Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...