Homeಮುಖಪುಟಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

ಒಪ್ಪಿಗೆ ಪಡೆಯದೆ ಅಟಲ್ ಪಿಂಚಣಿ ಯೋಜನೆಯಡಿ ಖಾತೆ ತೆರೆದ ಬ್ಯಾಂಕ್‌ಗಳು: ತಿರಸ್ಕರಿಸಿದ ಶೇ.32ರಷ್ಟು ಚಂದಾದಾರರು

- Advertisement -
- Advertisement -

ಅಸಂಘಟಿತ ವಲಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (ಎಪಿವೈ) ಯ ಪ್ರತಿ ಮೂವರು ಚಂದಾದಾರಲ್ಲಿ ಒಬ್ಬರು ಯೋಜನೆಯಿಂದ ಹೊರಗುಳಿದಿದ್ದಾರೆ. ಚಂದಾದಾರ ಅನುಮತಿ ಪಡೆಯದೆ ಖಾತೆಗಳನ್ನು ತೆರೆದಿರುವುದೇ ಇದಕ್ಕೆ ಕಾರಣ ಎಂಬುವುದು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ (ಐಸಿಎಸ್ಎಸ್‌ಆರ್‌) ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ತೋರಿಸಿದೆ. ಬ್ಯಾಂಕ್ ಉದ್ಯೋಗಿಗಳು ತಮಗೆ ನಿಗದಿಪಡಿಸಿದ ದಾಖಲಾತಿ ಗುರಿ ಸಾಧಿಸಲು ಹೀಗೆ ಮಾಡಿದ್ದಾರೆ ಎಂದು business-standard.com ವರದಿ ಮಾಡಿದೆ.

ಶೇ.32ರಷ್ಟು ಚಂದಾದಾರರು ಬ್ಯಾಂಕ್ ತಮ್ಮ ಅನುಮತಿಯಿಲ್ಲದೆ ಖಾತೆಗಳನ್ನು ತೆರೆದಿದ್ದಕ್ಕಾಗಿ ಯೋಜನೆಯಿಂದ ಹೊರನಡೆದಿದ್ದರೆ, ಶೇ.38ರಷ್ಟು ಚಂದಾದಾರರು ಹಣದ ಅಗತ್ಯಕ್ಕಾಗಿ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಶೇ.15ರಷ್ಟು ಚಂದಾದಾರರ ಬಳಿ ಖಾತೆಗಳನ್ನು ನಿರ್ವಹಿಸಲು ಹಣವಿರಲಿಲ್ಲ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಸರ್ಕಾರದ ಚಿಂತಕರ ಚಾವಡಿ ಐಸಿಎಸ್‌ಎಸ್‌ಆರ್‌ನ ಅಧ್ಯಯನವು ಪಿಎಂ ಉಜ್ವಲಾ, ಪಿಎಂ ಆವಾಸ್, ದೀನ್‌ದಯಾಳ್‌ ಅಂತ್ಯೋದಯ ಮತ್ತು ಪಿಎಂ ಕೃಷಿ ಸಿಂಚಾಯಿ ಯೋಜನೆಗಳಂತಹ ಸರ್ಕಾರ 31 ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಅಧ್ಯಯನಕ್ಕಾಗಿ ದೇಶವ್ಯಾಪಿ ಪ್ರಕ್ರಿಯೆಯ ಭಾಗವಾಗಿದೆ.

ಅಧ್ಯಯನವು ಯೋಜನೆ ಕುರಿತು ಜಾಗೃತಿ ಮಟ್ಟವನ್ನು ತಿಳಿದುಕೊಳ್ಳಲು, ಎಪಿವೈ ಖಾತೆಗಳ ಲಭ್ಯತೆ ಮತ್ತು ನಿರ್ವಹಣೆಯಲ್ಲಿ ಚಂದಾದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಮತ್ತು ಯೋಜನೆಯಿಂದ ಅವರು ಹೊರಗುಳಿಯಲು ಕಾರಣಗಳ ಮೌಲ್ಯಮಾಪನಕ್ಕಾಗಿ ಉತ್ತರ ಪ್ರದೇಶದ ಪ್ರಯಾಗರಾಜ್ ವಿಭಾಗದಲ್ಲಿ 2,461 ಜನರನ್ನು ಸಮೀಕ್ಷೆಗೊಳಪಡಿಸಿತ್ತು. ಈ ವೇಳೆ 342 ಚಂದಾದಾರರ ಪೈಕಿ 119 ಜನರು ಯೋಜನೆಯಿಂದ ಹೊರನಡೆದಿರುವುದು ಬೆಳಕಿಗೆ ಬಂದಿದೆ.

1 ಸಾವಿರ ರೂ.ಗಳ ಕನಿಷ್ಠ ಮಟ್ಟದಲ್ಲಿ ಚಂದಾದಾರರ ಸಂಖ್ಯೆ ಅಧಿಕವಾಗಿದೆ ಎನ್ನುವುದನ್ನು ಗಮನಿಸಿರುವ ಅಧ್ಯಯನವು, ಮಾಸಿಕ ದೇಣಿಗೆ ಕಡಿಮೆಯಿರುವುದರಿಂದ ಚಂದಾದಾರರು ಆ ಬಗ್ಗೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ ಎನ್ನುವುದು ಇದಕ್ಕೆ ಕಾರಣ ಎಂದು ಬೆಟ್ಟು ಮಾಡಿದೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಿಸುವ ಮತ್ತು ಅಧ್ಯಯನದ ಪ್ರಮುಖ ಲೇಖಕರಾದ ತನುಜ್ ನಂದನ್ ಅವರು, “ಕಡಿಮೆ ಪಿಂಚಣಿ ಸ್ಲ್ಯಾಬ್‌ಗಳಲ್ಲಿ ಚಂದಾದಾರ ಸಂಖ್ಯೆ ವರ್ಷಗಳಿಂದ ಸತತವಾಗಿ ಹೆಚ್ಚಳವಾಗ್ತಿದೆ. ಹೀಗಾಗಿ ಇತರ ಪಿಂಚಣಿ ಸ್ಲ್ಯಾಬ್‌ಗಳು ಹೆಚ್ಚಾಗಿ ಅಸಮಂಜಸವಾಗಿದೆ ಎಂದಿದ್ದಾರೆ.

ಬ್ಯಾಂಕಿಂಗ್ ಏಜೆಂಟ್‌ಗಳು ಗುರಿ ಸಾಧನೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಅನುಮತಿಯಿಲ್ಲದೆ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಚಂದಾದಾರರ ಖಾತೆಗಳಿಂದ ಸ್ವಲ್ಪ ಮೊತ್ತದ ಹಣ ಕಡಿತವಾಗುವುದರಿಂದ ಅದರ ಬಗ್ಗೆ ಅವರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಅದು ಅವರ ಗಮನಕ್ಕೂ ಬರುವುದಿಲ್ಲ. ಇದು ಬ್ಯಾಂಕ್‌ ಸಿಬ್ಬಂದಿ ಮಾಹಿತಿ ನೀಡದೆ ಖಾತೆ ತೆರೆಯಲು ಸಹಕಾರಿಯಾಗಿದೆ.

ಯೋಜನೆಯಡಿಯಲ್ಲಿ, ಚಂದಾದಾರರು 19 ವರ್ಷ ವಯಸ್ಸಿನಲ್ಲಿ ರೂ 1,000 ಪಿಂಚಣಿ ಸ್ಲ್ಯಾಬ್‌ಗೆ ರೂ 46 ರ ಮಾಸಿಕ ಕೊಡುಗೆಯನ್ನು ನೀಡಬೇಕು. ರೂ 5,000 ಪಿಂಚಣಿಗೆ ರೂ 228 ಗೆ ಹೋಲಿಸಿದರೆ ಇದು ತುಂಬಾ ಕಡಿಮೆ. ಹಾಗಾಗಿ, 46 ರೂ. ಖಾತೆಯಿಂದ ಕಡಿತಗೊಳ್ಳುವುದು ಚಂದಾದಾರರಿಗೆ ಗೊತ್ತಾಗುವುದಿಲ್ಲ.

ರಾಷ್ಟ್ರೀಯ ಮಟ್ಟದಲ್ಲಿ ಎಪಿವೈ ಖಾತೆಗಳ ಬಗ್ಗೆ ಅಧ್ಯಯನವು ಗಮನಿಸಿದೆ, ತಿಂಗಳಿಗೆ ರೂ 1,000 ಪಿಂಚಣಿ ಸ್ಲ್ಯಾಬ್‌ನಲ್ಲಿನ ಖಾತೆಗಳ ಪಾಲು ಹಣಕಾಸು ವರ್ಷ 16 ರ ಶೇಕಡಾ 38.6 ರಿಂದ ಹಣಕಾಸು ವರ್ಷ 23ಕ್ಕೆ ಶೇಕಡಾ 82.6 ಕ್ಕೆ ಹೆಚ್ಚಾಗಿದೆ. ಇದೇ ವೇಳೆ 5,000 ರೂ. ಪಿಂಚಣಿ ಸ್ಲ್ಯಾಬ್‌ ಖಾತೆಗಳ ಪಾಲು ಶೇ. 46 ರಿಂದ 11ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...