Homeಕರ್ನಾಟಕಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

- Advertisement -
- Advertisement -

“ಮಾಧ್ಯಮಗಳು ಬಿತ್ತರಿಸುತ್ತಿರುವುದನ್ನು ನೋಡಿದರೆ, ಅಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ ಎನಿಸುತ್ತದೆ” ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ರೈತರ ಚಳವಳಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, “ನಮಗೆ ತಿಳಿದಂತೆ ಇಂದು ದೇಶದಲ್ಲಿ ನಡೆಯುತ್ತಿರುವುದು ರೈತರ ಚಳವಳಿ ಅಲ್ಲ. ಅದರ ಮುಖವಾಡದಲ್ಲಿ ಇನ್ನೇನೋ ನಡೆಯುತ್ತಿದೆ. ಇದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

“ಪ್ರಧಾನಿಯವರು ಚಳುವಳಿ ನಿರತರನ್ನು ಮಾತುಕತೆಗೆ ಬರುವಂತೆ ಕರೆಯುತ್ತಲೇ ಇದ್ದಾರೆ. ಆದರೆ ಇದಕ್ಕೆ ಒಪ್ಪದೆ ಇನ್ನೇನೋ ಮಾಡಬೇಕು ಎಂದು ಅವರು ಹೇಳುತ್ತಿರುವುದರಿಂದ ಚಳುವಳಿ ದಿಕ್ಕು ತಪ್ಪಿದೆ. ಹೀಗಾಗಿ ಈ ಚಳುವಳಿಗೆ ನಮ್ಮ ಸಂಪೂರ್ಣ ಸಹಮತ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

“ಮಾಧ್ಯಮಗಳಲ್ಲಿ ಬಿತ್ತರವಾಗುವ ದೈನಂದಿನ ಸುದ್ಧಿ ನೋಡಿದರೆ ರೈತರೇ ಚಳವಳಿ ಮಾಡುತ್ತಿದ್ದಾರೆಯೇ ಎಂಬುದರ ಬಗ್ಗೆ ನಮಗೆ ಸಂಶಯ ಇದೆ. ಮಾಧ್ಯಮಗಳನ್ನು ನೋಡಿ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಹೋರಾಟಗಾರರು ಹೇಳುವ ಪ್ರಕಾರ,ಸುದ್ದಿ ಮಾಡುತ್ತಿರುವವರು ಮಾಧ್ಯಮದವರಲ್ಲ ಅವರು ಬಿಜೆಪಿಯವರು..

  2. ರೈತರ ಚಳುವಳಿಗೆ ನಿಮ್ಮಂಥ ಮೂರ್ಖರ ಅವಶ್ಯಕತೆ ಇಲ್ಲ, ಸಾರ್ವಜನಿಕವಾಗಿ ಮಾತನಾಡುವಾಗ ಜವಾಬ್ದಾರಿ ಹಾಗೂ ನಿಮ್ಮ ಇತಿ ಮಿತಿಗಳನ್ನು ಅರಿತು ಮಾತನಾಡಿದರೆ ಸರ್ವರಿಗೂ ಒಳಿತು….

  3. ಇವ ಯಾವ ಸೀಮೆಯ ಸ್ವಾಮಿ?
    ತನ್ನ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಟಿವಿಯಲ್ಲಿ ನೋಡಿ ಉತ್ತರಿಸುವವ.
    ಅಷ್ಟೊಂದು ಜವಾಬ್ದಾರಿ ಇದ್ದರೆ ಸ್ವತಃ ದೆಹಲಿಗೆ ಹೋಗಿ ಬರಬೇಕಿತ್ತು.

  4. ಇವರು ಹೇಳುವ ಮಾಧ್ಯಮಗಳ ಕಾರ್ಯವೈಖರಿ ನೋಡಿದ್ರೆ ಅವು ಮಾಧ್ಯಮಗಳಾ ಅಥವಾ ಭಯೋದ್ಪಕರಾ ಅಂತ ಸಂಶಯ ಬರುತ್ದೆ. ಇವರಿಗೇನು ಸ್ವಂತ ಆಲೋಚನಾ ಶಕ್ತಿಯಿಲ್ಲವಾ ?

  5. ಸ್ವಾಮಿಜಿ, ನೀವೂ ನಿಮ್ಮ ದಿವಂಗತ ಪೇಜಾವರ ಸ್ವಾಮಿಗಿಂತಾ ಭಿನ್ನರೇನಲ್ಲ . ನೀವೂ ಅರೆಸ್ಸೆಸ್ ಏಜಂಟ್ ಅಷ್ಟೇ. ದಿಲ್ಲಿಯ ಕೊರೆಯುವ ಚಳಿಯಲ್ಲಿ ನೀವು ಕೇವಲ ಒಂದೇ ಒಂದು ರಾತ್ರಿ ಇರಿ, ಅಷ್ಟೇ ಸಾಕು. ಯಾರು ರೈತರು ಎಂದು ನಿಮ್ಮ ಪೂರ್ವಗ್ರಹ ಪೀಡಿತ ಬುದ್ದಿಗೆ ಗೊತ್ತಾಗುತ್ತದೆ.

  6. ತಾವು ಉಣ್ಣುವ ಅನ್ನ ರೈತರಿಂದಲೇ ಬೆಳೆದದ್ದು ಅನ್ನುವುದನ್ನು ಸ್ವಾಮಿಗಳು ಮರೆತಂತೆ ಕಾಣುತ್ತದೆ. ಸ್ವಾಮಿಗಳು ಕೆಲಸ ನೋಡಿಕೊಳ್ಳುವುದು ಒಳಿತು. ರೈತರ ಕಷ್ಟ ರೈತರಿಗೇ ಗೊತ್ತು. ಅನಗತ್ಯವಾಗಿ ಎಲ್ಲದರಲ್ಲೂ ಮೂಗು ತೂರಿಸಬಾರಸದು

  7. ಅದೇ ಮತ್ತೆ ಇವರು ಹೇಳಿಕೆಯನ್ನು ನೋಡಿದರೆ ಯಾವುದೋ ರಾಜಕೀಯ ಪಕ್ಷದ ಕುಮ್ಮಕ್ಕಿನಿಂದಲೋ ಅಥವಾ ಪರವಾಗಿಯೋ ಮಾತನಾಡುತ್ತಿದ್ದಾರೆ ಅನಿಸುತ್ತೆ. ಈ ರೀತಿಯ ರಾಜಕೀಯ ಪ್ರೇರಿತ ಸ್ವಾಮೀಜಿಗಳು ದೇಶಕ್ಕೆ ಅಲ್ಲ ನಮ್ಮ ಸಮಾಜಕ್ಕೂ ಹಾನಿಕರ.

  8. ಮಾಧ್ಯಮಗಳು ನಿಮ್ಮನ್ನು ನಿಮ್ಮ ಮಠವನ್ನು ಕಳ್ಳರಂತೆ ತೋರಿಸಿದ್ದುದ್ದನ್ನು ನೆನಪಿಸಿಕೊಂಡರೆ, ನೀವೆಲ್ಲರೂ ಕಳ್ಳರೆ ಇರಬೇಕೆನಿಸುತಿದೆ.

  9. ಇವತ್ತಿನ ಮಾಧ್ಯಮಗಳು ಹೇಳುವ ಬೊಗಳೆಯನ್ನು ಕೇಳುವಷ್ಟು ದಡ್ಡರೆ ಪೇಜಾವರ ಶ್ರೀಗಳು..?

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...