Homeಕರ್ನಾಟಕಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು...

ಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು ಪ್ರತಿದೂರು ದಾಖಲು

- Advertisement -
- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ದೂರು ನೀಡಿದ್ದಾರೆ.

ಡಾ.ಬಿ.ಆರ್​ ಅಂಬೇಡ್ಕರ್‌ ಅವರಿಗೆ ಅವಮಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅಂಬೇಡ್ಕರ್ ಅಭಿಮಾನಿಗಳು, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿ ಅವರ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಮೇ 18ರಂದು ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಡಾ.ಸಂಜೀವ್ ಅವರು ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಮದ್ಮನಿ ಸಾಹೂ ಅವರು, ”ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರತಿಭಟನಾಕಾರರ ವಿರುದ್ಧ ಡಾ. ಸಂಜೀವ್ ರೆಡ್ಡಿ ಪ್ರತಿದೂರು ದಾಖಲು

”ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ರೆಡ್ಡಿ ಅವರು, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಪ್ರತಿಯು ಅಂಬೇಡ್ಕರ್ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್ ನಿರ್ದೇಶಕರ ಡಾ. ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಈ ಹಿಂದೆ ಜೈನ್‌ ವಿಶ್ವವಿದ್ಯಾಲಯದಲ್ಲೂ ಅಂಬೇಡ್ಕರ್‌ಗೆ ಅವಮಾನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಏಳು ವಿದ್ಯಾರ್ಥಿಗಳು ಸೇರಿ ಕಿರು ನಾಟಕ ಪ್ರದರ್ಶಿಸಿದ್ದರು.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿತ್ತು.

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....