Homeಕರ್ನಾಟಕಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು...

ಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು ಪ್ರತಿದೂರು ದಾಖಲು

- Advertisement -
- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ದೂರು ನೀಡಿದ್ದಾರೆ.

ಡಾ.ಬಿ.ಆರ್​ ಅಂಬೇಡ್ಕರ್‌ ಅವರಿಗೆ ಅವಮಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅಂಬೇಡ್ಕರ್ ಅಭಿಮಾನಿಗಳು, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿ ಅವರ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಮೇ 18ರಂದು ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಡಾ.ಸಂಜೀವ್ ಅವರು ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಮದ್ಮನಿ ಸಾಹೂ ಅವರು, ”ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರತಿಭಟನಾಕಾರರ ವಿರುದ್ಧ ಡಾ. ಸಂಜೀವ್ ರೆಡ್ಡಿ ಪ್ರತಿದೂರು ದಾಖಲು

”ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ರೆಡ್ಡಿ ಅವರು, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಪ್ರತಿಯು ಅಂಬೇಡ್ಕರ್ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್ ನಿರ್ದೇಶಕರ ಡಾ. ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಈ ಹಿಂದೆ ಜೈನ್‌ ವಿಶ್ವವಿದ್ಯಾಲಯದಲ್ಲೂ ಅಂಬೇಡ್ಕರ್‌ಗೆ ಅವಮಾನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಏಳು ವಿದ್ಯಾರ್ಥಿಗಳು ಸೇರಿ ಕಿರು ನಾಟಕ ಪ್ರದರ್ಶಿಸಿದ್ದರು.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿತ್ತು.

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...