Homeಮುಖಪುಟಸಿಯಾನಾ ಹಿಂಸಾಚಾರದ ಆರೋಪಿಗೆ ಪಕ್ಷದ ನಾಯಕತ್ವ ಕೊಟ್ಟ ಬಿಜೆಪಿ!

ಸಿಯಾನಾ ಹಿಂಸಾಚಾರದ ಆರೋಪಿಗೆ ಪಕ್ಷದ ನಾಯಕತ್ವ ಕೊಟ್ಟ ಬಿಜೆಪಿ!

- Advertisement -
- Advertisement -

ಸಿಯಾನಾ ಹಿಂಸಾಚಾರದ ಆರೋಪಿಯನ್ನು ಬಿಜೆಪಿ ಪಕ್ಷದ ಬುಲಂದ್‌ಶಹರ್‌ ವಲಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿ ಇಬ್ಬರ ಸಾವಿಗೆ ಕಾರಣವಾದ ಹಿಂಸಾಚಾರದ ಆರೋಪಿಗೆ ಬಿಜೆಪಿಯ ಸ್ಥಳೀಯ ನಾಯಕತ್ವವನ್ನು ನೀಡಲಾಗಿದೆ.

ಬಿಜೆಪಿಯ ಉತ್ತರಪ್ರದೇಶ ಘಟಕವು ಬುಲಂದ್‌ಶಹರ್‌ ಬಿಜೆಪಿ ವಲಯಾಧ್ಯಕ್ಷರನ್ನಾಗಿ ಸಚಿನ್ ಅಹ್ಲಾವತ್ ಎಂಬಾತನನ್ನು ನೇಮಿಸಿದೆ. ಈತ  2018ರಲ್ಲಿ ನಡೆದ ಉತ್ತರಪ್ರದೇಶದ ಬುಲಂದ್‌ಶಹರ್‌ನ ಸಿಯಾನಾದಲ್ಲಿ ಗೋ ಹತ್ಯೆ ನೆಪದಲ್ಲಿ ನಡೆದ ಹಿಂಸಾಚಾರದ ಆರೋಪಿಯಾಗಿದ್ದಾನೆ. ಹಿಂಸಾಚಾರದಲ್ಲಿ ಪೊಲೀಸ್‌ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆ ಮತ್ತು ಉದ್ರಿಕ್ತರ ಗುಂಪಿನಲ್ಲಿದ್ದ ಸುಮಿತ್‌ ಕುಮಾರ್‌ ಚಿಂಗರಾವಟಿ ಎಂಬಾತನ ಸಾವು ಸಂಭವಿಸಿತ್ತು.

ಬಿಜೆಪಿಯ ರಾಜ್ಯ ಘಟಕ ಕಳೆದ ವಾರ ಬಿಜೆಪಿಯ 31 ವಲಯಾಧ್ಯಕ್ಷರನ್ನು ನೇಮಿಸಿದೆ. 38 ವರ್ಷದ ಸಚಿನ್‌ ಅಹ್ಲಾವತ್ ಕೂಡ ಪಟ್ಟಿಯಲ್ಲಿ ಸೇರಿದ್ದಾನೆ. ಅವನನ್ನು ಬಿಬಿ ನಗರ ಮಂಡಲದ ಅಧ್ಯಕ್ಷರನ್ನಾಗಿ ಬಿಜೆಪಿ ನೇಮಕ ಮಾಡಿದೆ. ಈತ ಹಿಂಸಾಚಾರ ಪ್ರಕರಣದಲ್ಲಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದು, ಅಹ್ಲಾವತ್ ವಿರುದ್ಧ ಗಲಭೆ, ಸಾರ್ವಜನಿಕ ನೌಕರನಿಗೆ ಕರ್ತವ್ಯ ನಿರ್ವಹಿಸದಂತೆ ತಡೆಯಲು ಹಲ್ಲೆ ಮಾಡಿದ ಆರೋಪ ಇದೆ.

ಅಹ್ಲಾವತ್ ಹಿಂಸಾಚಾರದ ಮಾಸ್ಟರ್‌ ಮೈಂಡ್‌ ಆಗಿನ ಬಜರಂಗದಳದ ಸಂಚಾಲಕ ಯೋಗೇಶ್ ರಾಜ್‌ನ್ನು ಕರೆ ಮಾಡಿ ತಮ್ಮ ಗ್ರಾಮದಲ್ಲಿ ಗೋಹತ್ಯೆ ಘಟನೆ ನಡೆದಿದೆ ಎಂದು ತಿಳಿಸಿದ್ದ. ಕೂಡಲೇ ಸ್ಥಳದಲ್ಲಿ ಉದ್ರಿಕ್ತ ಗುಂಪು ಜಮಾಯಿಸಿತ್ತು. ಆದರೆ ಯೋಗೇಶ್ ರಾಜ್‌ಗೆ ಕರೆ ಮಾಡಿರುವುದನ್ನು ಅಹ್ಲ್ವತ್ ನಿರಾಕರಿಸಿದ್ದಾನೆ. ಘಟನೆಯ ದಿನ, ಪೊಲೀಸ್ ಸಿಬ್ಬಂದಿಯೊಬ್ಬರು ನನ್ನ ಮೊಬೈಲ್ ಫೋನ್ ಕೇಳಿದರು. ನಾನು ಅವರಿಗೆ ಕೊಟ್ಟೆ. ಯೋಗೀಶ್ ರಾಜ್‌ಗೆ ಅವರು ಕರೆ ಮಾಡಿದ್ದಾರೆ. ಈಗ ಯಾರೂ ಇದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಅಹ್ಲಾವತ್  ಹೇಳಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ನನ್ನ ಗ್ರಾಮದ ಮಹಾವ್‌ನಲ್ಲಿ ಘಟನೆ ನಡೆದಿದ್ದರಿಂದ ಏನಾಗುತ್ತಿದೆ ಎಂದು ತಿಳಿಯಲು ನಾನು ಸ್ಥಳಕ್ಕೆ ಹೋಗಿದ್ದೆ. ಆಗ ನಾನು ಬಿಜೆಪಿಯ ಸಿಯಾನ ಮಂಡಲ ಕಾರ್ಯದರ್ಶಿಯಾಗಿದ್ದೆ. ನಾನು ದೂರದಿಂದ ಪ್ರತಿಭಟನೆಯನ್ನು ನೋಡುತ್ತಿದ್ದೆ ಮತ್ತು ಸ್ಥಳದಲ್ಲಿದ್ದ ಕೆಲವು ಜನರು ಛಾಯಾಚಿತ್ರ ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳುತ್ತಿದ್ದರು. ಛಾಯಾಚಿತ್ರಗಳು ಮತ್ತು ವೀಡಿಯೊಗಳಲ್ಲಿ ನಾನು ಕಾಣಿಸಿಕೊಂಡಿದ್ದರಿಂದ ಪೊಲೀಸರು ನನ್ನನ್ನು ಬಂಧಿಸಿದ್ದಾರೆ. ನನ್ನಂತೆ ನನ್ನ ಗ್ರಾಮದ ಇತರ ಹಲವಾರನ್ನು ಪೊಲೀಸರು ಬಂಧಿಸಿದ್ದರು ಎಂದು ಹೇಳಿದ್ದಾರೆ. ಆದರೆ ಮಂಡಲ ಕಾರ್ಯದರ್ಶಿಯಾಗಿದ್ದ ಅಹ್ಲಾವತ್ ಇತರರು ಉದ್ರಿಕ್ತರಾಗಿದ್ದಾಗ ಸುಮ್ಮನೆ ದೂರದಿಂದ ನಿಂತುಕೊಂಡು ನಾನು ನೋಡಿದ್ದೆ ಎನ್ನುವುದನ್ನು ಪೊಲೀಸರು ಒಪ್ಪಲು ಸಿದ್ದವಿರಲಿಲ್ಲ.

ಇದು ನನ್ನ ವಿರುದ್ಧದ ಏಕೈಕ ಪೊಲೀಸ್ ಕೇಸ್, ಇದರಿಂದ ನಾನು ತುಂಬಾ ತೊಂದರೆ ಅನುಭವಿಸಿದ್ದೇನೆ. ನನ್ನ ಕಠಿಣ ಪರಿಶ್ರಮ ಮತ್ತು ಬಿಜೆಪಿಯೊಂದಿಗಿನ ದೀರ್ಘಕಾಲದ ಒಡನಾಟದಿಂದಾಗಿ ನನ್ನನ್ನು ಬಿಬಿ ನಗರ ಮಂಡಲದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅಹ್ಲಾವತ್ ಹೇಳಿದ್ದಾನೆ.

ವಕೀಲ ಅಶೋಕ್ ದಾಗರ್ ಪ್ರಕಾರ, ಗಲಭೆ ಪ್ರಕರಣದಲ್ಲಿ ಅಹ್ಲಾವತ್ ಸೇರಿದಂತೆ 44 ಜನರ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. 44 ಆರೋಪಿಗಳ ಪೈಕಿ ಆರು ಮಂದಿ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಯುತ್ತಿದೆ ಮತ್ತು ಇದುವರೆಗೆ ನಾಲ್ವರು ಪ್ರಾಸಿಕ್ಯೂಷನ್ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಬುಲಂದ್‌ಶಹರ್ ಜಿಲ್ಲಾಧ್ಯಕ್ಷ ವಿಕಾಸ್ ಚೌಹಾಣ್ ಕೂಡ ಅಹ್ಲಾವತ್ ನೇಮಕವನ್ನು ಸಮರ್ಥಿಸಿಕೊಂಡಿದ್ದು, ಘಟನೆಯ ಫೋಟೋಗಳು ಮತ್ತು ವೀಡಿಯೊಗಳನ್ನು ನೋಡಿಕೊಂಡು ಪೊಲೀಸರು ಎಫ್‌ಐಆರ್‌ನಲ್ಲಿ ಸಚಿನ್ ಅಹ್ಲಾವತ್ ಅವರನ್ನು ಹೆಸರಿಸಿದ್ದಾರೆ. ಸಚಿನ್ ಸ್ಥಳದಲ್ಲಿ ಇದ್ದರು. ಆದರೆ ಕೃತ್ಯದಲ್ಲಿ ಭಾಗವಹಿಸಿಲ್ಲ. ಆತನಿಗೆ ಈ ಮೊದಲು ಕ್ರಿಮಿನಲ್‌ ಹಿನ್ನೆಲೆ ಇರಲಿಲ್ಲ. ಸಚಿನ್ ಅಹ್ಲಾವತ್ ಸುಮಾರು ಒಂದು ದಶಕದಿಂದ ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಹಲವಾರು ಆಂದೋಲನಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.

ಏನಿದು ಘಟನೆ?

ಡಿಸೆಂಬರ್ 3, 2018ರ ಬೆಳಿಗ್ಗೆ ಉತ್ತರಪ್ರದೇಶದ ಬುಲಂದ್‌ಶಹರ್‌ನ ಸಿಯಾನಾ ಮಹಾವ್ ಗ್ರಾಮದ ಹೊಲವೊಂದರಲ್ಲಿ ಹಸುವಿನ ಮೃತದೇಹಗಳು ಕಂಡುಬಂದಿದೆ ಎಂದು ತ್ವರಿತ ಕ್ರಮಕ್ಕೆ ಒತ್ತಾಯಿಸಿ ಸುಮಾರು 50-60 ಜನರ ಗುಂಪು ಶವಗಳನ್ನು ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ತುಂಬಿದರು ಮತ್ತು ಚಿಂಗ್ರಾವತಿ ಪೊಲೀಸ್ ಬೂತ್‌ನ ಬಳಿ ತಂದು ನಿಲ್ಲಿಸಿ ಬುಲಂದ್‌ಶಹರ್‌ಗೆ ಹೋಗುವ ಹೆದ್ದಾರಿಯನ್ನು ತಡೆದಿದ್ದಾರೆ. ಅಂದಿನ ಭಜರಂಗದಳದ ಸಂಚಾಲಕ ಯೋಗೇಶ್ ರಾಜ್ ಮತ್ತು ಇತರ ಹಲವು ಆರೋಪಿಗಳು ಗೋಹತ್ಯೆ ಆರೋಪ ಮಾಡಿದ ಕೆಲವು ಮುಸ್ಲಿಮರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಂಪಾಟ ಮಾಡಿದ್ದಾರೆ.

ಸ್ಥಳಕ್ಕೆ ಸಿಯಾನ ಪೊಲೀಸ್ ಠಾಣೆಯ ಪ್ರಭಾರಿ ಸುಬೋಧ್ ಕುಮಾರ್ ಸಿಂಗ್ ಅವರು ತಮ್ಮ ತಂಡದೊಂದಿಗೆ  ತೆರಳಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದವರ ಜೊತೆ ಮಾತುಕತೆ ನಡೆಸಿ, ಎಫ್‌ಐಆರ್ ದಾಖಲಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಟ್ರಾಫಿಕ್ ತೆರವುಗೊಳಿಸುವಂತೆ ಉದ್ರೇಕಿತರಿಗೆ ಮನವಿ ಮಾಡಿದರು. ಸಿಂಗ್ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಂತೆ, ಗುಂಪು ಅವರನ್ನು ಥಳಿಸಿ ಅವರಿಂದ ಸರ್ವೀಸ್ ರಿವಾಲ್ವರ್‌ ಕಸಿದು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಇದೇ ಹಿಂಸಾಚಾರದ ವೇಳೆ ಉದ್ರಿಕ್ತರ ಗುಂಪಿನಲ್ಲಿದ್ದ ಸುಮಿತ್‌ ಕುಮಾರ್‌ ಚಿಂಗರಾವಟಿ ಎಂಬವರು ಕೊಲ್ಲಲ್ಪಟ್ಟಿದ್ದರು.

ಇದನ್ನು ಓದಿ: ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...