Homeಕರ್ನಾಟಕಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್ಸನ್ನು ಪ್ರಶ್ನೆ ಮಾಡಿದರೆ BJP ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ

- Advertisement -
- Advertisement -

ಆರೆಸ್ಸೆಸ್ಸ್ ಅನ್ನು ಪ್ರಶ್ನೆ ಮಾಡಿದರೆ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದು, ಆರೆಸ್ಸೆಸ್‌‌ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಎಂದು ಕೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು, ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

“ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳು ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ” ಎಂದು ಅವರು ಕೇಳಿದ್ದಾರೆ.

“ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದೂಗಳೆಲ್ಲ ಒಂದು ಎಂದು ಕಂಠ ಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ?
ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?” ಎಂದು ಅವರು ಹೇಳಿದ್ದಾರೆ.

“ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಆರ್.ಎಸ್.ಎಸ್ ನಾಯಕರೇ ಹೇಳಿ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

“ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ” ಎಂದು ಸವಾಲೆಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮ್ಮ ಕಾಂಗ್ರೆಸ್ ಸರಿ ಇದ್ದಿದ್ದರೆ ಬಿಜೆಪಿ, ಆರ್‌ಎಸ್‌ಎಸ್ ಈ ಮಟ್ಟಕ್ಕೆ ಯಾಕೆ ಬೆಳೆಯುತ್ತಿತ್ತು.
    ಹುಳುಕು ನಿಮ್ಮ ಪಕ್ಷದಲ್ಲೇ ಇದೆ.

  2. Congress,App, all leftists..are bad
    ..so BJP is better than all anti communals,divide nature’s,guts less ,afraid of particular community for vote Bank, RSS is better than all these goonda patriotism.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...