Homeಕರ್ನಾಟಕಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್ಸನ್ನು ಪ್ರಶ್ನೆ ಮಾಡಿದರೆ BJP ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ

- Advertisement -
- Advertisement -

ಆರೆಸ್ಸೆಸ್ಸ್ ಅನ್ನು ಪ್ರಶ್ನೆ ಮಾಡಿದರೆ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದು, ಆರೆಸ್ಸೆಸ್‌‌ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಎಂದು ಕೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು, ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

“ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳು ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ” ಎಂದು ಅವರು ಕೇಳಿದ್ದಾರೆ.

“ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದೂಗಳೆಲ್ಲ ಒಂದು ಎಂದು ಕಂಠ ಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ?
ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?” ಎಂದು ಅವರು ಹೇಳಿದ್ದಾರೆ.

“ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಆರ್.ಎಸ್.ಎಸ್ ನಾಯಕರೇ ಹೇಳಿ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

“ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ” ಎಂದು ಸವಾಲೆಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮ್ಮ ಕಾಂಗ್ರೆಸ್ ಸರಿ ಇದ್ದಿದ್ದರೆ ಬಿಜೆಪಿ, ಆರ್‌ಎಸ್‌ಎಸ್ ಈ ಮಟ್ಟಕ್ಕೆ ಯಾಕೆ ಬೆಳೆಯುತ್ತಿತ್ತು.
    ಹುಳುಕು ನಿಮ್ಮ ಪಕ್ಷದಲ್ಲೇ ಇದೆ.

  2. Congress,App, all leftists..are bad
    ..so BJP is better than all anti communals,divide nature’s,guts less ,afraid of particular community for vote Bank, RSS is better than all these goonda patriotism.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...