Homeಕರ್ನಾಟಕಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು...

ಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು ಪ್ರತಿದೂರು ದಾಖಲು

- Advertisement -
- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ದೂರು ನೀಡಿದ್ದಾರೆ.

ಡಾ.ಬಿ.ಆರ್​ ಅಂಬೇಡ್ಕರ್‌ ಅವರಿಗೆ ಅವಮಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅಂಬೇಡ್ಕರ್ ಅಭಿಮಾನಿಗಳು, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿ ಅವರ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಮೇ 18ರಂದು ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಡಾ.ಸಂಜೀವ್ ಅವರು ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಮದ್ಮನಿ ಸಾಹೂ ಅವರು, ”ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರತಿಭಟನಾಕಾರರ ವಿರುದ್ಧ ಡಾ. ಸಂಜೀವ್ ರೆಡ್ಡಿ ಪ್ರತಿದೂರು ದಾಖಲು

”ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ರೆಡ್ಡಿ ಅವರು, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಪ್ರತಿಯು ಅಂಬೇಡ್ಕರ್ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್ ನಿರ್ದೇಶಕರ ಡಾ. ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಈ ಹಿಂದೆ ಜೈನ್‌ ವಿಶ್ವವಿದ್ಯಾಲಯದಲ್ಲೂ ಅಂಬೇಡ್ಕರ್‌ಗೆ ಅವಮಾನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಏಳು ವಿದ್ಯಾರ್ಥಿಗಳು ಸೇರಿ ಕಿರು ನಾಟಕ ಪ್ರದರ್ಶಿಸಿದ್ದರು.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿತ್ತು.

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...