Homeಮುಖಪುಟನುಸುಳುಕೋರರೆಂಬ ಆರೋಪ: 36 ಜನರನ್ನು ಬಾಂಗ್ಲಾದೇಶದ ಗಡಿಗೆ ತಳ್ಳಿದ ಅಸ್ಸಾಂ ಪೊಲೀಸ್

ನುಸುಳುಕೋರರೆಂಬ ಆರೋಪ: 36 ಜನರನ್ನು ಬಾಂಗ್ಲಾದೇಶದ ಗಡಿಗೆ ತಳ್ಳಿದ ಅಸ್ಸಾಂ ಪೊಲೀಸ್

- Advertisement -
- Advertisement -

ಗುವಾಹಟಿ, ಅಸ್ಸಾಂ: ಅಕ್ರಮವಾಗಿ ಒಳನುಸುಳಿದವರ ವಿರುದ್ಧ ಪ್ರಮುಖ ಕಾರ್ಯಾಚರಣೆ ನಡೆಸಿದ ಅಸ್ಸಾಂ ಪೊಲೀಸರು, ಶ್ರೀಭೂಮಿ ಮತ್ತು ದಕ್ಷಿಣ ಸಾಲ್ಮರ ಪ್ರದೇಶಗಳಿಂದ 36 ಬಾಂಗ್ಲಾದೇಶಿಯರನ್ನು ಹಿಮ್ಮೆಟ್ಟಿಸಿ ಅವರ ದೇಶಕ್ಕೆ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡ ಶರ್ಮಾ, ” ಶ್ರೀಭೂಮಿ ಮತ್ತು ದಕ್ಷಿಣ ಸಾಲ್ಮರದಿಂದ 36 ಬಾಂಗ್ಲಾದೇಶದ ಅಕ್ರಮ ಒಳನುಸುಳಿದವರನ್ನು ಬಾಂಗ್ಲಾದೇಶಕ್ಕೆ ಹಿಮ್ಮೆಟ್ಟಿಸಲಾಗಿದೆ. ಈ ಅಕ್ರಮ ಒಳನುಸುಳಿದವರು ನಮ್ಮ ಜನಸಂಖ್ಯೆಯನ್ನು ಬದಲಾಯಿಸುತ್ತಿದ್ದಾರೆ ಮತ್ತು ಸ್ಥಳೀಯ ಜನರ ಹಕ್ಕುಗಳನ್ನು ಉಲ್ಲಂಘಿಸುತ್ತಿದ್ದಾರೆ. ಇವರನ್ನು ಅವರಿಗೆ ಸೇರಿದ ಜಾಗಕ್ಕೆ ಹಿಂದಿರುಗಿಸಲಾಗುವುದು” ಎಂದು ಬರೆದಿದ್ದಾರೆ.

ಗ್ರಾಮಗಳಲ್ಲಿ ಜಾನುವಾರುಗಳಿಗೆ ಮೀಸಲಿಟ್ಟ ಪ್ರದೇಶಗಳು (ವಿಜಿಆರ್), ವೃತ್ತಿಪರ ಜಾನುವಾರುಗಳಿಗೆ ಮೀಸಲಿಟ್ಟ ಪ್ರದೇಶಗಳು (ಪಿಜಿಆರ್), ಸತ್ರಗಳು, ನಾಮ್‌ಘರ್‌ಗಳು, ಅರಣ್ಯ ಪ್ರದೇಶಗಳು ಮತ್ತು ಇತರ ಸಾರ್ವಜನಿಕ ಪ್ರದೇಶಗಳ ಮೇಲಿನ ಎಲ್ಲ ಅನಧಿಕೃತ ಒತ್ತುವರಿಗಳನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಶರ್ಮಾ ಭಾನುವಾರ ನೀಡಿದ ಹೇಳಿಕೆಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

“ಸರ್ಕಾರವು ವಿಜಿಆರ್, ಪಿಜಿಆರ್, ಸತ್ರಗಳು, ನಾಮ್‌ಘರ್‌ಗಳು ಮತ್ತು ರಾಜ್ಯಾದ್ಯಂತದ ಅರಣ್ಯ ಪ್ರದೇಶಗಳಲ್ಲಿನ ಎಲ್ಲ ಅಕ್ರಮ ಒತ್ತುವರಿಗಳನ್ನು ವ್ಯವಸ್ಥಿತ ಮತ್ತು ಹಂತ ಹಂತವಾಗಿ ತೆರವುಗೊಳಿಸಲಿದೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ

ರಾಜ್ಯದಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆಯ ನಡುವೆಯೇ ಅಸ್ಸಾಂ ಬಾಂಗ್ಲಾದೇಶದಿಂದ ಅಕ್ರಮವಾಗಿ ಒಳನುಸುಳಿದವರು ಎಂಬ ಆರೋಪದ ವಿರುದ್ಧ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ.

ಈ ತಿಂಗಳ ಆರಂಭದಲ್ಲಿ, ರಾಜ್ಯ ಪೊಲೀಸರು ಶ್ರೀಭೂಮಿ ವಲಯದಿಂದ 10 ಅಕ್ರಮ ಬಾಂಗ್ಲಾದೇಶದ ಒಳನುಸುಳಿದವರನ್ನು ಹಿಂದಕ್ಕೆ ಕಳುಹಿಸಿದ್ದರು ಎಂದು ವರದಿಯಾಗಿತ್ತು.

ಅಸ್ಸಾಂ ಸರ್ಕಾರವು ಸರ್ಕಾರಿ ಭೂಮಿ, ಅರಣ್ಯ ಭೂಮಿ ಮತ್ತು ವಿಜಿಆರ್/ಪಿಜಿಆರ್ ಭೂಮಿಗಳನ್ನು ಅಕ್ರಮ ನಿವಾಸಿಗಳು ಅತಿಕ್ರಮಿಸಿದ್ದಾರೆ ಎಂದು ಆರೋಪಿಸಿ ಅವರನ್ನು ತೆರವುಗೊಳಿಸಲು ರಾಜ್ಯದ ವಿವಿಧ ಭಾಗಗಳಲ್ಲಿ ತೆರವು ಕಾರ್ಯಾಚರಣೆಗಳನ್ನು ನಡೆಸುತ್ತಿದೆ.

ಈಗಾಗಲೇ ಅಕ್ರಮ ಒಳನುಸುಳಿದವರಿಂದ 1.29 ಲಕ್ಷ ಬಿಘಾ ಭೂಮಿಯನ್ನು ಮರಳಿ ಪಡೆದಿದ್ದೇವೆ ಎಂದು ಅಸ್ಸಾಂ ಸರ್ಕಾರ ಹೇಳಿಕೊಂಡಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಗೋಲಘಾಟ್ ಜಿಲ್ಲೆಯ ಉರಿಯಾಂಘಾಟ್‌ಗೆ ಭೇಟಿ ನೀಡಿ, ಅತಿಕ್ರಮಣಕ್ಕೊಳಗಾಗಿವೆ ಎಂದು ಆರೋಪಿಸಲಾಗಿರುವ ಪ್ರದೇಶಗಳನ್ನು ಪರಿಶೀಲಿಸಿದರು. ಈ ಪ್ರದೇಶಗಳಿಗೆ ರಾಜ್ಯ ಸರ್ಕಾರ ತೆರವು ನೋಟಿಸ್‌ಗಳನ್ನು ನೀಡಿತ್ತು.

ಈ ಪ್ರದೇಶದಲ್ಲಿ ಸಾವಿರಾರು ಬಿಘಾ ಭೂಮಿ ಅಕ್ರಮವಾಗಿ ಒತ್ತುವರಿಯಾಗಿದೆ ಎಂದು ಶರ್ಮಾ ಆರೋಪಿಸಿದರು. ಕೆಲವು ಕುಟುಂಬಗಳು 300 ರಿಂದ 400 ಬಿಘಾ ಭೂಮಿಯನ್ನು ಅತಿಕ್ರಮಿಸಿ ವಿವಿಧ ಆರ್ಥಿಕ ಚಟುವಟಿಕೆಗಳಿಗೆ ಬಳಸಿಕೊಂಡಿವೆ ಎಂದು ಅವರು ಆರೋಪಿಸಿದರು.

ಈ ರೀತಿಯ ಬೆಳವಣಿಗೆಗಳಿಗೆ ಸರ್ಕಾರ ಸುಮ್ಮನಿರಲು ಸಾಧ್ಯವಿಲ್ಲ ಎಂದು ಒತ್ತಿಹೇಳಿದ ಮುಖ್ಯಮಂತ್ರಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕ್ರಮಗಳಿಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

‘ಬಾಂಗ್ಲಾದೇಶದವರಿಗೆ ಸ್ವಾಗತವಿಲ್ಲ’: ಸೈಯದಾ ಹಮೀದ್ ಅವರ ಹೇಳಿಕೆಗೆ ಅಸ್ಸಾಂ ಸಿಎಂ ಶರ್ಮಾ ತೀವ್ರ ಆಕ್ಷೇಪ

ಹಿಂದಿನ ದಿನ, ಮುಖ್ಯಮಂತ್ರಿ ಶರ್ಮಾ ಮಾಜಿ ಯೋಜನಾ ಆಯೋಗದ ಸದಸ್ಯೆ ಸೈಯದಾ ಹಮೀದ್ ಅವರ ಹೇಳಿಕೆಯನ್ನು ಟೀಕಿಸಿದರು. ಹಮೀದ್ “ಇಲ್ಲೇ ಹುಟ್ಟಿ ಬೆಳೆದವರು  ಭಾರತದಲ್ಲಿ ಬದುಕಬಹುದು” ಎಂದು ಹೇಳಿದ್ದರು. ಶರ್ಮಾ ಇದನ್ನು ರಾಜ್ಯದಲ್ಲಿ ಅಕ್ರಮ ಒಳನುಸುಳಿದವರನ್ನು ಕಾನೂನುಬದ್ಧಗೊಳಿಸುವ ಪ್ರಯತ್ನ ಎಂದು ಆರೋಪಿಸಿದರು.

ಅಸ್ಸಾಂಗೆ ಬಾಂಗ್ಲಾದೇಶದವರಿಗೆ ಸ್ವಾಗತವಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಅವರಿಗೆ ಸಹಾನುಭೂತಿ ಹೊಂದಿರುವವರು ಅವರನ್ನು ತಮ್ಮ ಸ್ವಂತ ಹಿತ್ತಲಿನಲ್ಲಿ ಇಟ್ಟುಕೊಳ್ಳಬಹುದು ಎಂದು ಸೂಚಿಸಿದರು.

ಎಕ್ಸ್‌ನಲ್ಲಿ ಶರ್ಮಾ, “ಗಾಂಧಿ ಕುಟುಂಬದ ನಿಕಟ ವಿಶ್ವಾಸಿ ಸೈಯದಾ ಹಮೀದ್ ಅವರಂತಹ ಜನರು ಅಕ್ರಮ ಒಳನುಸುಳಿದವರನ್ನು ಕಾನೂನುಬದ್ಧಗೊಳಿಸುತ್ತಾರೆ, ಏಕೆಂದರೆ ಅವರು ಅಸ್ಸಾಂ ಅನ್ನು ಪಾಕಿಸ್ತಾನದ ಭಾಗವಾಗಿಸುವ ಜಿನ್ನಾ ಅವರ ಕನಸನ್ನು ನನಸಾಗಿಸಲು ಪ್ರಯತ್ನಿಸುತ್ತಿದ್ದಾರೆ. ಇಂದು, ಇವರಂತಹವರ ಮೌನ ಬೆಂಬಲದಿಂದ ಅಸ್ಸಾಮಿ ಗುರುತು ಅಳಿವಿನ ಅಂಚಿನಲ್ಲಿದೆ. ಆದರೆ ನಾವು ಲಚಿತ್ ಬರ್ಫುಕನ್ ಅವರ ಮಕ್ಕಳು. ನಮ್ಮ ರಾಜ್ಯ ಮತ್ತು ನಮ್ಮ ಗುರುತನ್ನು ಉಳಿಸಲು ನಮ್ಮ ಕೊನೆಯ ಹನಿ ರಕ್ತ ಇರುವವರೆಗೂ ಹೋರಾಡುತ್ತೇವೆ” ಎಂದು ಬರೆದುಕೊಂಡಿದ್ದಾರೆ.

“ನಾನು ಇದನ್ನು ಸ್ಪಷ್ಟಪಡಿಸುತ್ತೇನೆ: ಬಾಂಗ್ಲಾದೇಶದವರಿಗೆ ಅಸ್ಸಾಂನಲ್ಲಿ ಸ್ವಾಗತವಿಲ್ಲ; ಇದು ಅವರ ಭೂಮಿಯಲ್ಲ. ಅವರಿಗೆ ಸಹಾನುಭೂತಿ ಹೊಂದಿರುವವರು ಅವರನ್ನು ತಮ್ಮ ಸ್ವಂತ ಹಿತ್ತಲಿನಲ್ಲಿ ಇಟ್ಟುಕೊಳ್ಳಬಹುದು. ಅಸ್ಸಾಂ ಅಕ್ರಮ ಒಳನುಸುಳಿದವರಿಗೆ ಸಿಗುವಂಥದ್ದಲ್ಲ, ಈಗಲೂ ಅಲ್ಲ, ಎಂದಿಗೂ ಅಲ್ಲ” ಎಂದು ಅವರು ಹೇಳಿದ್ದರು.

ತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...