Homeಮುಖಪುಟಸಿಯಾನಾ ಹಿಂಸಾಚಾರದ ಆರೋಪಿಗೆ ಪಕ್ಷದ ನಾಯಕತ್ವ ಕೊಟ್ಟ ಬಿಜೆಪಿ!

ಸಿಯಾನಾ ಹಿಂಸಾಚಾರದ ಆರೋಪಿಗೆ ಪಕ್ಷದ ನಾಯಕತ್ವ ಕೊಟ್ಟ ಬಿಜೆಪಿ!

- Advertisement -
- Advertisement -

ಸಿಯಾನಾ ಹಿಂಸಾಚಾರದ ಆರೋಪಿಯನ್ನು ಬಿಜೆಪಿ ಪಕ್ಷದ ಬುಲಂದ್‌ಶಹರ್‌ ವಲಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿ ಇಬ್ಬರ ಸಾವಿಗೆ ಕಾರಣವಾದ ಹಿಂಸಾಚಾರದ ಆರೋಪಿಗೆ ಬಿಜೆಪಿಯ ಸ್ಥಳೀಯ ನಾಯಕತ್ವವನ್ನು ನೀಡಲಾಗಿದೆ.

ಬಿಜೆಪಿಯ ಉತ್ತರಪ್ರದೇಶ ಘಟಕವು ಬುಲಂದ್‌ಶಹರ್‌ ಬಿಜೆಪಿ ವಲಯಾಧ್ಯಕ್ಷರನ್ನಾಗಿ ಸಚಿನ್ ಅಹ್ಲಾವತ್ ಎಂಬಾತನನ್ನು ನೇಮಿಸಿದೆ. ಈತ  2018ರಲ್ಲಿ ನಡೆದ ಉತ್ತರಪ್ರದೇಶದ ಬುಲಂದ್‌ಶಹರ್‌ನ ಸಿಯಾನಾದಲ್ಲಿ ಗೋ ಹತ್ಯೆ ನೆಪದಲ್ಲಿ ನಡೆದ ಹಿಂಸಾಚಾರದ ಆರೋಪಿಯಾಗಿದ್ದಾನೆ. ಹಿಂಸಾಚಾರದಲ್ಲಿ ಪೊಲೀಸ್‌ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆ ಮತ್ತು ಉದ್ರಿಕ್ತರ ಗುಂಪಿನಲ್ಲಿದ್ದ ಸುಮಿತ್‌ ಕುಮಾರ್‌ ಚಿಂಗರಾವಟಿ ಎಂಬಾತನ ಸಾವು ಸಂಭವಿಸಿತ್ತು.

ಬಿಜೆಪಿಯ ರಾಜ್ಯ ಘಟಕ ಕಳೆದ ವಾರ ಬಿಜೆಪಿಯ 31 ವಲಯಾಧ್ಯಕ್ಷರನ್ನು ನೇಮಿಸಿದೆ. 38 ವರ್ಷದ ಸಚಿನ್‌ ಅಹ್ಲಾವತ್ ಕೂಡ ಪಟ್ಟಿಯಲ್ಲಿ ಸೇರಿದ್ದಾನೆ. ಅವನನ್ನು ಬಿಬಿ ನಗರ ಮಂಡಲದ ಅಧ್ಯಕ್ಷರನ್ನಾಗಿ ಬಿಜೆಪಿ ನೇಮಕ ಮಾಡಿದೆ. ಈತ ಹಿಂಸಾಚಾರ ಪ್ರಕರಣದಲ್ಲಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದು, ಅಹ್ಲಾವತ್ ವಿರುದ್ಧ ಗಲಭೆ, ಸಾರ್ವಜನಿಕ ನೌಕರನಿಗೆ ಕರ್ತವ್ಯ ನಿರ್ವಹಿಸದಂತೆ ತಡೆಯಲು ಹಲ್ಲೆ ಮಾಡಿದ ಆರೋಪ ಇದೆ.

ಅಹ್ಲಾವತ್ ಹಿಂಸಾಚಾರದ ಮಾಸ್ಟರ್‌ ಮೈಂಡ್‌ ಆಗಿನ ಬಜರಂಗದಳದ ಸಂಚಾಲಕ ಯೋಗೇಶ್ ರಾಜ್‌ನ್ನು ಕರೆ ಮಾಡಿ ತಮ್ಮ ಗ್ರಾಮದಲ್ಲಿ ಗೋಹತ್ಯೆ ಘಟನೆ ನಡೆದಿದೆ ಎಂದು ತಿಳಿಸಿದ್ದ. ಕೂಡಲೇ ಸ್ಥಳದಲ್ಲಿ ಉದ್ರಿಕ್ತ ಗುಂಪು ಜಮಾಯಿಸಿತ್ತು. ಆದರೆ ಯೋಗೇಶ್ ರಾಜ್‌ಗೆ ಕರೆ ಮಾಡಿರುವುದನ್ನು ಅಹ್ಲ್ವತ್ ನಿರಾಕರಿಸಿದ್ದಾನೆ. ಘಟನೆಯ ದಿನ, ಪೊಲೀಸ್ ಸಿಬ್ಬಂದಿಯೊಬ್ಬರು ನನ್ನ ಮೊಬೈಲ್ ಫೋನ್ ಕೇಳಿದರು. ನಾನು ಅವರಿಗೆ ಕೊಟ್ಟೆ. ಯೋಗೀಶ್ ರಾಜ್‌ಗೆ ಅವರು ಕರೆ ಮಾಡಿದ್ದಾರೆ. ಈಗ ಯಾರೂ ಇದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಅಹ್ಲಾವತ್  ಹೇಳಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ನನ್ನ ಗ್ರಾಮದ ಮಹಾವ್‌ನಲ್ಲಿ ಘಟನೆ ನಡೆದಿದ್ದರಿಂದ ಏನಾಗುತ್ತಿದೆ ಎಂದು ತಿಳಿಯಲು ನಾನು ಸ್ಥಳಕ್ಕೆ ಹೋಗಿದ್ದೆ. ಆಗ ನಾನು ಬಿಜೆಪಿಯ ಸಿಯಾನ ಮಂಡಲ ಕಾರ್ಯದರ್ಶಿಯಾಗಿದ್ದೆ. ನಾನು ದೂರದಿಂದ ಪ್ರತಿಭಟನೆಯನ್ನು ನೋಡುತ್ತಿದ್ದೆ ಮತ್ತು ಸ್ಥಳದಲ್ಲಿದ್ದ ಕೆಲವು ಜನರು ಛಾಯಾಚಿತ್ರ ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳುತ್ತಿದ್ದರು. ಛಾಯಾಚಿತ್ರಗಳು ಮತ್ತು ವೀಡಿಯೊಗಳಲ್ಲಿ ನಾನು ಕಾಣಿಸಿಕೊಂಡಿದ್ದರಿಂದ ಪೊಲೀಸರು ನನ್ನನ್ನು ಬಂಧಿಸಿದ್ದಾರೆ. ನನ್ನಂತೆ ನನ್ನ ಗ್ರಾಮದ ಇತರ ಹಲವಾರನ್ನು ಪೊಲೀಸರು ಬಂಧಿಸಿದ್ದರು ಎಂದು ಹೇಳಿದ್ದಾರೆ. ಆದರೆ ಮಂಡಲ ಕಾರ್ಯದರ್ಶಿಯಾಗಿದ್ದ ಅಹ್ಲಾವತ್ ಇತರರು ಉದ್ರಿಕ್ತರಾಗಿದ್ದಾಗ ಸುಮ್ಮನೆ ದೂರದಿಂದ ನಿಂತುಕೊಂಡು ನಾನು ನೋಡಿದ್ದೆ ಎನ್ನುವುದನ್ನು ಪೊಲೀಸರು ಒಪ್ಪಲು ಸಿದ್ದವಿರಲಿಲ್ಲ.

ಇದು ನನ್ನ ವಿರುದ್ಧದ ಏಕೈಕ ಪೊಲೀಸ್ ಕೇಸ್, ಇದರಿಂದ ನಾನು ತುಂಬಾ ತೊಂದರೆ ಅನುಭವಿಸಿದ್ದೇನೆ. ನನ್ನ ಕಠಿಣ ಪರಿಶ್ರಮ ಮತ್ತು ಬಿಜೆಪಿಯೊಂದಿಗಿನ ದೀರ್ಘಕಾಲದ ಒಡನಾಟದಿಂದಾಗಿ ನನ್ನನ್ನು ಬಿಬಿ ನಗರ ಮಂಡಲದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅಹ್ಲಾವತ್ ಹೇಳಿದ್ದಾನೆ.

ವಕೀಲ ಅಶೋಕ್ ದಾಗರ್ ಪ್ರಕಾರ, ಗಲಭೆ ಪ್ರಕರಣದಲ್ಲಿ ಅಹ್ಲಾವತ್ ಸೇರಿದಂತೆ 44 ಜನರ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. 44 ಆರೋಪಿಗಳ ಪೈಕಿ ಆರು ಮಂದಿ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಯುತ್ತಿದೆ ಮತ್ತು ಇದುವರೆಗೆ ನಾಲ್ವರು ಪ್ರಾಸಿಕ್ಯೂಷನ್ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಬುಲಂದ್‌ಶಹರ್ ಜಿಲ್ಲಾಧ್ಯಕ್ಷ ವಿಕಾಸ್ ಚೌಹಾಣ್ ಕೂಡ ಅಹ್ಲಾವತ್ ನೇಮಕವನ್ನು ಸಮರ್ಥಿಸಿಕೊಂಡಿದ್ದು, ಘಟನೆಯ ಫೋಟೋಗಳು ಮತ್ತು ವೀಡಿಯೊಗಳನ್ನು ನೋಡಿಕೊಂಡು ಪೊಲೀಸರು ಎಫ್‌ಐಆರ್‌ನಲ್ಲಿ ಸಚಿನ್ ಅಹ್ಲಾವತ್ ಅವರನ್ನು ಹೆಸರಿಸಿದ್ದಾರೆ. ಸಚಿನ್ ಸ್ಥಳದಲ್ಲಿ ಇದ್ದರು. ಆದರೆ ಕೃತ್ಯದಲ್ಲಿ ಭಾಗವಹಿಸಿಲ್ಲ. ಆತನಿಗೆ ಈ ಮೊದಲು ಕ್ರಿಮಿನಲ್‌ ಹಿನ್ನೆಲೆ ಇರಲಿಲ್ಲ. ಸಚಿನ್ ಅಹ್ಲಾವತ್ ಸುಮಾರು ಒಂದು ದಶಕದಿಂದ ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಹಲವಾರು ಆಂದೋಲನಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.

ಏನಿದು ಘಟನೆ?

ಡಿಸೆಂಬರ್ 3, 2018ರ ಬೆಳಿಗ್ಗೆ ಉತ್ತರಪ್ರದೇಶದ ಬುಲಂದ್‌ಶಹರ್‌ನ ಸಿಯಾನಾ ಮಹಾವ್ ಗ್ರಾಮದ ಹೊಲವೊಂದರಲ್ಲಿ ಹಸುವಿನ ಮೃತದೇಹಗಳು ಕಂಡುಬಂದಿದೆ ಎಂದು ತ್ವರಿತ ಕ್ರಮಕ್ಕೆ ಒತ್ತಾಯಿಸಿ ಸುಮಾರು 50-60 ಜನರ ಗುಂಪು ಶವಗಳನ್ನು ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ತುಂಬಿದರು ಮತ್ತು ಚಿಂಗ್ರಾವತಿ ಪೊಲೀಸ್ ಬೂತ್‌ನ ಬಳಿ ತಂದು ನಿಲ್ಲಿಸಿ ಬುಲಂದ್‌ಶಹರ್‌ಗೆ ಹೋಗುವ ಹೆದ್ದಾರಿಯನ್ನು ತಡೆದಿದ್ದಾರೆ. ಅಂದಿನ ಭಜರಂಗದಳದ ಸಂಚಾಲಕ ಯೋಗೇಶ್ ರಾಜ್ ಮತ್ತು ಇತರ ಹಲವು ಆರೋಪಿಗಳು ಗೋಹತ್ಯೆ ಆರೋಪ ಮಾಡಿದ ಕೆಲವು ಮುಸ್ಲಿಮರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಂಪಾಟ ಮಾಡಿದ್ದಾರೆ.

ಸ್ಥಳಕ್ಕೆ ಸಿಯಾನ ಪೊಲೀಸ್ ಠಾಣೆಯ ಪ್ರಭಾರಿ ಸುಬೋಧ್ ಕುಮಾರ್ ಸಿಂಗ್ ಅವರು ತಮ್ಮ ತಂಡದೊಂದಿಗೆ  ತೆರಳಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದವರ ಜೊತೆ ಮಾತುಕತೆ ನಡೆಸಿ, ಎಫ್‌ಐಆರ್ ದಾಖಲಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಟ್ರಾಫಿಕ್ ತೆರವುಗೊಳಿಸುವಂತೆ ಉದ್ರೇಕಿತರಿಗೆ ಮನವಿ ಮಾಡಿದರು. ಸಿಂಗ್ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಂತೆ, ಗುಂಪು ಅವರನ್ನು ಥಳಿಸಿ ಅವರಿಂದ ಸರ್ವೀಸ್ ರಿವಾಲ್ವರ್‌ ಕಸಿದು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಇದೇ ಹಿಂಸಾಚಾರದ ವೇಳೆ ಉದ್ರಿಕ್ತರ ಗುಂಪಿನಲ್ಲಿದ್ದ ಸುಮಿತ್‌ ಕುಮಾರ್‌ ಚಿಂಗರಾವಟಿ ಎಂಬವರು ಕೊಲ್ಲಲ್ಪಟ್ಟಿದ್ದರು.

ಇದನ್ನು ಓದಿ: ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...