Homeರಾಷ್ಟ್ರೀಯಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ - ಅಫ್ರೀನ್‌ ಫಾತಿಮಾ ಯಾರು?

ಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ – ಅಫ್ರೀನ್‌ ಫಾತಿಮಾ ಯಾರು?

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಹೋರಾಟಗಾರ್ತಿ ಅಫ್ರೀನ್ ಫಾತಿಮಾ ಮತ್ತು ಅವರ ತಂದೆ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಧ್ವಂಸಗೊಳಿಸಿದ ನಂತರ, ಟ್ವಿಟರ್‌ನಲ್ಲಿ #ISTandWithAfreenFatima ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌‌ ಆಗಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ.

ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಫಾತಿಮಾ ಅವರ ತಂದೆ ಜಾವೇದ್ ಅವರೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ. ಪ್ರತಿಭಟನೆಯ ವೇಳೆ ಉದ್ರಿಕ್ತ ಜನರು ಬೈಕ್‌ಗಳು ಮತ್ತು ವಾಹನಗಳನ್ನು ಸುಟ್ಟು ಹಾಕಿದ್ದು, ಪೊಲೀಸ್ ವಾಹನವನ್ನೂ ಸುಟ್ಟು ಹಾಕಲು ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಯನ್ನು ನೆಲಸಮಗೊಳಿಸುವುದಕ್ಕೆ ಕಳೆದ ತಿಂಗಳು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರೆ, ಹಿಂಸಾಚಾರ ನಡೆದಿರುವುದನ್ನು ಇಟ್ಟು ಮನೆಯನ್ನು ನೆಲಸಮಗೊಳಿಸಲಾಗಿದೆ ಎಂದು ಜನರು ಆರೋಪಿಸಿದ್ದು, ಸರ್ಕಾರದ ಕ್ರಮವನ್ನು ‘ಅನ್ಯಾಯ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕರೆಯಲಾಗುತ್ತಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ಯಾರು ಅಫ್ರೀನ್ ಫಾತಿಮಾ?

ವಿದ್ಯಾರ್ಥಿ ಹೋರಾಟಗಾರ್ತಿಯಾಗಿರುವ ಅಫ್ರೀನ್ ಫಾತಿಮಾ ಅವರು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ.

2019-2020ರಲ್ಲಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯಲ್ಲಿ ಅಫ್ರೀನ್‌ ಫಾತಿಮಾ ಸಕ್ರಿಯರಾಗಿದ್ದರು. ಅವರು ಮುಸ್ಲಿಂ ಮಹಿಳೆಯರನ್ನು ಸಂಘಟಿಸಿ, ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಫಾತಿಮಾ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದ ಪದವಿಪೂರ್ವ ವಿದ್ಯಾರ್ಥಿಯಾಗಿರುವ ತನ್ನ ಕಿರಿಯ ಸಹೋದರಿ ಸುಮಯ್ಯಾ ಫಾತಿಮಾ ಅವರೊಂದಿಗೆ ‘ಮುಸ್ಲಿಮ ಅಲಹಾಬಾದ್’ ಎಂಬ ಅಧ್ಯಯನ ವಲಯವನ್ನು ರಚಿಸಿದ್ದರು ಎಂದು ಓಟ್‌ ಲುಕ್ ವರದಿ ಮಾಡಿದೆ.  ಪ್ರಸ್ತುತ ಸ್ಟಡಿ ಸರ್ಕಲ್‌ನಲ್ಲಿ 70 ಹುಡುಗಿಯರು ಸದಸ್ಯರಾಗಿದ್ದು, ಅವರು ವಿವಿಧ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ದೆಹಲಿಯಲ್ಲಿ ಅವರು ಕ್ರಿಯಾಶೀಲರಾಗಿದ್ದು, ಪ್ರಯಾಗ್‌ರಾಜ್‌ನ ಖುಲ್ದಾಬಾದ್‌ನ ಮನ್ಸೂರ್ ಅಲಿ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿ ಅಲ್ಲಿನ ಸಿಎಎ-ಎನ್‌ಆರ್‌ಸಿ ವಿರೋಧಿ ಆಂದೋಲನದಲ್ಲೂ ಭಾಗಿಯಾಗಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅವರ ಮೇಲಿನ ಆರೋಪಗಳೇನು?

ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾಚಾರವನ್ನು ಫಾತಿಮಾ ಅವರ ತಂದೆ ಜಾವೇದ್ ಅವರು ಸಂಘಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜಾವೇದ್ ಅವರು ‘ಬಂದ್’ಗೆ ಕರೆ ನೀಡಿದ್ದರು ಮತ್ತು ವಾಟ್ಸಾಪ್ ಸಂದೇಶಗಳ ಮೂಲಕ ಘಟನೆಯ ಸ್ಥಳಕ್ಕೆ ತಲುಪಲು ಜನರನ್ನು ಕೇಳಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾವೇದ್‌  ಅವರನ್ನು ಬಂಧಿಸಲಾಗಿದ್ದು, ಅವರ ಪತ್ನಿ ಮತ್ತು ಮಗಳನ್ನು ಸಹ ಬಂಧಿಸಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ, ಆದರೆ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಫಾತಿಮಾ ಕೂಡ ತನ್ನ ತಂದೆ ಯೋಜಿಸಿದ್ದಾರೆ ಎಂದು ಆರೋಪಿಸಲಾಗಿರುವ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸಲಾಗುತ್ತಿದೆ ವರದಿಯಾಗಿದೆ. ಹಿಂಸಾಚಾರದಲ್ಲಿ ಅವರು ಭಾಗಿಯಾಗಿರುವುದು ತನಿಖೆಯಲ್ಲಿ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳ ಬುಲ್ಡೋಜರ್ ಸಂಸ್ಕೃತಿ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ತಿರಸ್ಕರಿಸಿದ ಕುಟುಂಬ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ಫಾತಿಮಾ ಅವರ ಕುಟುಂಬ ತಿರಸ್ಕರಿಸಿದೆ. ಫಾತಿಮಾ ಅವರ ಸಹೋದರ ಮೊಹಮ್ಮದ್ ಉಮಾಮ್‌ ಅವರು, ಸಮಯಕ್ಕೆ ಸರಿಯಾಗಿ ನೋಟಿಸ್ ಸ್ವೀಕರಿಸಲಿಲ್ಲ ಎಂದು ಅವರು ಹೇಳಿದ್ದಾರೆ.

“ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರದ (ಪಿಡಿಎ)ದಿಂದ ಮನೆಯ ನಕ್ಷೆಯನ್ನು ಅಂಗೀಕರಿಸದೆ ನಿರ್ಮಿಸಲಾಗಿದೆ. ಇದಕ್ಕಾಗಿ, ಜಾವೇದ್ ಅವರಿಗೆ ಮೇ 10 ರಂದು ನೋಟಿಸ್ ನೀಡಲಾಯಿತು. ಅವರ ಸಮರ್ಥನೆಗಳನ್ನು ಪ್ರಸ್ತುತಪಡಿಸಲು ಮೇ 24ರಂದು ತಿಳಿಸುವಂತೆ ತಿಳಿಸಲಾಯಿತು. ಆದರೆ ಅವರಿಗೆ ಹೇಳಲಾಗಿರುವ ದಿನಾಂಕದಂದು ಜಾವೇದ್ ಅಥವಾ ಅವರ ವಕೀಲರು ಹಾಜರಾಗಲಿಲ್ಲ. ಈ ಬಗ್ಗೆ ಯಾವುದೇ ದಾಖಲೆಯನ್ನು ಹಾಜರುಪಡಿಸಲಾಗಿಲ್ಲ. ಮೇ 25 ರಂದು, ಕೆಡವಲು ಆದೇಶಗಳನ್ನು ನೀಡಲಾಯಿತು” ಎಂದು ಪಿಡಿಎ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಉಮಾಮ್‌ ಹೇಳುವ ಪ್ರಕಾರ ಅವರ ನಿಜವಾದ ಆಸ್ತಿ ಮಾಲಿಕರು ತಾಯಿಯಾಗಿದ್ದು, ಅವರ ಹೆಸರಿನಲ್ಲಿ ನೋಟಿಸ್ ನೀಡಲಾಗಿಲ್ಲ ಎಂದು ದಿ ವೈರ್‌ಗೆ ತಿಳಿಸಿದ್ದಾರೆ.

“ಇದಲ್ಲದೆ, ಜೂನ್ 10 ರಂದು ನೋಟಿಸ್‌ ನೀಡಲಾಗಿದೆ. ಆದರೆ ಜೂನ್ 10 ರಿಂದ ಪೊಲೀಸರು ನಿರಂತರವಾಗಿ ಮನೆಯಲ್ಲಿದ್ದರೂ ಜೂನ್ 11 ರಂದು ಶನಿವಾರ ತಡರಾತ್ರಿ ಅದನ್ನು ಅಂಟಿಸಲಾಗಿದೆ. ಶನಿವಾರದಂದು ನ್ಯಾಯಾಲಯ ಕಾನೂನು ನೆರವು ನೀಡುದಕ್ಕೆ ಸಾಧ್ಯವಿಲ್ಲ ಎಂದು ಖಚಿತಪಡಿಸಿ ನೋಟಿಸ್ ಅನ್ನು ತರಾತುರಿಯಲ್ಲಿ ನೀಡಲಾಗಿದೆ ಎಂಬುದು ಸ್ಪಷ್ಟ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಸಾಮಾಜಿಕ ಮಾಧ್ಯಮಗಳಲ್ಲಿ ಅಫ್ರೀನ್ ಫಾತಿಮಾಗೆ ಭಾರಿ ಬೆಂಬಲ

ಘಟನೆಯನ್ನು ಭಾರತದಾದ್ಯಂತ ವಿರೋಧಿಸಲಾಗಿದ್ದು,ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಗಣ್ಯ ವ್ಯಕ್ತಿಗಳು ಫಾತಿಮಾಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಲೇಖಕಿ ಮತ್ತು ಹೋರಾಟಗಾರ್ತಿ ಗುರ್ಮೆಹರ್ ಕೌರ್ ಅವರು ಫಾತಿಮಾ ಅವರ ಮನೆಯ ಧ್ವಂಸವನ್ನು “ಸ್ವಯಂ ನಾಗರಿಕರ ಮೇಲೆ ಪ್ರಭುತ್ವ ಪ್ರಾಯೋಜಿತ ದಾಳಿ” ಎಂದು ಕರೆದಿದ್ದಾರೆ.

ಹೋರಾಟಗಾರ ಮೊಹಮ್ಮದ್ ಇರ್ಷಾದ್, “ಫಾತಿಮಾ ನಮ್ಮ ನಡುವಿನ ಗಟ್ಟಿ ಧ್ವನಿಯಾಗಿದ್ದಾರೆ. ಸರ್ಕಾರವು ತಾನು ಬಹಿರಂಗಗೊಳ್ಳುವ ಭಯದಿಂದ ಭಿನ್ನ ಧ್ವನಿಗಳನ್ನು ಅಡಗಿಸುವಂತೆ ಮಾಡಿದೆ. ನೀವು ಎಷ್ಟು ಬಂಧನಗಳನ್ನು ಮಾಡುತ್ತೀರಿ? ಎಷ್ಟು ಮನೆಗಳನ್ನು ಧ್ವಂಸ ಮಾಡುತ್ತೀರಿ? ಏನೇ ಆಗಲಿ, ನಾವು ಬೇಷರತ್ತಾಗಿ ಒಬ್ಬರಿಗೊಬ್ಬರು ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌ ಕೂಡ ಫಾತಿಮಾ ಅವರನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. JNU ನಲ್ಲಿ ವಿದ್ಯಾಭ್ಯಾಸವನ್ನು ಮಾಡಲಾಗಿದೆ ಅಂದರೆ ಮುಗೀತು ಬಿಡಿ ಅಲ್ಲಿ ಭಯೋತ್ಪಾದನೆ ಗೆ ಪೂರ್ವ ತಯಾರಿ ಆಗಿಯೇ ಬಂದಿರುವ ದೇಶದ್ರೋಹಿಗಳೇ ಮಗಳು ಹಾಗೂ ತಂದೆ ಕೂಡಾ ,ಮನೆಯ ಧ್ವಂಸದೊಂದಿಗೆ ,ಸರಕಾರ ದ ಸೌಲಭ್ಯಗಳು ಸಹ ಇವರಿಗೆ ಸಿಗದಂತೆ ಮಾಡಬೇಕು ,ಇವಳ ತಂದೆಗೆ ನರ ಕಟ್ ಮಾಡಿ ಬಿಕ್ಷಾ ಪಾತ್ರೆ ಕೈಗೆ ನೀಡಬೇಕು ಆಗ ಈ ಭಶೀರರಿಗೆ ಭಯ ಬರಲು ಸಾಧ್ಯ,ಯೋಗಿ ಸರ್ಕಾರಕ್ಕೆ ನಮ್ಮ ಪೂರ್ಣ ಬೆಂಬಲ ಇದೆ ಜೈ ಹಿಂದೂ ರಾಷ್ಟ್ರ

  2. ಇವರ ಮನೆ ದ್ವಂಸ ಮಾಡಿ, ಯೋಗಿ ತನ್ನ ಮನೆಯಲ್ಲಿ ಕೂರಿಸ್ತಾನೆಯೇ…..

  3. JNU ಒಂದು ಕೇಂದ್ರ ಸರ್ಕಾರದ ವಿಶ್ವವಿದ್ಯಾಲಯವಾಗಿದ್ದು, ಅದನ್ನು ಹೀಯಾಳಿಸಿ ಮಾತನಾಡಿದ್ದು ಕೇಂದ್ರ ಸರ್ಕಾರವನ್ನು ಹೀಯಾಳಿಸಿ ಮಾತನಾಡಿದಂತೆ, ಅಂದರೆ ನಮ್ಮ ಪ್ರಧಾನಿಗಳಾದ ಶ್ರೀ ಮೋದಿಯವರನ್ನೇ ಹೀಯಾಳಿಸಿದಂತೆ. ಹೀಗಾಗಿ ನಿಮ್ಮ ಮೇಲೆ ಪೊಲೀಸ್ ಕೇಸ್ ಕೂಡ ಹಾಕಬಹುದು.
    ಎರಡನೇದಾಗಿ ಅಲ್ಲಿ ಭಯೋತ್ಪಾದನೆಗೆ ಪೂರ್ವ ತಯಾರಿ ನಡೆದಿದೆ ಎಂದು ಹೇಳಿದರೆ ಕೇಂದ್ರ ಸರ್ಕಾರವೇ ಭಯೋತ್ಪಾದನೆಗೆ ಒತ್ತು ಕೊಟ್ಟಿದೆ ಎಂದು ಹೇಳಿದಂತೆ. ಹೀಗಾಗಿ ನಿಮ್ಮ ಮೇಲೆ ಎರಡನೇ ಕೇಸನ್ನು ಕೂಡ ಹಾಕಬಹುದು ಕೇವಲ ನೆಹರುರವರ ಹೆಸರು ಇದ್ದ ಮಾತ್ರಕ್ಕೆ ಅದು ಕಾಂಗ್ರೆಸ್ ಪಕ್ಷದ ವಿಶ್ವವಿದ್ಯಾಲಯವಾಗುವುದಿಲ್ಲ.
    JNU ವಿಶ್ವವಿದ್ಯಾಲಯವನ್ನು ಅತ್ಯುನ್ನತ ವಿಶ್ವವಿದ್ಯಾಲಯ ಎಂದು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಬೇಕಾದರೆ ಗೂಗಲ್ ಮಾಡಿ ನೋಡಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...