Homeರಾಷ್ಟ್ರೀಯಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ - ಅಫ್ರೀನ್‌ ಫಾತಿಮಾ ಯಾರು?

ಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ – ಅಫ್ರೀನ್‌ ಫಾತಿಮಾ ಯಾರು?

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಹೋರಾಟಗಾರ್ತಿ ಅಫ್ರೀನ್ ಫಾತಿಮಾ ಮತ್ತು ಅವರ ತಂದೆ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಧ್ವಂಸಗೊಳಿಸಿದ ನಂತರ, ಟ್ವಿಟರ್‌ನಲ್ಲಿ #ISTandWithAfreenFatima ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌‌ ಆಗಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ.

ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಫಾತಿಮಾ ಅವರ ತಂದೆ ಜಾವೇದ್ ಅವರೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ. ಪ್ರತಿಭಟನೆಯ ವೇಳೆ ಉದ್ರಿಕ್ತ ಜನರು ಬೈಕ್‌ಗಳು ಮತ್ತು ವಾಹನಗಳನ್ನು ಸುಟ್ಟು ಹಾಕಿದ್ದು, ಪೊಲೀಸ್ ವಾಹನವನ್ನೂ ಸುಟ್ಟು ಹಾಕಲು ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಯನ್ನು ನೆಲಸಮಗೊಳಿಸುವುದಕ್ಕೆ ಕಳೆದ ತಿಂಗಳು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರೆ, ಹಿಂಸಾಚಾರ ನಡೆದಿರುವುದನ್ನು ಇಟ್ಟು ಮನೆಯನ್ನು ನೆಲಸಮಗೊಳಿಸಲಾಗಿದೆ ಎಂದು ಜನರು ಆರೋಪಿಸಿದ್ದು, ಸರ್ಕಾರದ ಕ್ರಮವನ್ನು ‘ಅನ್ಯಾಯ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕರೆಯಲಾಗುತ್ತಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ಯಾರು ಅಫ್ರೀನ್ ಫಾತಿಮಾ?

ವಿದ್ಯಾರ್ಥಿ ಹೋರಾಟಗಾರ್ತಿಯಾಗಿರುವ ಅಫ್ರೀನ್ ಫಾತಿಮಾ ಅವರು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ.

2019-2020ರಲ್ಲಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯಲ್ಲಿ ಅಫ್ರೀನ್‌ ಫಾತಿಮಾ ಸಕ್ರಿಯರಾಗಿದ್ದರು. ಅವರು ಮುಸ್ಲಿಂ ಮಹಿಳೆಯರನ್ನು ಸಂಘಟಿಸಿ, ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಫಾತಿಮಾ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದ ಪದವಿಪೂರ್ವ ವಿದ್ಯಾರ್ಥಿಯಾಗಿರುವ ತನ್ನ ಕಿರಿಯ ಸಹೋದರಿ ಸುಮಯ್ಯಾ ಫಾತಿಮಾ ಅವರೊಂದಿಗೆ ‘ಮುಸ್ಲಿಮ ಅಲಹಾಬಾದ್’ ಎಂಬ ಅಧ್ಯಯನ ವಲಯವನ್ನು ರಚಿಸಿದ್ದರು ಎಂದು ಓಟ್‌ ಲುಕ್ ವರದಿ ಮಾಡಿದೆ.  ಪ್ರಸ್ತುತ ಸ್ಟಡಿ ಸರ್ಕಲ್‌ನಲ್ಲಿ 70 ಹುಡುಗಿಯರು ಸದಸ್ಯರಾಗಿದ್ದು, ಅವರು ವಿವಿಧ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ದೆಹಲಿಯಲ್ಲಿ ಅವರು ಕ್ರಿಯಾಶೀಲರಾಗಿದ್ದು, ಪ್ರಯಾಗ್‌ರಾಜ್‌ನ ಖುಲ್ದಾಬಾದ್‌ನ ಮನ್ಸೂರ್ ಅಲಿ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿ ಅಲ್ಲಿನ ಸಿಎಎ-ಎನ್‌ಆರ್‌ಸಿ ವಿರೋಧಿ ಆಂದೋಲನದಲ್ಲೂ ಭಾಗಿಯಾಗಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅವರ ಮೇಲಿನ ಆರೋಪಗಳೇನು?

ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾಚಾರವನ್ನು ಫಾತಿಮಾ ಅವರ ತಂದೆ ಜಾವೇದ್ ಅವರು ಸಂಘಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜಾವೇದ್ ಅವರು ‘ಬಂದ್’ಗೆ ಕರೆ ನೀಡಿದ್ದರು ಮತ್ತು ವಾಟ್ಸಾಪ್ ಸಂದೇಶಗಳ ಮೂಲಕ ಘಟನೆಯ ಸ್ಥಳಕ್ಕೆ ತಲುಪಲು ಜನರನ್ನು ಕೇಳಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾವೇದ್‌  ಅವರನ್ನು ಬಂಧಿಸಲಾಗಿದ್ದು, ಅವರ ಪತ್ನಿ ಮತ್ತು ಮಗಳನ್ನು ಸಹ ಬಂಧಿಸಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ, ಆದರೆ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಫಾತಿಮಾ ಕೂಡ ತನ್ನ ತಂದೆ ಯೋಜಿಸಿದ್ದಾರೆ ಎಂದು ಆರೋಪಿಸಲಾಗಿರುವ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸಲಾಗುತ್ತಿದೆ ವರದಿಯಾಗಿದೆ. ಹಿಂಸಾಚಾರದಲ್ಲಿ ಅವರು ಭಾಗಿಯಾಗಿರುವುದು ತನಿಖೆಯಲ್ಲಿ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳ ಬುಲ್ಡೋಜರ್ ಸಂಸ್ಕೃತಿ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ತಿರಸ್ಕರಿಸಿದ ಕುಟುಂಬ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ಫಾತಿಮಾ ಅವರ ಕುಟುಂಬ ತಿರಸ್ಕರಿಸಿದೆ. ಫಾತಿಮಾ ಅವರ ಸಹೋದರ ಮೊಹಮ್ಮದ್ ಉಮಾಮ್‌ ಅವರು, ಸಮಯಕ್ಕೆ ಸರಿಯಾಗಿ ನೋಟಿಸ್ ಸ್ವೀಕರಿಸಲಿಲ್ಲ ಎಂದು ಅವರು ಹೇಳಿದ್ದಾರೆ.

“ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರದ (ಪಿಡಿಎ)ದಿಂದ ಮನೆಯ ನಕ್ಷೆಯನ್ನು ಅಂಗೀಕರಿಸದೆ ನಿರ್ಮಿಸಲಾಗಿದೆ. ಇದಕ್ಕಾಗಿ, ಜಾವೇದ್ ಅವರಿಗೆ ಮೇ 10 ರಂದು ನೋಟಿಸ್ ನೀಡಲಾಯಿತು. ಅವರ ಸಮರ್ಥನೆಗಳನ್ನು ಪ್ರಸ್ತುತಪಡಿಸಲು ಮೇ 24ರಂದು ತಿಳಿಸುವಂತೆ ತಿಳಿಸಲಾಯಿತು. ಆದರೆ ಅವರಿಗೆ ಹೇಳಲಾಗಿರುವ ದಿನಾಂಕದಂದು ಜಾವೇದ್ ಅಥವಾ ಅವರ ವಕೀಲರು ಹಾಜರಾಗಲಿಲ್ಲ. ಈ ಬಗ್ಗೆ ಯಾವುದೇ ದಾಖಲೆಯನ್ನು ಹಾಜರುಪಡಿಸಲಾಗಿಲ್ಲ. ಮೇ 25 ರಂದು, ಕೆಡವಲು ಆದೇಶಗಳನ್ನು ನೀಡಲಾಯಿತು” ಎಂದು ಪಿಡಿಎ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಉಮಾಮ್‌ ಹೇಳುವ ಪ್ರಕಾರ ಅವರ ನಿಜವಾದ ಆಸ್ತಿ ಮಾಲಿಕರು ತಾಯಿಯಾಗಿದ್ದು, ಅವರ ಹೆಸರಿನಲ್ಲಿ ನೋಟಿಸ್ ನೀಡಲಾಗಿಲ್ಲ ಎಂದು ದಿ ವೈರ್‌ಗೆ ತಿಳಿಸಿದ್ದಾರೆ.

“ಇದಲ್ಲದೆ, ಜೂನ್ 10 ರಂದು ನೋಟಿಸ್‌ ನೀಡಲಾಗಿದೆ. ಆದರೆ ಜೂನ್ 10 ರಿಂದ ಪೊಲೀಸರು ನಿರಂತರವಾಗಿ ಮನೆಯಲ್ಲಿದ್ದರೂ ಜೂನ್ 11 ರಂದು ಶನಿವಾರ ತಡರಾತ್ರಿ ಅದನ್ನು ಅಂಟಿಸಲಾಗಿದೆ. ಶನಿವಾರದಂದು ನ್ಯಾಯಾಲಯ ಕಾನೂನು ನೆರವು ನೀಡುದಕ್ಕೆ ಸಾಧ್ಯವಿಲ್ಲ ಎಂದು ಖಚಿತಪಡಿಸಿ ನೋಟಿಸ್ ಅನ್ನು ತರಾತುರಿಯಲ್ಲಿ ನೀಡಲಾಗಿದೆ ಎಂಬುದು ಸ್ಪಷ್ಟ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಸಾಮಾಜಿಕ ಮಾಧ್ಯಮಗಳಲ್ಲಿ ಅಫ್ರೀನ್ ಫಾತಿಮಾಗೆ ಭಾರಿ ಬೆಂಬಲ

ಘಟನೆಯನ್ನು ಭಾರತದಾದ್ಯಂತ ವಿರೋಧಿಸಲಾಗಿದ್ದು,ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಗಣ್ಯ ವ್ಯಕ್ತಿಗಳು ಫಾತಿಮಾಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಲೇಖಕಿ ಮತ್ತು ಹೋರಾಟಗಾರ್ತಿ ಗುರ್ಮೆಹರ್ ಕೌರ್ ಅವರು ಫಾತಿಮಾ ಅವರ ಮನೆಯ ಧ್ವಂಸವನ್ನು “ಸ್ವಯಂ ನಾಗರಿಕರ ಮೇಲೆ ಪ್ರಭುತ್ವ ಪ್ರಾಯೋಜಿತ ದಾಳಿ” ಎಂದು ಕರೆದಿದ್ದಾರೆ.

ಹೋರಾಟಗಾರ ಮೊಹಮ್ಮದ್ ಇರ್ಷಾದ್, “ಫಾತಿಮಾ ನಮ್ಮ ನಡುವಿನ ಗಟ್ಟಿ ಧ್ವನಿಯಾಗಿದ್ದಾರೆ. ಸರ್ಕಾರವು ತಾನು ಬಹಿರಂಗಗೊಳ್ಳುವ ಭಯದಿಂದ ಭಿನ್ನ ಧ್ವನಿಗಳನ್ನು ಅಡಗಿಸುವಂತೆ ಮಾಡಿದೆ. ನೀವು ಎಷ್ಟು ಬಂಧನಗಳನ್ನು ಮಾಡುತ್ತೀರಿ? ಎಷ್ಟು ಮನೆಗಳನ್ನು ಧ್ವಂಸ ಮಾಡುತ್ತೀರಿ? ಏನೇ ಆಗಲಿ, ನಾವು ಬೇಷರತ್ತಾಗಿ ಒಬ್ಬರಿಗೊಬ್ಬರು ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌ ಕೂಡ ಫಾತಿಮಾ ಅವರನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. JNU ನಲ್ಲಿ ವಿದ್ಯಾಭ್ಯಾಸವನ್ನು ಮಾಡಲಾಗಿದೆ ಅಂದರೆ ಮುಗೀತು ಬಿಡಿ ಅಲ್ಲಿ ಭಯೋತ್ಪಾದನೆ ಗೆ ಪೂರ್ವ ತಯಾರಿ ಆಗಿಯೇ ಬಂದಿರುವ ದೇಶದ್ರೋಹಿಗಳೇ ಮಗಳು ಹಾಗೂ ತಂದೆ ಕೂಡಾ ,ಮನೆಯ ಧ್ವಂಸದೊಂದಿಗೆ ,ಸರಕಾರ ದ ಸೌಲಭ್ಯಗಳು ಸಹ ಇವರಿಗೆ ಸಿಗದಂತೆ ಮಾಡಬೇಕು ,ಇವಳ ತಂದೆಗೆ ನರ ಕಟ್ ಮಾಡಿ ಬಿಕ್ಷಾ ಪಾತ್ರೆ ಕೈಗೆ ನೀಡಬೇಕು ಆಗ ಈ ಭಶೀರರಿಗೆ ಭಯ ಬರಲು ಸಾಧ್ಯ,ಯೋಗಿ ಸರ್ಕಾರಕ್ಕೆ ನಮ್ಮ ಪೂರ್ಣ ಬೆಂಬಲ ಇದೆ ಜೈ ಹಿಂದೂ ರಾಷ್ಟ್ರ

  2. ಇವರ ಮನೆ ದ್ವಂಸ ಮಾಡಿ, ಯೋಗಿ ತನ್ನ ಮನೆಯಲ್ಲಿ ಕೂರಿಸ್ತಾನೆಯೇ…..

  3. JNU ಒಂದು ಕೇಂದ್ರ ಸರ್ಕಾರದ ವಿಶ್ವವಿದ್ಯಾಲಯವಾಗಿದ್ದು, ಅದನ್ನು ಹೀಯಾಳಿಸಿ ಮಾತನಾಡಿದ್ದು ಕೇಂದ್ರ ಸರ್ಕಾರವನ್ನು ಹೀಯಾಳಿಸಿ ಮಾತನಾಡಿದಂತೆ, ಅಂದರೆ ನಮ್ಮ ಪ್ರಧಾನಿಗಳಾದ ಶ್ರೀ ಮೋದಿಯವರನ್ನೇ ಹೀಯಾಳಿಸಿದಂತೆ. ಹೀಗಾಗಿ ನಿಮ್ಮ ಮೇಲೆ ಪೊಲೀಸ್ ಕೇಸ್ ಕೂಡ ಹಾಕಬಹುದು.
    ಎರಡನೇದಾಗಿ ಅಲ್ಲಿ ಭಯೋತ್ಪಾದನೆಗೆ ಪೂರ್ವ ತಯಾರಿ ನಡೆದಿದೆ ಎಂದು ಹೇಳಿದರೆ ಕೇಂದ್ರ ಸರ್ಕಾರವೇ ಭಯೋತ್ಪಾದನೆಗೆ ಒತ್ತು ಕೊಟ್ಟಿದೆ ಎಂದು ಹೇಳಿದಂತೆ. ಹೀಗಾಗಿ ನಿಮ್ಮ ಮೇಲೆ ಎರಡನೇ ಕೇಸನ್ನು ಕೂಡ ಹಾಕಬಹುದು ಕೇವಲ ನೆಹರುರವರ ಹೆಸರು ಇದ್ದ ಮಾತ್ರಕ್ಕೆ ಅದು ಕಾಂಗ್ರೆಸ್ ಪಕ್ಷದ ವಿಶ್ವವಿದ್ಯಾಲಯವಾಗುವುದಿಲ್ಲ.
    JNU ವಿಶ್ವವಿದ್ಯಾಲಯವನ್ನು ಅತ್ಯುನ್ನತ ವಿಶ್ವವಿದ್ಯಾಲಯ ಎಂದು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಬೇಕಾದರೆ ಗೂಗಲ್ ಮಾಡಿ ನೋಡಿ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...