Homeರಾಷ್ಟ್ರೀಯಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ - ಅಫ್ರೀನ್‌ ಫಾತಿಮಾ ಯಾರು?

ಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ – ಅಫ್ರೀನ್‌ ಫಾತಿಮಾ ಯಾರು?

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಹೋರಾಟಗಾರ್ತಿ ಅಫ್ರೀನ್ ಫಾತಿಮಾ ಮತ್ತು ಅವರ ತಂದೆ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಧ್ವಂಸಗೊಳಿಸಿದ ನಂತರ, ಟ್ವಿಟರ್‌ನಲ್ಲಿ #ISTandWithAfreenFatima ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌‌ ಆಗಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ.

ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಫಾತಿಮಾ ಅವರ ತಂದೆ ಜಾವೇದ್ ಅವರೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ. ಪ್ರತಿಭಟನೆಯ ವೇಳೆ ಉದ್ರಿಕ್ತ ಜನರು ಬೈಕ್‌ಗಳು ಮತ್ತು ವಾಹನಗಳನ್ನು ಸುಟ್ಟು ಹಾಕಿದ್ದು, ಪೊಲೀಸ್ ವಾಹನವನ್ನೂ ಸುಟ್ಟು ಹಾಕಲು ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಯನ್ನು ನೆಲಸಮಗೊಳಿಸುವುದಕ್ಕೆ ಕಳೆದ ತಿಂಗಳು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರೆ, ಹಿಂಸಾಚಾರ ನಡೆದಿರುವುದನ್ನು ಇಟ್ಟು ಮನೆಯನ್ನು ನೆಲಸಮಗೊಳಿಸಲಾಗಿದೆ ಎಂದು ಜನರು ಆರೋಪಿಸಿದ್ದು, ಸರ್ಕಾರದ ಕ್ರಮವನ್ನು ‘ಅನ್ಯಾಯ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕರೆಯಲಾಗುತ್ತಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ಯಾರು ಅಫ್ರೀನ್ ಫಾತಿಮಾ?

ವಿದ್ಯಾರ್ಥಿ ಹೋರಾಟಗಾರ್ತಿಯಾಗಿರುವ ಅಫ್ರೀನ್ ಫಾತಿಮಾ ಅವರು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ.

2019-2020ರಲ್ಲಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯಲ್ಲಿ ಅಫ್ರೀನ್‌ ಫಾತಿಮಾ ಸಕ್ರಿಯರಾಗಿದ್ದರು. ಅವರು ಮುಸ್ಲಿಂ ಮಹಿಳೆಯರನ್ನು ಸಂಘಟಿಸಿ, ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಫಾತಿಮಾ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದ ಪದವಿಪೂರ್ವ ವಿದ್ಯಾರ್ಥಿಯಾಗಿರುವ ತನ್ನ ಕಿರಿಯ ಸಹೋದರಿ ಸುಮಯ್ಯಾ ಫಾತಿಮಾ ಅವರೊಂದಿಗೆ ‘ಮುಸ್ಲಿಮ ಅಲಹಾಬಾದ್’ ಎಂಬ ಅಧ್ಯಯನ ವಲಯವನ್ನು ರಚಿಸಿದ್ದರು ಎಂದು ಓಟ್‌ ಲುಕ್ ವರದಿ ಮಾಡಿದೆ.  ಪ್ರಸ್ತುತ ಸ್ಟಡಿ ಸರ್ಕಲ್‌ನಲ್ಲಿ 70 ಹುಡುಗಿಯರು ಸದಸ್ಯರಾಗಿದ್ದು, ಅವರು ವಿವಿಧ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ದೆಹಲಿಯಲ್ಲಿ ಅವರು ಕ್ರಿಯಾಶೀಲರಾಗಿದ್ದು, ಪ್ರಯಾಗ್‌ರಾಜ್‌ನ ಖುಲ್ದಾಬಾದ್‌ನ ಮನ್ಸೂರ್ ಅಲಿ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿ ಅಲ್ಲಿನ ಸಿಎಎ-ಎನ್‌ಆರ್‌ಸಿ ವಿರೋಧಿ ಆಂದೋಲನದಲ್ಲೂ ಭಾಗಿಯಾಗಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅವರ ಮೇಲಿನ ಆರೋಪಗಳೇನು?

ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾಚಾರವನ್ನು ಫಾತಿಮಾ ಅವರ ತಂದೆ ಜಾವೇದ್ ಅವರು ಸಂಘಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜಾವೇದ್ ಅವರು ‘ಬಂದ್’ಗೆ ಕರೆ ನೀಡಿದ್ದರು ಮತ್ತು ವಾಟ್ಸಾಪ್ ಸಂದೇಶಗಳ ಮೂಲಕ ಘಟನೆಯ ಸ್ಥಳಕ್ಕೆ ತಲುಪಲು ಜನರನ್ನು ಕೇಳಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾವೇದ್‌  ಅವರನ್ನು ಬಂಧಿಸಲಾಗಿದ್ದು, ಅವರ ಪತ್ನಿ ಮತ್ತು ಮಗಳನ್ನು ಸಹ ಬಂಧಿಸಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ, ಆದರೆ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಫಾತಿಮಾ ಕೂಡ ತನ್ನ ತಂದೆ ಯೋಜಿಸಿದ್ದಾರೆ ಎಂದು ಆರೋಪಿಸಲಾಗಿರುವ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸಲಾಗುತ್ತಿದೆ ವರದಿಯಾಗಿದೆ. ಹಿಂಸಾಚಾರದಲ್ಲಿ ಅವರು ಭಾಗಿಯಾಗಿರುವುದು ತನಿಖೆಯಲ್ಲಿ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳ ಬುಲ್ಡೋಜರ್ ಸಂಸ್ಕೃತಿ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ತಿರಸ್ಕರಿಸಿದ ಕುಟುಂಬ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ಫಾತಿಮಾ ಅವರ ಕುಟುಂಬ ತಿರಸ್ಕರಿಸಿದೆ. ಫಾತಿಮಾ ಅವರ ಸಹೋದರ ಮೊಹಮ್ಮದ್ ಉಮಾಮ್‌ ಅವರು, ಸಮಯಕ್ಕೆ ಸರಿಯಾಗಿ ನೋಟಿಸ್ ಸ್ವೀಕರಿಸಲಿಲ್ಲ ಎಂದು ಅವರು ಹೇಳಿದ್ದಾರೆ.

“ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರದ (ಪಿಡಿಎ)ದಿಂದ ಮನೆಯ ನಕ್ಷೆಯನ್ನು ಅಂಗೀಕರಿಸದೆ ನಿರ್ಮಿಸಲಾಗಿದೆ. ಇದಕ್ಕಾಗಿ, ಜಾವೇದ್ ಅವರಿಗೆ ಮೇ 10 ರಂದು ನೋಟಿಸ್ ನೀಡಲಾಯಿತು. ಅವರ ಸಮರ್ಥನೆಗಳನ್ನು ಪ್ರಸ್ತುತಪಡಿಸಲು ಮೇ 24ರಂದು ತಿಳಿಸುವಂತೆ ತಿಳಿಸಲಾಯಿತು. ಆದರೆ ಅವರಿಗೆ ಹೇಳಲಾಗಿರುವ ದಿನಾಂಕದಂದು ಜಾವೇದ್ ಅಥವಾ ಅವರ ವಕೀಲರು ಹಾಜರಾಗಲಿಲ್ಲ. ಈ ಬಗ್ಗೆ ಯಾವುದೇ ದಾಖಲೆಯನ್ನು ಹಾಜರುಪಡಿಸಲಾಗಿಲ್ಲ. ಮೇ 25 ರಂದು, ಕೆಡವಲು ಆದೇಶಗಳನ್ನು ನೀಡಲಾಯಿತು” ಎಂದು ಪಿಡಿಎ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಉಮಾಮ್‌ ಹೇಳುವ ಪ್ರಕಾರ ಅವರ ನಿಜವಾದ ಆಸ್ತಿ ಮಾಲಿಕರು ತಾಯಿಯಾಗಿದ್ದು, ಅವರ ಹೆಸರಿನಲ್ಲಿ ನೋಟಿಸ್ ನೀಡಲಾಗಿಲ್ಲ ಎಂದು ದಿ ವೈರ್‌ಗೆ ತಿಳಿಸಿದ್ದಾರೆ.

“ಇದಲ್ಲದೆ, ಜೂನ್ 10 ರಂದು ನೋಟಿಸ್‌ ನೀಡಲಾಗಿದೆ. ಆದರೆ ಜೂನ್ 10 ರಿಂದ ಪೊಲೀಸರು ನಿರಂತರವಾಗಿ ಮನೆಯಲ್ಲಿದ್ದರೂ ಜೂನ್ 11 ರಂದು ಶನಿವಾರ ತಡರಾತ್ರಿ ಅದನ್ನು ಅಂಟಿಸಲಾಗಿದೆ. ಶನಿವಾರದಂದು ನ್ಯಾಯಾಲಯ ಕಾನೂನು ನೆರವು ನೀಡುದಕ್ಕೆ ಸಾಧ್ಯವಿಲ್ಲ ಎಂದು ಖಚಿತಪಡಿಸಿ ನೋಟಿಸ್ ಅನ್ನು ತರಾತುರಿಯಲ್ಲಿ ನೀಡಲಾಗಿದೆ ಎಂಬುದು ಸ್ಪಷ್ಟ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಸಾಮಾಜಿಕ ಮಾಧ್ಯಮಗಳಲ್ಲಿ ಅಫ್ರೀನ್ ಫಾತಿಮಾಗೆ ಭಾರಿ ಬೆಂಬಲ

ಘಟನೆಯನ್ನು ಭಾರತದಾದ್ಯಂತ ವಿರೋಧಿಸಲಾಗಿದ್ದು,ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಗಣ್ಯ ವ್ಯಕ್ತಿಗಳು ಫಾತಿಮಾಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಲೇಖಕಿ ಮತ್ತು ಹೋರಾಟಗಾರ್ತಿ ಗುರ್ಮೆಹರ್ ಕೌರ್ ಅವರು ಫಾತಿಮಾ ಅವರ ಮನೆಯ ಧ್ವಂಸವನ್ನು “ಸ್ವಯಂ ನಾಗರಿಕರ ಮೇಲೆ ಪ್ರಭುತ್ವ ಪ್ರಾಯೋಜಿತ ದಾಳಿ” ಎಂದು ಕರೆದಿದ್ದಾರೆ.

ಹೋರಾಟಗಾರ ಮೊಹಮ್ಮದ್ ಇರ್ಷಾದ್, “ಫಾತಿಮಾ ನಮ್ಮ ನಡುವಿನ ಗಟ್ಟಿ ಧ್ವನಿಯಾಗಿದ್ದಾರೆ. ಸರ್ಕಾರವು ತಾನು ಬಹಿರಂಗಗೊಳ್ಳುವ ಭಯದಿಂದ ಭಿನ್ನ ಧ್ವನಿಗಳನ್ನು ಅಡಗಿಸುವಂತೆ ಮಾಡಿದೆ. ನೀವು ಎಷ್ಟು ಬಂಧನಗಳನ್ನು ಮಾಡುತ್ತೀರಿ? ಎಷ್ಟು ಮನೆಗಳನ್ನು ಧ್ವಂಸ ಮಾಡುತ್ತೀರಿ? ಏನೇ ಆಗಲಿ, ನಾವು ಬೇಷರತ್ತಾಗಿ ಒಬ್ಬರಿಗೊಬ್ಬರು ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌ ಕೂಡ ಫಾತಿಮಾ ಅವರನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. JNU ನಲ್ಲಿ ವಿದ್ಯಾಭ್ಯಾಸವನ್ನು ಮಾಡಲಾಗಿದೆ ಅಂದರೆ ಮುಗೀತು ಬಿಡಿ ಅಲ್ಲಿ ಭಯೋತ್ಪಾದನೆ ಗೆ ಪೂರ್ವ ತಯಾರಿ ಆಗಿಯೇ ಬಂದಿರುವ ದೇಶದ್ರೋಹಿಗಳೇ ಮಗಳು ಹಾಗೂ ತಂದೆ ಕೂಡಾ ,ಮನೆಯ ಧ್ವಂಸದೊಂದಿಗೆ ,ಸರಕಾರ ದ ಸೌಲಭ್ಯಗಳು ಸಹ ಇವರಿಗೆ ಸಿಗದಂತೆ ಮಾಡಬೇಕು ,ಇವಳ ತಂದೆಗೆ ನರ ಕಟ್ ಮಾಡಿ ಬಿಕ್ಷಾ ಪಾತ್ರೆ ಕೈಗೆ ನೀಡಬೇಕು ಆಗ ಈ ಭಶೀರರಿಗೆ ಭಯ ಬರಲು ಸಾಧ್ಯ,ಯೋಗಿ ಸರ್ಕಾರಕ್ಕೆ ನಮ್ಮ ಪೂರ್ಣ ಬೆಂಬಲ ಇದೆ ಜೈ ಹಿಂದೂ ರಾಷ್ಟ್ರ

  2. ಇವರ ಮನೆ ದ್ವಂಸ ಮಾಡಿ, ಯೋಗಿ ತನ್ನ ಮನೆಯಲ್ಲಿ ಕೂರಿಸ್ತಾನೆಯೇ…..

  3. JNU ಒಂದು ಕೇಂದ್ರ ಸರ್ಕಾರದ ವಿಶ್ವವಿದ್ಯಾಲಯವಾಗಿದ್ದು, ಅದನ್ನು ಹೀಯಾಳಿಸಿ ಮಾತನಾಡಿದ್ದು ಕೇಂದ್ರ ಸರ್ಕಾರವನ್ನು ಹೀಯಾಳಿಸಿ ಮಾತನಾಡಿದಂತೆ, ಅಂದರೆ ನಮ್ಮ ಪ್ರಧಾನಿಗಳಾದ ಶ್ರೀ ಮೋದಿಯವರನ್ನೇ ಹೀಯಾಳಿಸಿದಂತೆ. ಹೀಗಾಗಿ ನಿಮ್ಮ ಮೇಲೆ ಪೊಲೀಸ್ ಕೇಸ್ ಕೂಡ ಹಾಕಬಹುದು.
    ಎರಡನೇದಾಗಿ ಅಲ್ಲಿ ಭಯೋತ್ಪಾದನೆಗೆ ಪೂರ್ವ ತಯಾರಿ ನಡೆದಿದೆ ಎಂದು ಹೇಳಿದರೆ ಕೇಂದ್ರ ಸರ್ಕಾರವೇ ಭಯೋತ್ಪಾದನೆಗೆ ಒತ್ತು ಕೊಟ್ಟಿದೆ ಎಂದು ಹೇಳಿದಂತೆ. ಹೀಗಾಗಿ ನಿಮ್ಮ ಮೇಲೆ ಎರಡನೇ ಕೇಸನ್ನು ಕೂಡ ಹಾಕಬಹುದು ಕೇವಲ ನೆಹರುರವರ ಹೆಸರು ಇದ್ದ ಮಾತ್ರಕ್ಕೆ ಅದು ಕಾಂಗ್ರೆಸ್ ಪಕ್ಷದ ವಿಶ್ವವಿದ್ಯಾಲಯವಾಗುವುದಿಲ್ಲ.
    JNU ವಿಶ್ವವಿದ್ಯಾಲಯವನ್ನು ಅತ್ಯುನ್ನತ ವಿಶ್ವವಿದ್ಯಾಲಯ ಎಂದು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಬೇಕಾದರೆ ಗೂಗಲ್ ಮಾಡಿ ನೋಡಿ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...