Homeರಾಷ್ಟ್ರೀಯಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ - ಅಫ್ರೀನ್‌ ಫಾತಿಮಾ ಯಾರು?

ಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ – ಅಫ್ರೀನ್‌ ಫಾತಿಮಾ ಯಾರು?

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಹೋರಾಟಗಾರ್ತಿ ಅಫ್ರೀನ್ ಫಾತಿಮಾ ಮತ್ತು ಅವರ ತಂದೆ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಧ್ವಂಸಗೊಳಿಸಿದ ನಂತರ, ಟ್ವಿಟರ್‌ನಲ್ಲಿ #ISTandWithAfreenFatima ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌‌ ಆಗಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ.

ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಫಾತಿಮಾ ಅವರ ತಂದೆ ಜಾವೇದ್ ಅವರೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ. ಪ್ರತಿಭಟನೆಯ ವೇಳೆ ಉದ್ರಿಕ್ತ ಜನರು ಬೈಕ್‌ಗಳು ಮತ್ತು ವಾಹನಗಳನ್ನು ಸುಟ್ಟು ಹಾಕಿದ್ದು, ಪೊಲೀಸ್ ವಾಹನವನ್ನೂ ಸುಟ್ಟು ಹಾಕಲು ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಯನ್ನು ನೆಲಸಮಗೊಳಿಸುವುದಕ್ಕೆ ಕಳೆದ ತಿಂಗಳು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರೆ, ಹಿಂಸಾಚಾರ ನಡೆದಿರುವುದನ್ನು ಇಟ್ಟು ಮನೆಯನ್ನು ನೆಲಸಮಗೊಳಿಸಲಾಗಿದೆ ಎಂದು ಜನರು ಆರೋಪಿಸಿದ್ದು, ಸರ್ಕಾರದ ಕ್ರಮವನ್ನು ‘ಅನ್ಯಾಯ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕರೆಯಲಾಗುತ್ತಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ಯಾರು ಅಫ್ರೀನ್ ಫಾತಿಮಾ?

ವಿದ್ಯಾರ್ಥಿ ಹೋರಾಟಗಾರ್ತಿಯಾಗಿರುವ ಅಫ್ರೀನ್ ಫಾತಿಮಾ ಅವರು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ.

2019-2020ರಲ್ಲಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯಲ್ಲಿ ಅಫ್ರೀನ್‌ ಫಾತಿಮಾ ಸಕ್ರಿಯರಾಗಿದ್ದರು. ಅವರು ಮುಸ್ಲಿಂ ಮಹಿಳೆಯರನ್ನು ಸಂಘಟಿಸಿ, ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಫಾತಿಮಾ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದ ಪದವಿಪೂರ್ವ ವಿದ್ಯಾರ್ಥಿಯಾಗಿರುವ ತನ್ನ ಕಿರಿಯ ಸಹೋದರಿ ಸುಮಯ್ಯಾ ಫಾತಿಮಾ ಅವರೊಂದಿಗೆ ‘ಮುಸ್ಲಿಮ ಅಲಹಾಬಾದ್’ ಎಂಬ ಅಧ್ಯಯನ ವಲಯವನ್ನು ರಚಿಸಿದ್ದರು ಎಂದು ಓಟ್‌ ಲುಕ್ ವರದಿ ಮಾಡಿದೆ.  ಪ್ರಸ್ತುತ ಸ್ಟಡಿ ಸರ್ಕಲ್‌ನಲ್ಲಿ 70 ಹುಡುಗಿಯರು ಸದಸ್ಯರಾಗಿದ್ದು, ಅವರು ವಿವಿಧ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ದೆಹಲಿಯಲ್ಲಿ ಅವರು ಕ್ರಿಯಾಶೀಲರಾಗಿದ್ದು, ಪ್ರಯಾಗ್‌ರಾಜ್‌ನ ಖುಲ್ದಾಬಾದ್‌ನ ಮನ್ಸೂರ್ ಅಲಿ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿ ಅಲ್ಲಿನ ಸಿಎಎ-ಎನ್‌ಆರ್‌ಸಿ ವಿರೋಧಿ ಆಂದೋಲನದಲ್ಲೂ ಭಾಗಿಯಾಗಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅವರ ಮೇಲಿನ ಆರೋಪಗಳೇನು?

ಪ್ರಯಾಗ್‌ರಾಜ್‌ನಲ್ಲಿ ಶುಕ್ರವಾರ ನಡೆದ ಹಿಂಸಾಚಾರವನ್ನು ಫಾತಿಮಾ ಅವರ ತಂದೆ ಜಾವೇದ್ ಅವರು ಸಂಘಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜಾವೇದ್ ಅವರು ‘ಬಂದ್’ಗೆ ಕರೆ ನೀಡಿದ್ದರು ಮತ್ತು ವಾಟ್ಸಾಪ್ ಸಂದೇಶಗಳ ಮೂಲಕ ಘಟನೆಯ ಸ್ಥಳಕ್ಕೆ ತಲುಪಲು ಜನರನ್ನು ಕೇಳಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾವೇದ್‌  ಅವರನ್ನು ಬಂಧಿಸಲಾಗಿದ್ದು, ಅವರ ಪತ್ನಿ ಮತ್ತು ಮಗಳನ್ನು ಸಹ ಬಂಧಿಸಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ, ಆದರೆ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಫಾತಿಮಾ ಕೂಡ ತನ್ನ ತಂದೆ ಯೋಜಿಸಿದ್ದಾರೆ ಎಂದು ಆರೋಪಿಸಲಾಗಿರುವ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸಲಾಗುತ್ತಿದೆ ವರದಿಯಾಗಿದೆ. ಹಿಂಸಾಚಾರದಲ್ಲಿ ಅವರು ಭಾಗಿಯಾಗಿರುವುದು ತನಿಖೆಯಲ್ಲಿ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳ ಬುಲ್ಡೋಜರ್ ಸಂಸ್ಕೃತಿ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ತಿರಸ್ಕರಿಸಿದ ಕುಟುಂಬ

ಮನೆ ನೆಲಸಮಗೊಳಿಸಿರುವ ಬಗ್ಗೆ ಅಧಿಕಾರಿಗಳ ವಾದವನ್ನು ಫಾತಿಮಾ ಅವರ ಕುಟುಂಬ ತಿರಸ್ಕರಿಸಿದೆ. ಫಾತಿಮಾ ಅವರ ಸಹೋದರ ಮೊಹಮ್ಮದ್ ಉಮಾಮ್‌ ಅವರು, ಸಮಯಕ್ಕೆ ಸರಿಯಾಗಿ ನೋಟಿಸ್ ಸ್ವೀಕರಿಸಲಿಲ್ಲ ಎಂದು ಅವರು ಹೇಳಿದ್ದಾರೆ.

“ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರದ (ಪಿಡಿಎ)ದಿಂದ ಮನೆಯ ನಕ್ಷೆಯನ್ನು ಅಂಗೀಕರಿಸದೆ ನಿರ್ಮಿಸಲಾಗಿದೆ. ಇದಕ್ಕಾಗಿ, ಜಾವೇದ್ ಅವರಿಗೆ ಮೇ 10 ರಂದು ನೋಟಿಸ್ ನೀಡಲಾಯಿತು. ಅವರ ಸಮರ್ಥನೆಗಳನ್ನು ಪ್ರಸ್ತುತಪಡಿಸಲು ಮೇ 24ರಂದು ತಿಳಿಸುವಂತೆ ತಿಳಿಸಲಾಯಿತು. ಆದರೆ ಅವರಿಗೆ ಹೇಳಲಾಗಿರುವ ದಿನಾಂಕದಂದು ಜಾವೇದ್ ಅಥವಾ ಅವರ ವಕೀಲರು ಹಾಜರಾಗಲಿಲ್ಲ. ಈ ಬಗ್ಗೆ ಯಾವುದೇ ದಾಖಲೆಯನ್ನು ಹಾಜರುಪಡಿಸಲಾಗಿಲ್ಲ. ಮೇ 25 ರಂದು, ಕೆಡವಲು ಆದೇಶಗಳನ್ನು ನೀಡಲಾಯಿತು” ಎಂದು ಪಿಡಿಎ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಉಮಾಮ್‌ ಹೇಳುವ ಪ್ರಕಾರ ಅವರ ನಿಜವಾದ ಆಸ್ತಿ ಮಾಲಿಕರು ತಾಯಿಯಾಗಿದ್ದು, ಅವರ ಹೆಸರಿನಲ್ಲಿ ನೋಟಿಸ್ ನೀಡಲಾಗಿಲ್ಲ ಎಂದು ದಿ ವೈರ್‌ಗೆ ತಿಳಿಸಿದ್ದಾರೆ.

“ಇದಲ್ಲದೆ, ಜೂನ್ 10 ರಂದು ನೋಟಿಸ್‌ ನೀಡಲಾಗಿದೆ. ಆದರೆ ಜೂನ್ 10 ರಿಂದ ಪೊಲೀಸರು ನಿರಂತರವಾಗಿ ಮನೆಯಲ್ಲಿದ್ದರೂ ಜೂನ್ 11 ರಂದು ಶನಿವಾರ ತಡರಾತ್ರಿ ಅದನ್ನು ಅಂಟಿಸಲಾಗಿದೆ. ಶನಿವಾರದಂದು ನ್ಯಾಯಾಲಯ ಕಾನೂನು ನೆರವು ನೀಡುದಕ್ಕೆ ಸಾಧ್ಯವಿಲ್ಲ ಎಂದು ಖಚಿತಪಡಿಸಿ ನೋಟಿಸ್ ಅನ್ನು ತರಾತುರಿಯಲ್ಲಿ ನೀಡಲಾಗಿದೆ ಎಂಬುದು ಸ್ಪಷ್ಟ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಸಾಮಾಜಿಕ ಮಾಧ್ಯಮಗಳಲ್ಲಿ ಅಫ್ರೀನ್ ಫಾತಿಮಾಗೆ ಭಾರಿ ಬೆಂಬಲ

ಘಟನೆಯನ್ನು ಭಾರತದಾದ್ಯಂತ ವಿರೋಧಿಸಲಾಗಿದ್ದು,ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಗಣ್ಯ ವ್ಯಕ್ತಿಗಳು ಫಾತಿಮಾಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಲೇಖಕಿ ಮತ್ತು ಹೋರಾಟಗಾರ್ತಿ ಗುರ್ಮೆಹರ್ ಕೌರ್ ಅವರು ಫಾತಿಮಾ ಅವರ ಮನೆಯ ಧ್ವಂಸವನ್ನು “ಸ್ವಯಂ ನಾಗರಿಕರ ಮೇಲೆ ಪ್ರಭುತ್ವ ಪ್ರಾಯೋಜಿತ ದಾಳಿ” ಎಂದು ಕರೆದಿದ್ದಾರೆ.

ಹೋರಾಟಗಾರ ಮೊಹಮ್ಮದ್ ಇರ್ಷಾದ್, “ಫಾತಿಮಾ ನಮ್ಮ ನಡುವಿನ ಗಟ್ಟಿ ಧ್ವನಿಯಾಗಿದ್ದಾರೆ. ಸರ್ಕಾರವು ತಾನು ಬಹಿರಂಗಗೊಳ್ಳುವ ಭಯದಿಂದ ಭಿನ್ನ ಧ್ವನಿಗಳನ್ನು ಅಡಗಿಸುವಂತೆ ಮಾಡಿದೆ. ನೀವು ಎಷ್ಟು ಬಂಧನಗಳನ್ನು ಮಾಡುತ್ತೀರಿ? ಎಷ್ಟು ಮನೆಗಳನ್ನು ಧ್ವಂಸ ಮಾಡುತ್ತೀರಿ? ಏನೇ ಆಗಲಿ, ನಾವು ಬೇಷರತ್ತಾಗಿ ಒಬ್ಬರಿಗೊಬ್ಬರು ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌ ಕೂಡ ಫಾತಿಮಾ ಅವರನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. JNU ನಲ್ಲಿ ವಿದ್ಯಾಭ್ಯಾಸವನ್ನು ಮಾಡಲಾಗಿದೆ ಅಂದರೆ ಮುಗೀತು ಬಿಡಿ ಅಲ್ಲಿ ಭಯೋತ್ಪಾದನೆ ಗೆ ಪೂರ್ವ ತಯಾರಿ ಆಗಿಯೇ ಬಂದಿರುವ ದೇಶದ್ರೋಹಿಗಳೇ ಮಗಳು ಹಾಗೂ ತಂದೆ ಕೂಡಾ ,ಮನೆಯ ಧ್ವಂಸದೊಂದಿಗೆ ,ಸರಕಾರ ದ ಸೌಲಭ್ಯಗಳು ಸಹ ಇವರಿಗೆ ಸಿಗದಂತೆ ಮಾಡಬೇಕು ,ಇವಳ ತಂದೆಗೆ ನರ ಕಟ್ ಮಾಡಿ ಬಿಕ್ಷಾ ಪಾತ್ರೆ ಕೈಗೆ ನೀಡಬೇಕು ಆಗ ಈ ಭಶೀರರಿಗೆ ಭಯ ಬರಲು ಸಾಧ್ಯ,ಯೋಗಿ ಸರ್ಕಾರಕ್ಕೆ ನಮ್ಮ ಪೂರ್ಣ ಬೆಂಬಲ ಇದೆ ಜೈ ಹಿಂದೂ ರಾಷ್ಟ್ರ

  2. ಇವರ ಮನೆ ದ್ವಂಸ ಮಾಡಿ, ಯೋಗಿ ತನ್ನ ಮನೆಯಲ್ಲಿ ಕೂರಿಸ್ತಾನೆಯೇ…..

  3. JNU ಒಂದು ಕೇಂದ್ರ ಸರ್ಕಾರದ ವಿಶ್ವವಿದ್ಯಾಲಯವಾಗಿದ್ದು, ಅದನ್ನು ಹೀಯಾಳಿಸಿ ಮಾತನಾಡಿದ್ದು ಕೇಂದ್ರ ಸರ್ಕಾರವನ್ನು ಹೀಯಾಳಿಸಿ ಮಾತನಾಡಿದಂತೆ, ಅಂದರೆ ನಮ್ಮ ಪ್ರಧಾನಿಗಳಾದ ಶ್ರೀ ಮೋದಿಯವರನ್ನೇ ಹೀಯಾಳಿಸಿದಂತೆ. ಹೀಗಾಗಿ ನಿಮ್ಮ ಮೇಲೆ ಪೊಲೀಸ್ ಕೇಸ್ ಕೂಡ ಹಾಕಬಹುದು.
    ಎರಡನೇದಾಗಿ ಅಲ್ಲಿ ಭಯೋತ್ಪಾದನೆಗೆ ಪೂರ್ವ ತಯಾರಿ ನಡೆದಿದೆ ಎಂದು ಹೇಳಿದರೆ ಕೇಂದ್ರ ಸರ್ಕಾರವೇ ಭಯೋತ್ಪಾದನೆಗೆ ಒತ್ತು ಕೊಟ್ಟಿದೆ ಎಂದು ಹೇಳಿದಂತೆ. ಹೀಗಾಗಿ ನಿಮ್ಮ ಮೇಲೆ ಎರಡನೇ ಕೇಸನ್ನು ಕೂಡ ಹಾಕಬಹುದು ಕೇವಲ ನೆಹರುರವರ ಹೆಸರು ಇದ್ದ ಮಾತ್ರಕ್ಕೆ ಅದು ಕಾಂಗ್ರೆಸ್ ಪಕ್ಷದ ವಿಶ್ವವಿದ್ಯಾಲಯವಾಗುವುದಿಲ್ಲ.
    JNU ವಿಶ್ವವಿದ್ಯಾಲಯವನ್ನು ಅತ್ಯುನ್ನತ ವಿಶ್ವವಿದ್ಯಾಲಯ ಎಂದು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಬೇಕಾದರೆ ಗೂಗಲ್ ಮಾಡಿ ನೋಡಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...