Homeರಾಷ್ಟ್ರೀಯಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ - ಅಫ್ರೀನ್‌ ಫಾತಿಮಾ ಯಾರು?

ಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ – ಅಫ್ರೀನ್‌ ಫಾತಿಮಾ ಯಾರು?

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಹೋರಾಟಗಾರ್ತಿ ಅಫ್ರೀನ್ ಫಾತಿಮಾ ಮತ್ತು ಅವರ ತಂದೆ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಧ್ವಂಸಗೊಳಿಸಿದ ನಂತರ, ಟ್ವಿಟರ್‌ನಲ್ಲಿ #ISTandWithAfreenFatima ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌‌ ಆಗಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ.

ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಫಾತಿಮಾ ಅವರ ತಂದೆ ಜಾವೇದ್ ಅವರೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ. ಪ್ರತಿಭಟನೆಯ ವೇಳೆ ಉದ್ರಿಕ್ತ ಜನರು ಬೈಕ್‌ಗಳು ಮತ್ತು ವಾಹನಗಳನ್ನು ಸುಟ್ಟು ಹಾಕಿದ್ದು, ಪೊಲೀಸ್ ವಾಹನವನ್ನೂ ಸುಟ್ಟು ಹಾಕಲು ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಯನ್ನು ನೆಲಸಮಗೊಳಿಸುವುದಕ್ಕೆ ಕಳೆದ ತಿಂಗಳು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರೆ, ಹಿಂಸಾಚಾರ ನಡೆದಿರುವುದನ್ನು ಇಟ್ಟು ಮನೆಯನ್ನು ನೆಲಸಮಗೊಳಿಸಲಾಗಿದೆ ಎಂದು ಜನರು ಆರೋಪಿಸಿದ್ದು, ಸರ್ಕಾರದ ಕ್ರಮವನ್ನು ‘ಅನ್ಯಾಯ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕರೆಯಲಾಗುತ್ತಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ಯಾರು ಅಫ್ರೀನ್ ಫಾತಿಮಾ?

ವಿದ್ಯಾರ್ಥಿ ಹೋರಾಟಗಾರ್ತಿಯಾಗಿರುವ ಅಫ್ರೀನ್ ಫಾತಿಮಾ ಅವರು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ.

2019-2020ರಲ್ಲಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯಲ್ಲಿ ಅಫ್ರೀನ್‌ ಫಾತಿಮಾ ಸಕ್ರಿಯರಾಗಿದ್ದರು. ಅವರು ಮುಸ್ಲಿಂ ಮಹಿಳೆಯರನ್ನು ಸಂಘಟಿಸಿ, ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಫಾತಿಮಾ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದ ಪದವಿಪೂರ್ವ ವಿದ್ಯಾರ್ಥಿಯಾಗಿರುವ ತನ್ನ ಕಿರಿಯ ಸಹೋದರಿ ಸುಮಯ್ಯಾ ಫಾತಿಮಾ ಅವರೊಂದಿಗೆ ‘ಮುಸ್ಲಿಮ ಅಲಹಾಬಾದ್’ ಎಂಬ ಅಧ್ಯಯನ ವಲಯವನ್ನು ರಚಿಸಿದ್ದರು ಎಂದು ಓಟ್‌ ಲುಕ್ ವರದಿ ಮಾಡಿದೆ.  ಪ್ರಸ್ತುತ ಸ್ಟಡಿ ಸರ್ಕಲ್‌ನಲ್ಲಿ 70 ಹುಡುಗಿಯರು ಸದಸ್ಯರಾಗಿದ್ದು, ಅವರು ವಿವಿಧ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ದೆಹಲಿಯಲ್ಲಿ ಅವರು ಕ್ರಿಯಾಶೀಲರಾಗಿದ್ದು, ಪ್ರಯಾಗ್‌ರಾಜ್‌ನ ಖುಲ್ದಾಬಾದ್‌ನ ಮನ್ಸೂರ್ ಅಲಿ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿ ಅಲ್ಲಿನ ಸಿಎಎ-ಎನ್‌ಆರ್‌ಸಿ ವಿರೋಧಿ ಆಂದೋಲನದಲ್ಲೂ ಭಾಗಿಯಾಗಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅವರ ಮೇಲಿನ ಆರೋಪಗಳೇನು?

ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾಚಾರವನ್ನು ಫಾತಿಮಾ ಅವರ ತಂದೆ ಜಾವೇದ್ ಅವರು ಸಂಘಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜಾವೇದ್ ಅವರು ‘ಬಂದ್’ಗೆ ಕರೆ ನೀಡಿದ್ದರು ಮತ್ತು ವಾಟ್ಸಾಪ್ ಸಂದೇಶಗಳ ಮೂಲಕ ಘಟನೆಯ ಸ್ಥಳಕ್ಕೆ ತಲುಪಲು ಜನರನ್ನು ಕೇಳಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾವೇದ್‌  ಅವರನ್ನು ಬಂಧಿಸಲಾಗಿದ್ದು, ಅವರ ಪತ್ನಿ ಮತ್ತು ಮಗಳನ್ನು ಸಹ ಬಂಧಿಸಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ, ಆದರೆ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಫಾತಿಮಾ ಕೂಡ ತನ್ನ ತಂದೆ ಯೋಜಿಸಿದ್ದಾರೆ ಎಂದು ಆರೋಪಿಸಲಾಗಿರುವ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸಲಾಗುತ್ತಿದೆ ವರದಿಯಾಗಿದೆ. ಹಿಂಸಾಚಾರದಲ್ಲಿ ಅವರು ಭಾಗಿಯಾಗಿರುವುದು ತನಿಖೆಯಲ್ಲಿ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳ ಬುಲ್ಡೋಜರ್ ಸಂಸ್ಕೃತಿ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ತಿರಸ್ಕರಿಸಿದ ಕುಟುಂಬ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ಫಾತಿಮಾ ಅವರ ಕುಟುಂಬ ತಿರಸ್ಕರಿಸಿದೆ. ಫಾತಿಮಾ ಅವರ ಸಹೋದರ ಮೊಹಮ್ಮದ್ ಉಮಾಮ್‌ ಅವರು, ಸಮಯಕ್ಕೆ ಸರಿಯಾಗಿ ನೋಟಿಸ್ ಸ್ವೀಕರಿಸಲಿಲ್ಲ ಎಂದು ಅವರು ಹೇಳಿದ್ದಾರೆ.

“ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರದ (ಪಿಡಿಎ)ದಿಂದ ಮನೆಯ ನಕ್ಷೆಯನ್ನು ಅಂಗೀಕರಿಸದೆ ನಿರ್ಮಿಸಲಾಗಿದೆ. ಇದಕ್ಕಾಗಿ, ಜಾವೇದ್ ಅವರಿಗೆ ಮೇ 10 ರಂದು ನೋಟಿಸ್ ನೀಡಲಾಯಿತು. ಅವರ ಸಮರ್ಥನೆಗಳನ್ನು ಪ್ರಸ್ತುತಪಡಿಸಲು ಮೇ 24ರಂದು ತಿಳಿಸುವಂತೆ ತಿಳಿಸಲಾಯಿತು. ಆದರೆ ಅವರಿಗೆ ಹೇಳಲಾಗಿರುವ ದಿನಾಂಕದಂದು ಜಾವೇದ್ ಅಥವಾ ಅವರ ವಕೀಲರು ಹಾಜರಾಗಲಿಲ್ಲ. ಈ ಬಗ್ಗೆ ಯಾವುದೇ ದಾಖಲೆಯನ್ನು ಹಾಜರುಪಡಿಸಲಾಗಿಲ್ಲ. ಮೇ 25 ರಂದು, ಕೆಡವಲು ಆದೇಶಗಳನ್ನು ನೀಡಲಾಯಿತು” ಎಂದು ಪಿಡಿಎ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಉಮಾಮ್‌ ಹೇಳುವ ಪ್ರಕಾರ ಅವರ ನಿಜವಾದ ಆಸ್ತಿ ಮಾಲಿಕರು ತಾಯಿಯಾಗಿದ್ದು, ಅವರ ಹೆಸರಿನಲ್ಲಿ ನೋಟಿಸ್ ನೀಡಲಾಗಿಲ್ಲ ಎಂದು ದಿ ವೈರ್‌ಗೆ ತಿಳಿಸಿದ್ದಾರೆ.

“ಇದಲ್ಲದೆ, ಜೂನ್ 10 ರಂದು ನೋಟಿಸ್‌ ನೀಡಲಾಗಿದೆ. ಆದರೆ ಜೂನ್ 10 ರಿಂದ ಪೊಲೀಸರು ನಿರಂತರವಾಗಿ ಮನೆಯಲ್ಲಿದ್ದರೂ ಜೂನ್ 11 ರಂದು ಶನಿವಾರ ತಡರಾತ್ರಿ ಅದನ್ನು ಅಂಟಿಸಲಾಗಿದೆ. ಶನಿವಾರದಂದು ನ್ಯಾಯಾಲಯ ಕಾನೂನು ನೆರವು ನೀಡುದಕ್ಕೆ ಸಾಧ್ಯವಿಲ್ಲ ಎಂದು ಖಚಿತಪಡಿಸಿ ನೋಟಿಸ್ ಅನ್ನು ತರಾತುರಿಯಲ್ಲಿ ನೀಡಲಾಗಿದೆ ಎಂಬುದು ಸ್ಪಷ್ಟ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಸಾಮಾಜಿಕ ಮಾಧ್ಯಮಗಳಲ್ಲಿ ಅಫ್ರೀನ್ ಫಾತಿಮಾಗೆ ಭಾರಿ ಬೆಂಬಲ

ಘಟನೆಯನ್ನು ಭಾರತದಾದ್ಯಂತ ವಿರೋಧಿಸಲಾಗಿದ್ದು,ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಗಣ್ಯ ವ್ಯಕ್ತಿಗಳು ಫಾತಿಮಾಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಲೇಖಕಿ ಮತ್ತು ಹೋರಾಟಗಾರ್ತಿ ಗುರ್ಮೆಹರ್ ಕೌರ್ ಅವರು ಫಾತಿಮಾ ಅವರ ಮನೆಯ ಧ್ವಂಸವನ್ನು “ಸ್ವಯಂ ನಾಗರಿಕರ ಮೇಲೆ ಪ್ರಭುತ್ವ ಪ್ರಾಯೋಜಿತ ದಾಳಿ” ಎಂದು ಕರೆದಿದ್ದಾರೆ.

ಹೋರಾಟಗಾರ ಮೊಹಮ್ಮದ್ ಇರ್ಷಾದ್, “ಫಾತಿಮಾ ನಮ್ಮ ನಡುವಿನ ಗಟ್ಟಿ ಧ್ವನಿಯಾಗಿದ್ದಾರೆ. ಸರ್ಕಾರವು ತಾನು ಬಹಿರಂಗಗೊಳ್ಳುವ ಭಯದಿಂದ ಭಿನ್ನ ಧ್ವನಿಗಳನ್ನು ಅಡಗಿಸುವಂತೆ ಮಾಡಿದೆ. ನೀವು ಎಷ್ಟು ಬಂಧನಗಳನ್ನು ಮಾಡುತ್ತೀರಿ? ಎಷ್ಟು ಮನೆಗಳನ್ನು ಧ್ವಂಸ ಮಾಡುತ್ತೀರಿ? ಏನೇ ಆಗಲಿ, ನಾವು ಬೇಷರತ್ತಾಗಿ ಒಬ್ಬರಿಗೊಬ್ಬರು ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌ ಕೂಡ ಫಾತಿಮಾ ಅವರನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. JNU ನಲ್ಲಿ ವಿದ್ಯಾಭ್ಯಾಸವನ್ನು ಮಾಡಲಾಗಿದೆ ಅಂದರೆ ಮುಗೀತು ಬಿಡಿ ಅಲ್ಲಿ ಭಯೋತ್ಪಾದನೆ ಗೆ ಪೂರ್ವ ತಯಾರಿ ಆಗಿಯೇ ಬಂದಿರುವ ದೇಶದ್ರೋಹಿಗಳೇ ಮಗಳು ಹಾಗೂ ತಂದೆ ಕೂಡಾ ,ಮನೆಯ ಧ್ವಂಸದೊಂದಿಗೆ ,ಸರಕಾರ ದ ಸೌಲಭ್ಯಗಳು ಸಹ ಇವರಿಗೆ ಸಿಗದಂತೆ ಮಾಡಬೇಕು ,ಇವಳ ತಂದೆಗೆ ನರ ಕಟ್ ಮಾಡಿ ಬಿಕ್ಷಾ ಪಾತ್ರೆ ಕೈಗೆ ನೀಡಬೇಕು ಆಗ ಈ ಭಶೀರರಿಗೆ ಭಯ ಬರಲು ಸಾಧ್ಯ,ಯೋಗಿ ಸರ್ಕಾರಕ್ಕೆ ನಮ್ಮ ಪೂರ್ಣ ಬೆಂಬಲ ಇದೆ ಜೈ ಹಿಂದೂ ರಾಷ್ಟ್ರ

  2. ಇವರ ಮನೆ ದ್ವಂಸ ಮಾಡಿ, ಯೋಗಿ ತನ್ನ ಮನೆಯಲ್ಲಿ ಕೂರಿಸ್ತಾನೆಯೇ…..

  3. JNU ಒಂದು ಕೇಂದ್ರ ಸರ್ಕಾರದ ವಿಶ್ವವಿದ್ಯಾಲಯವಾಗಿದ್ದು, ಅದನ್ನು ಹೀಯಾಳಿಸಿ ಮಾತನಾಡಿದ್ದು ಕೇಂದ್ರ ಸರ್ಕಾರವನ್ನು ಹೀಯಾಳಿಸಿ ಮಾತನಾಡಿದಂತೆ, ಅಂದರೆ ನಮ್ಮ ಪ್ರಧಾನಿಗಳಾದ ಶ್ರೀ ಮೋದಿಯವರನ್ನೇ ಹೀಯಾಳಿಸಿದಂತೆ. ಹೀಗಾಗಿ ನಿಮ್ಮ ಮೇಲೆ ಪೊಲೀಸ್ ಕೇಸ್ ಕೂಡ ಹಾಕಬಹುದು.
    ಎರಡನೇದಾಗಿ ಅಲ್ಲಿ ಭಯೋತ್ಪಾದನೆಗೆ ಪೂರ್ವ ತಯಾರಿ ನಡೆದಿದೆ ಎಂದು ಹೇಳಿದರೆ ಕೇಂದ್ರ ಸರ್ಕಾರವೇ ಭಯೋತ್ಪಾದನೆಗೆ ಒತ್ತು ಕೊಟ್ಟಿದೆ ಎಂದು ಹೇಳಿದಂತೆ. ಹೀಗಾಗಿ ನಿಮ್ಮ ಮೇಲೆ ಎರಡನೇ ಕೇಸನ್ನು ಕೂಡ ಹಾಕಬಹುದು ಕೇವಲ ನೆಹರುರವರ ಹೆಸರು ಇದ್ದ ಮಾತ್ರಕ್ಕೆ ಅದು ಕಾಂಗ್ರೆಸ್ ಪಕ್ಷದ ವಿಶ್ವವಿದ್ಯಾಲಯವಾಗುವುದಿಲ್ಲ.
    JNU ವಿಶ್ವವಿದ್ಯಾಲಯವನ್ನು ಅತ್ಯುನ್ನತ ವಿಶ್ವವಿದ್ಯಾಲಯ ಎಂದು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಬೇಕಾದರೆ ಗೂಗಲ್ ಮಾಡಿ ನೋಡಿ.

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...