್ನೇನೋ ಮಾಡಬೇಕು ಎಂದು ಅವರು ಹೇಳುತ್ತಿರುವುದರಿಂದ ಚಳುವಳಿ ದಿಕ್ಕು ತಪ್ಪಿದೆ. ಹೀಗಾಗಿ ಈ ಚಳುವಳಿಗೆ ನಮ್ಮ ಸಂಪೂರ್ಣ ಸಹಮತ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

“ಮಾಧ್ಯಮಗಳಲ್ಲಿ ಬಿತ್ತರವಾಗುವ ದೈನಂದಿನ ಸುದ್ಧಿ ನೋಡಿದರೆ ರೈತರೇ ಚಳವಳಿ ಮಾಡುತ್ತಿದ್ದಾರೆಯೇ ಎಂಬುದರ ಬಗ್ಗೆ ನಮಗೆ ಸಂಶಯ ಇದೆ. ಮಾಧ್ಯಮಗಳನ್ನು ನೋಡಿ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಹೋರಾಟಗಾರರು ಹೇಳುವ ಪ್ರಕಾರ,ಸುದ್ದಿ ಮಾಡುತ್ತಿರುವವರು ಮಾಧ್ಯಮದವರಲ್ಲ ಅವರು ಬಿಜೆಪಿಯವರು..

  2. ರೈತರ ಚಳುವಳಿಗೆ ನಿಮ್ಮಂಥ ಮೂರ್ಖರ ಅವಶ್ಯಕತೆ ಇಲ್ಲ, ಸಾರ್ವಜನಿಕವಾಗಿ ಮಾತನಾಡುವಾಗ ಜವಾಬ್ದಾರಿ ಹಾಗೂ ನಿಮ್ಮ ಇತಿ ಮಿತಿಗಳನ್ನು ಅರಿತು ಮಾತನಾಡಿದರೆ ಸರ್ವರಿಗೂ ಒಳಿತು….

  3. ಇವ ಯಾವ ಸೀಮೆಯ ಸ್ವಾಮಿ?
    ತನ್ನ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಟಿವಿಯಲ್ಲಿ ನೋಡಿ ಉತ್ತರಿಸುವವ.
    ಅಷ್ಟೊಂದು ಜವಾಬ್ದಾರಿ ಇದ್ದರೆ ಸ್ವತಃ ದೆಹಲಿಗೆ ಹೋಗಿ ಬರಬೇಕಿತ್ತು.

  4. ಇವರು ಹೇಳುವ ಮಾಧ್ಯಮಗಳ ಕಾರ್ಯವೈಖರಿ ನೋಡಿದ್ರೆ ಅವು ಮಾಧ್ಯಮಗಳಾ ಅಥವಾ ಭಯೋದ್ಪಕರಾ ಅಂತ ಸಂಶಯ ಬರುತ್ದೆ. ಇವರಿಗೇನು ಸ್ವಂತ ಆಲೋಚನಾ ಶಕ್ತಿಯಿಲ್ಲವಾ ?

  5. ಸ್ವಾಮಿಜಿ, ನೀವೂ ನಿಮ್ಮ ದಿವಂಗತ ಪೇಜಾವರ ಸ್ವಾಮಿಗಿಂತಾ ಭಿನ್ನರೇನಲ್ಲ . ನೀವೂ ಅರೆಸ್ಸೆಸ್ ಏಜಂಟ್ ಅಷ್ಟೇ. ದಿಲ್ಲಿಯ ಕೊರೆಯುವ ಚಳಿಯಲ್ಲಿ ನೀವು ಕೇವಲ ಒಂದೇ ಒಂದು ರಾತ್ರಿ ಇರಿ, ಅಷ್ಟೇ ಸಾಕು. ಯಾರು ರೈತರು ಎಂದು ನಿಮ್ಮ ಪೂರ್ವಗ್ರಹ ಪೀಡಿತ ಬುದ್ದಿಗೆ ಗೊತ್ತಾಗುತ್ತದೆ.

  6. ತಾವು ಉಣ್ಣುವ ಅನ್ನ ರೈತರಿಂದಲೇ ಬೆಳೆದದ್ದು ಅನ್ನುವುದನ್ನು ಸ್ವಾಮಿಗಳು ಮರೆತಂತೆ ಕಾಣುತ್ತದೆ. ಸ್ವಾಮಿಗಳು ಕೆಲಸ ನೋಡಿಕೊಳ್ಳುವುದು ಒಳಿತು. ರೈತರ ಕಷ್ಟ ರೈತರಿಗೇ ಗೊತ್ತು. ಅನಗತ್ಯವಾಗಿ ಎಲ್ಲದರಲ್ಲೂ ಮೂಗು ತೂರಿಸಬಾರಸದು

  7. ಅದೇ ಮತ್ತೆ ಇವರು ಹೇಳಿಕೆಯನ್ನು ನೋಡಿದರೆ ಯಾವುದೋ ರಾಜಕೀಯ ಪಕ್ಷದ ಕುಮ್ಮಕ್ಕಿನಿಂದಲೋ ಅಥವಾ ಪರವಾಗಿಯೋ ಮಾತನಾಡುತ್ತಿದ್ದಾರೆ ಅನಿಸುತ್ತೆ. ಈ ರೀತಿಯ ರಾಜಕೀಯ ಪ್ರೇರಿತ ಸ್ವಾಮೀಜಿಗಳು ದೇಶಕ್ಕೆ ಅಲ್ಲ ನಮ್ಮ ಸಮಾಜಕ್ಕೂ ಹಾನಿಕರ.

  8. ಮಾಧ್ಯಮಗಳು ನಿಮ್ಮನ್ನು ನಿಮ್ಮ ಮಠವನ್ನು ಕಳ್ಳರಂತೆ ತೋರಿಸಿದ್ದುದ್ದನ್ನು ನೆನಪಿಸಿಕೊಂಡರೆ, ನೀವೆಲ್ಲರೂ ಕಳ್ಳರೆ ಇರಬೇಕೆನಿಸುತಿದೆ.

  9. ಇವತ್ತಿನ ಮಾಧ್ಯಮಗಳು ಹೇಳುವ ಬೊಗಳೆಯನ್ನು ಕೇಳುವಷ್ಟು ದಡ್ಡರೆ ಪೇಜಾವರ ಶ್ರೀಗಳು..?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...