Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...