Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...