ಆರೆಸ್ಸೆಸ್ಸ್ ಅನ್ನು ಪ್ರಶ್ನೆ ಮಾಡಿದರೆ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದು, ಆರೆಸ್ಸೆಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಎಂದು ಕೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು, ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.
ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ
“ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳು ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.
“ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ” ಎಂದು ಅವರು ಕೇಳಿದ್ದಾರೆ.
“ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ
“ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?” ಎಂದು ಅವರು ಪ್ರಶ್ನಿಸಿದ್ದಾರೆ.
“ಹಿಂದೂಗಳೆಲ್ಲ ಒಂದು ಎಂದು ಕಂಠ ಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ?
ಹಿಂದೂ ಧರ್ಮದೊಳಗಿನ ಅನಿಷ್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?” ಎಂದು ಅವರು ಹೇಳಿದ್ದಾರೆ.
“ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಆರ್.ಎಸ್.ಎಸ್ ನಾಯಕರೇ ಹೇಳಿ” ಎಂದು ಅವರು ಕೇಳಿದ್ದಾರೆ.
ಇದನ್ನೂ ಓದಿ: ಆರ್ಎಸ್ಎಸ್ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ
“ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ” ಎಂದು ಸವಾಲೆಸೆದಿದ್ದಾರೆ.



ನಿಮ್ಮ ಕಾಂಗ್ರೆಸ್ ಸರಿ ಇದ್ದಿದ್ದರೆ ಬಿಜೆಪಿ, ಆರ್ಎಸ್ಎಸ್ ಈ ಮಟ್ಟಕ್ಕೆ ಯಾಕೆ ಬೆಳೆಯುತ್ತಿತ್ತು.
ಹುಳುಕು ನಿಮ್ಮ ಪಕ್ಷದಲ್ಲೇ ಇದೆ.
Congress,App, all leftists..are bad
..so BJP is better than all anti communals,divide nature’s,guts less ,afraid of particular community for vote Bank, RSS is better than all these goonda patriotism.