Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...