Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...