Homeಕರ್ನಾಟಕಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್ಸನ್ನು ಪ್ರಶ್ನೆ ಮಾಡಿದರೆ BJP ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ

- Advertisement -
- Advertisement -

ಆರೆಸ್ಸೆಸ್ಸ್ ಅನ್ನು ಪ್ರಶ್ನೆ ಮಾಡಿದರೆ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದು, ಆರೆಸ್ಸೆಸ್‌‌ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಎಂದು ಕೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು, ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

“ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳು ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ” ಎಂದು ಅವರು ಕೇಳಿದ್ದಾರೆ.

“ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದೂಗಳೆಲ್ಲ ಒಂದು ಎಂದು ಕಂಠ ಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ?
ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?” ಎಂದು ಅವರು ಹೇಳಿದ್ದಾರೆ.

“ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಆರ್.ಎಸ್.ಎಸ್ ನಾಯಕರೇ ಹೇಳಿ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

“ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ” ಎಂದು ಸವಾಲೆಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮ್ಮ ಕಾಂಗ್ರೆಸ್ ಸರಿ ಇದ್ದಿದ್ದರೆ ಬಿಜೆಪಿ, ಆರ್‌ಎಸ್‌ಎಸ್ ಈ ಮಟ್ಟಕ್ಕೆ ಯಾಕೆ ಬೆಳೆಯುತ್ತಿತ್ತು.
    ಹುಳುಕು ನಿಮ್ಮ ಪಕ್ಷದಲ್ಲೇ ಇದೆ.

  2. Congress,App, all leftists..are bad
    ..so BJP is better than all anti communals,divide nature’s,guts less ,afraid of particular community for vote Bank, RSS is better than all these goonda patriotism.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...