Homeಕರ್ನಾಟಕಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು...

ಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು ಪ್ರತಿದೂರು ದಾಖಲು

- Advertisement -
- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ದೂರು ನೀಡಿದ್ದಾರೆ.

ಡಾ.ಬಿ.ಆರ್​ ಅಂಬೇಡ್ಕರ್‌ ಅವರಿಗೆ ಅವಮಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅಂಬೇಡ್ಕರ್ ಅಭಿಮಾನಿಗಳು, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿ ಅವರ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಮೇ 18ರಂದು ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಡಾ.ಸಂಜೀವ್ ಅವರು ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಮದ್ಮನಿ ಸಾಹೂ ಅವರು, ”ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರತಿಭಟನಾಕಾರರ ವಿರುದ್ಧ ಡಾ. ಸಂಜೀವ್ ರೆಡ್ಡಿ ಪ್ರತಿದೂರು ದಾಖಲು

”ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ರೆಡ್ಡಿ ಅವರು, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಪ್ರತಿಯು ಅಂಬೇಡ್ಕರ್ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್ ನಿರ್ದೇಶಕರ ಡಾ. ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಈ ಹಿಂದೆ ಜೈನ್‌ ವಿಶ್ವವಿದ್ಯಾಲಯದಲ್ಲೂ ಅಂಬೇಡ್ಕರ್‌ಗೆ ಅವಮಾನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಏಳು ವಿದ್ಯಾರ್ಥಿಗಳು ಸೇರಿ ಕಿರು ನಾಟಕ ಪ್ರದರ್ಶಿಸಿದ್ದರು.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿತ್ತು.

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...