Homeಕರ್ನಾಟಕಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು...

ಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು ಪ್ರತಿದೂರು ದಾಖಲು

- Advertisement -
- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ದೂರು ನೀಡಿದ್ದಾರೆ.

ಡಾ.ಬಿ.ಆರ್​ ಅಂಬೇಡ್ಕರ್‌ ಅವರಿಗೆ ಅವಮಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅಂಬೇಡ್ಕರ್ ಅಭಿಮಾನಿಗಳು, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿ ಅವರ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಮೇ 18ರಂದು ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಡಾ.ಸಂಜೀವ್ ಅವರು ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಮದ್ಮನಿ ಸಾಹೂ ಅವರು, ”ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರತಿಭಟನಾಕಾರರ ವಿರುದ್ಧ ಡಾ. ಸಂಜೀವ್ ರೆಡ್ಡಿ ಪ್ರತಿದೂರು ದಾಖಲು

”ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ರೆಡ್ಡಿ ಅವರು, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಪ್ರತಿಯು ಅಂಬೇಡ್ಕರ್ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್ ನಿರ್ದೇಶಕರ ಡಾ. ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಈ ಹಿಂದೆ ಜೈನ್‌ ವಿಶ್ವವಿದ್ಯಾಲಯದಲ್ಲೂ ಅಂಬೇಡ್ಕರ್‌ಗೆ ಅವಮಾನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಏಳು ವಿದ್ಯಾರ್ಥಿಗಳು ಸೇರಿ ಕಿರು ನಾಟಕ ಪ್ರದರ್ಶಿಸಿದ್ದರು.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿತ್ತು.

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...