Homeಕರ್ನಾಟಕಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು...

ಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು ಪ್ರತಿದೂರು ದಾಖಲು

- Advertisement -
- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ದೂರು ನೀಡಿದ್ದಾರೆ.

ಡಾ.ಬಿ.ಆರ್​ ಅಂಬೇಡ್ಕರ್‌ ಅವರಿಗೆ ಅವಮಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅಂಬೇಡ್ಕರ್ ಅಭಿಮಾನಿಗಳು, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿ ಅವರ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಮೇ 18ರಂದು ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಡಾ.ಸಂಜೀವ್ ಅವರು ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಮದ್ಮನಿ ಸಾಹೂ ಅವರು, ”ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರತಿಭಟನಾಕಾರರ ವಿರುದ್ಧ ಡಾ. ಸಂಜೀವ್ ರೆಡ್ಡಿ ಪ್ರತಿದೂರು ದಾಖಲು

”ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ರೆಡ್ಡಿ ಅವರು, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಪ್ರತಿಯು ಅಂಬೇಡ್ಕರ್ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್ ನಿರ್ದೇಶಕರ ಡಾ. ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಈ ಹಿಂದೆ ಜೈನ್‌ ವಿಶ್ವವಿದ್ಯಾಲಯದಲ್ಲೂ ಅಂಬೇಡ್ಕರ್‌ಗೆ ಅವಮಾನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಏಳು ವಿದ್ಯಾರ್ಥಿಗಳು ಸೇರಿ ಕಿರು ನಾಟಕ ಪ್ರದರ್ಶಿಸಿದ್ದರು.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿತ್ತು.

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...