Homeರಾಷ್ಟ್ರೀಯಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ - ಅಫ್ರೀನ್‌ ಫಾತಿಮಾ ಯಾರು?

ಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ – ಅಫ್ರೀನ್‌ ಫಾತಿಮಾ ಯಾರು?

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಹೋರಾಟಗಾರ್ತಿ ಅಫ್ರೀನ್ ಫಾತಿಮಾ ಮತ್ತು ಅವರ ತಂದೆ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಧ್ವಂಸಗೊಳಿಸಿದ ನಂತರ, ಟ್ವಿಟರ್‌ನಲ್ಲಿ #ISTandWithAfreenFatima ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌‌ ಆಗಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ.

ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಫಾತಿಮಾ ಅವರ ತಂದೆ ಜಾವೇದ್ ಅವರೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ. ಪ್ರತಿಭಟನೆಯ ವೇಳೆ ಉದ್ರಿಕ್ತ ಜನರು ಬೈಕ್‌ಗಳು ಮತ್ತು ವಾಹನಗಳನ್ನು ಸುಟ್ಟು ಹಾಕಿದ್ದು, ಪೊಲೀಸ್ ವಾಹನವನ್ನೂ ಸುಟ್ಟು ಹಾಕಲು ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಯನ್ನು ನೆಲಸಮಗೊಳಿಸುವುದಕ್ಕೆ ಕಳೆದ ತಿಂಗಳು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರೆ, ಹಿಂಸಾಚಾರ ನಡೆದಿರುವುದನ್ನು ಇಟ್ಟು ಮನೆಯನ್ನು ನೆಲಸಮಗೊಳಿಸಲಾಗಿದೆ ಎಂದು ಜನರು ಆರೋಪಿಸಿದ್ದು, ಸರ್ಕಾರದ ಕ್ರಮವನ್ನು ‘ಅನ್ಯಾಯ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕರೆಯಲಾಗುತ್ತಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ಯಾರು ಅಫ್ರೀನ್ ಫಾತಿಮಾ?

ವಿದ್ಯಾರ್ಥಿ ಹೋರಾಟಗಾರ್ತಿಯಾಗಿರುವ ಅಫ್ರೀನ್ ಫಾತಿಮಾ ಅವರು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ.

2019-2020ರಲ್ಲಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯಲ್ಲಿ ಅಫ್ರೀನ್‌ ಫಾತಿಮಾ ಸಕ್ರಿಯರಾಗಿದ್ದರು. ಅವರು ಮುಸ್ಲಿಂ ಮಹಿಳೆಯರನ್ನು ಸಂಘಟಿಸಿ, ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಫಾತಿಮಾ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದ ಪದವಿಪೂರ್ವ ವಿದ್ಯಾರ್ಥಿಯಾಗಿರುವ ತನ್ನ ಕಿರಿಯ ಸಹೋದರಿ ಸುಮಯ್ಯಾ ಫಾತಿಮಾ ಅವರೊಂದಿಗೆ ‘ಮುಸ್ಲಿಮ ಅಲಹಾಬಾದ್’ ಎಂಬ ಅಧ್ಯಯನ ವಲಯವನ್ನು ರಚಿಸಿದ್ದರು ಎಂದು ಓಟ್‌ ಲುಕ್ ವರದಿ ಮಾಡಿದೆ.  ಪ್ರಸ್ತುತ ಸ್ಟಡಿ ಸರ್ಕಲ್‌ನಲ್ಲಿ 70 ಹುಡುಗಿಯರು ಸದಸ್ಯರಾಗಿದ್ದು, ಅವರು ವಿವಿಧ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ದೆಹಲಿಯಲ್ಲಿ ಅವರು ಕ್ರಿಯಾಶೀಲರಾಗಿದ್ದು, ಪ್ರಯಾಗ್‌ರಾಜ್‌ನ ಖುಲ್ದಾಬಾದ್‌ನ ಮನ್ಸೂರ್ ಅಲಿ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿ ಅಲ್ಲಿನ ಸಿಎಎ-ಎನ್‌ಆರ್‌ಸಿ ವಿರೋಧಿ ಆಂದೋಲನದಲ್ಲೂ ಭಾಗಿಯಾಗಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅವರ ಮೇಲಿನ ಆರೋಪಗಳೇನು?

ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾಚಾರವನ್ನು ಫಾತಿಮಾ ಅವರ ತಂದೆ ಜಾವೇದ್ ಅವರು ಸಂಘಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜಾವೇದ್ ಅವರು ‘ಬಂದ್’ಗೆ ಕರೆ ನೀಡಿದ್ದರು ಮತ್ತು ವಾಟ್ಸಾಪ್ ಸಂದೇಶಗಳ ಮೂಲಕ ಘಟನೆಯ ಸ್ಥಳಕ್ಕೆ ತಲುಪಲು ಜನರನ್ನು ಕೇಳಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾವೇದ್‌  ಅವರನ್ನು ಬಂಧಿಸಲಾಗಿದ್ದು, ಅವರ ಪತ್ನಿ ಮತ್ತು ಮಗಳನ್ನು ಸಹ ಬಂಧಿಸಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ, ಆದರೆ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಫಾತಿಮಾ ಕೂಡ ತನ್ನ ತಂದೆ ಯೋಜಿಸಿದ್ದಾರೆ ಎಂದು ಆರೋಪಿಸಲಾಗಿರುವ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸಲಾಗುತ್ತಿದೆ ವರದಿಯಾಗಿದೆ. ಹಿಂಸಾಚಾರದಲ್ಲಿ ಅವರು ಭಾಗಿಯಾಗಿರುವುದು ತನಿಖೆಯಲ್ಲಿ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳ ಬುಲ್ಡೋಜರ್ ಸಂಸ್ಕೃತಿ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ತಿರಸ್ಕರಿಸಿದ ಕುಟುಂಬ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ಫಾತಿಮಾ ಅವರ ಕುಟುಂಬ ತಿರಸ್ಕರಿಸಿದೆ. ಫಾತಿಮಾ ಅವರ ಸಹೋದರ ಮೊಹಮ್ಮದ್ ಉಮಾಮ್‌ ಅವರು, ಸಮಯಕ್ಕೆ ಸರಿಯಾಗಿ ನೋಟಿಸ್ ಸ್ವೀಕರಿಸಲಿಲ್ಲ ಎಂದು ಅವರು ಹೇಳಿದ್ದಾರೆ.

“ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರದ (ಪಿಡಿಎ)ದಿಂದ ಮನೆಯ ನಕ್ಷೆಯನ್ನು ಅಂಗೀಕರಿಸದೆ ನಿರ್ಮಿಸಲಾಗಿದೆ. ಇದಕ್ಕಾಗಿ, ಜಾವೇದ್ ಅವರಿಗೆ ಮೇ 10 ರಂದು ನೋಟಿಸ್ ನೀಡಲಾಯಿತು. ಅವರ ಸಮರ್ಥನೆಗಳನ್ನು ಪ್ರಸ್ತುತಪಡಿಸಲು ಮೇ 24ರಂದು ತಿಳಿಸುವಂತೆ ತಿಳಿಸಲಾಯಿತು. ಆದರೆ ಅವರಿಗೆ ಹೇಳಲಾಗಿರುವ ದಿನಾಂಕದಂದು ಜಾವೇದ್ ಅಥವಾ ಅವರ ವಕೀಲರು ಹಾಜರಾಗಲಿಲ್ಲ. ಈ ಬಗ್ಗೆ ಯಾವುದೇ ದಾಖಲೆಯನ್ನು ಹಾಜರುಪಡಿಸಲಾಗಿಲ್ಲ. ಮೇ 25 ರಂದು, ಕೆಡವಲು ಆದೇಶಗಳನ್ನು ನೀಡಲಾಯಿತು” ಎಂದು ಪಿಡಿಎ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಉಮಾಮ್‌ ಹೇಳುವ ಪ್ರಕಾರ ಅವರ ನಿಜವಾದ ಆಸ್ತಿ ಮಾಲಿಕರು ತಾಯಿಯಾಗಿದ್ದು, ಅವರ ಹೆಸರಿನಲ್ಲಿ ನೋಟಿಸ್ ನೀಡಲಾಗಿಲ್ಲ ಎಂದು ದಿ ವೈರ್‌ಗೆ ತಿಳಿಸಿದ್ದಾರೆ.

“ಇದಲ್ಲದೆ, ಜೂನ್ 10 ರಂದು ನೋಟಿಸ್‌ ನೀಡಲಾಗಿದೆ. ಆದರೆ ಜೂನ್ 10 ರಿಂದ ಪೊಲೀಸರು ನಿರಂತರವಾಗಿ ಮನೆಯಲ್ಲಿದ್ದರೂ ಜೂನ್ 11 ರಂದು ಶನಿವಾರ ತಡರಾತ್ರಿ ಅದನ್ನು ಅಂಟಿಸಲಾಗಿದೆ. ಶನಿವಾರದಂದು ನ್ಯಾಯಾಲಯ ಕಾನೂನು ನೆರವು ನೀಡುದಕ್ಕೆ ಸಾಧ್ಯವಿಲ್ಲ ಎಂದು ಖಚಿತಪಡಿಸಿ ನೋಟಿಸ್ ಅನ್ನು ತರಾತುರಿಯಲ್ಲಿ ನೀಡಲಾಗಿದೆ ಎಂಬುದು ಸ್ಪಷ್ಟ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಸಾಮಾಜಿಕ ಮಾಧ್ಯಮಗಳಲ್ಲಿ ಅಫ್ರೀನ್ ಫಾತಿಮಾಗೆ ಭಾರಿ ಬೆಂಬಲ

ಘಟನೆಯನ್ನು ಭಾರತದಾದ್ಯಂತ ವಿರೋಧಿಸಲಾಗಿದ್ದು,ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಗಣ್ಯ ವ್ಯಕ್ತಿಗಳು ಫಾತಿಮಾಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಲೇಖಕಿ ಮತ್ತು ಹೋರಾಟಗಾರ್ತಿ ಗುರ್ಮೆಹರ್ ಕೌರ್ ಅವರು ಫಾತಿಮಾ ಅವರ ಮನೆಯ ಧ್ವಂಸವನ್ನು “ಸ್ವಯಂ ನಾಗರಿಕರ ಮೇಲೆ ಪ್ರಭುತ್ವ ಪ್ರಾಯೋಜಿತ ದಾಳಿ” ಎಂದು ಕರೆದಿದ್ದಾರೆ.

ಹೋರಾಟಗಾರ ಮೊಹಮ್ಮದ್ ಇರ್ಷಾದ್, “ಫಾತಿಮಾ ನಮ್ಮ ನಡುವಿನ ಗಟ್ಟಿ ಧ್ವನಿಯಾಗಿದ್ದಾರೆ. ಸರ್ಕಾರವು ತಾನು ಬಹಿರಂಗಗೊಳ್ಳುವ ಭಯದಿಂದ ಭಿನ್ನ ಧ್ವನಿಗಳನ್ನು ಅಡಗಿಸುವಂತೆ ಮಾಡಿದೆ. ನೀವು ಎಷ್ಟು ಬಂಧನಗಳನ್ನು ಮಾಡುತ್ತೀರಿ? ಎಷ್ಟು ಮನೆಗಳನ್ನು ಧ್ವಂಸ ಮಾಡುತ್ತೀರಿ? ಏನೇ ಆಗಲಿ, ನಾವು ಬೇಷರತ್ತಾಗಿ ಒಬ್ಬರಿಗೊಬ್ಬರು ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌ ಕೂಡ ಫಾತಿಮಾ ಅವರನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. JNU ನಲ್ಲಿ ವಿದ್ಯಾಭ್ಯಾಸವನ್ನು ಮಾಡಲಾಗಿದೆ ಅಂದರೆ ಮುಗೀತು ಬಿಡಿ ಅಲ್ಲಿ ಭಯೋತ್ಪಾದನೆ ಗೆ ಪೂರ್ವ ತಯಾರಿ ಆಗಿಯೇ ಬಂದಿರುವ ದೇಶದ್ರೋಹಿಗಳೇ ಮಗಳು ಹಾಗೂ ತಂದೆ ಕೂಡಾ ,ಮನೆಯ ಧ್ವಂಸದೊಂದಿಗೆ ,ಸರಕಾರ ದ ಸೌಲಭ್ಯಗಳು ಸಹ ಇವರಿಗೆ ಸಿಗದಂತೆ ಮಾಡಬೇಕು ,ಇವಳ ತಂದೆಗೆ ನರ ಕಟ್ ಮಾಡಿ ಬಿಕ್ಷಾ ಪಾತ್ರೆ ಕೈಗೆ ನೀಡಬೇಕು ಆಗ ಈ ಭಶೀರರಿಗೆ ಭಯ ಬರಲು ಸಾಧ್ಯ,ಯೋಗಿ ಸರ್ಕಾರಕ್ಕೆ ನಮ್ಮ ಪೂರ್ಣ ಬೆಂಬಲ ಇದೆ ಜೈ ಹಿಂದೂ ರಾಷ್ಟ್ರ

  2. ಇವರ ಮನೆ ದ್ವಂಸ ಮಾಡಿ, ಯೋಗಿ ತನ್ನ ಮನೆಯಲ್ಲಿ ಕೂರಿಸ್ತಾನೆಯೇ…..

  3. JNU ಒಂದು ಕೇಂದ್ರ ಸರ್ಕಾರದ ವಿಶ್ವವಿದ್ಯಾಲಯವಾಗಿದ್ದು, ಅದನ್ನು ಹೀಯಾಳಿಸಿ ಮಾತನಾಡಿದ್ದು ಕೇಂದ್ರ ಸರ್ಕಾರವನ್ನು ಹೀಯಾಳಿಸಿ ಮಾತನಾಡಿದಂತೆ, ಅಂದರೆ ನಮ್ಮ ಪ್ರಧಾನಿಗಳಾದ ಶ್ರೀ ಮೋದಿಯವರನ್ನೇ ಹೀಯಾಳಿಸಿದಂತೆ. ಹೀಗಾಗಿ ನಿಮ್ಮ ಮೇಲೆ ಪೊಲೀಸ್ ಕೇಸ್ ಕೂಡ ಹಾಕಬಹುದು.
    ಎರಡನೇದಾಗಿ ಅಲ್ಲಿ ಭಯೋತ್ಪಾದನೆಗೆ ಪೂರ್ವ ತಯಾರಿ ನಡೆದಿದೆ ಎಂದು ಹೇಳಿದರೆ ಕೇಂದ್ರ ಸರ್ಕಾರವೇ ಭಯೋತ್ಪಾದನೆಗೆ ಒತ್ತು ಕೊಟ್ಟಿದೆ ಎಂದು ಹೇಳಿದಂತೆ. ಹೀಗಾಗಿ ನಿಮ್ಮ ಮೇಲೆ ಎರಡನೇ ಕೇಸನ್ನು ಕೂಡ ಹಾಕಬಹುದು ಕೇವಲ ನೆಹರುರವರ ಹೆಸರು ಇದ್ದ ಮಾತ್ರಕ್ಕೆ ಅದು ಕಾಂಗ್ರೆಸ್ ಪಕ್ಷದ ವಿಶ್ವವಿದ್ಯಾಲಯವಾಗುವುದಿಲ್ಲ.
    JNU ವಿಶ್ವವಿದ್ಯಾಲಯವನ್ನು ಅತ್ಯುನ್ನತ ವಿಶ್ವವಿದ್ಯಾಲಯ ಎಂದು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಬೇಕಾದರೆ ಗೂಗಲ್ ಮಾಡಿ ನೋಡಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...