Homeಕರ್ನಾಟಕಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು...

ಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು ಪ್ರತಿದೂರು ದಾಖಲು

- Advertisement -
- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ದೂರು ನೀಡಿದ್ದಾರೆ.

ಡಾ.ಬಿ.ಆರ್​ ಅಂಬೇಡ್ಕರ್‌ ಅವರಿಗೆ ಅವಮಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅಂಬೇಡ್ಕರ್ ಅಭಿಮಾನಿಗಳು, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿ ಅವರ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಮೇ 18ರಂದು ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಡಾ.ಸಂಜೀವ್ ಅವರು ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಮದ್ಮನಿ ಸಾಹೂ ಅವರು, ”ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರತಿಭಟನಾಕಾರರ ವಿರುದ್ಧ ಡಾ. ಸಂಜೀವ್ ರೆಡ್ಡಿ ಪ್ರತಿದೂರು ದಾಖಲು

”ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ರೆಡ್ಡಿ ಅವರು, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಪ್ರತಿಯು ಅಂಬೇಡ್ಕರ್ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್ ನಿರ್ದೇಶಕರ ಡಾ. ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಈ ಹಿಂದೆ ಜೈನ್‌ ವಿಶ್ವವಿದ್ಯಾಲಯದಲ್ಲೂ ಅಂಬೇಡ್ಕರ್‌ಗೆ ಅವಮಾನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಏಳು ವಿದ್ಯಾರ್ಥಿಗಳು ಸೇರಿ ಕಿರು ನಾಟಕ ಪ್ರದರ್ಶಿಸಿದ್ದರು.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿತ್ತು.

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...