Homeಕರ್ನಾಟಕಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ 'ಹಿಂದೂ ಹುಲಿ'ಗಳೆಂದು ಬ್ಯಾನರ್‌...

ಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ ‘ಹಿಂದೂ ಹುಲಿ’ಗಳೆಂದು ಬ್ಯಾನರ್‌ ಹಾಕಿ ಸ್ವಾಗತ!

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಹತ್ಯೆ ಪ್ರಕರಣಗಳ ಆರೋಪಿಗಳಾಗಿರುವ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ ಎಂಬ ಇಬ್ಬರು ವ್ಯಕ್ತಿಗಳನ್ನು ಫೆಬ್ರವರಿ 2ರ ಭಾನುವಾರ ಅವರ ಹುಟ್ಟೂರು ಹುಬ್ಬಳ್ಳಿಯಲ್ಲಿ ಸನ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, “7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು” ಎಂಬುವುದಾಗಿ ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವಾರ್ತಾ ಭಾರತಿ ವರದಿ ಮಾಡಿದೆ.

ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. ಈ ವೇಳೆ ಅವರ ಬೆಂಬಲಿಗರು ಇಬ್ಬರನ್ನೂ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಕುಂಬಳಕಾಯಿ ಒಡೆದು, ಮೆರವಣಿಗೆ ಮೂಲಕ ಸ್ವಾಗತ ಕೋರಿದ್ದಾರೆ.

ನಗರದ ತುಳುಜಾ ಭವಾನಿ ಮಂದಿರದ ಬಳಿಯೂ ಹತ್ಯೆ ಆರೋಪಿಗಳನ್ನು ಸ್ವಾಗತಿಸಿ ಬ್ಯಾನರ್ ಹಾಕಲಾಗಿತ್ತು. ಆದರೆ, ಅದನ್ನು ದೇವಸ್ಥಾನದ ಆಡಳಿತ ಮಂಡಳಿಯವರು ತೆಗೆದು ಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ಯೆ ಆರೋಪಿಗಳಿಗೆ ವಿಜಯಪುರದಲ್ಲೂ ನಡೆದಿತ್ತು ಸನ್ಮಾನ :

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾಗ, ಅಕ್ಟೋಬರ್ 2024ರಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಅವರಿಬ್ಬರನ್ನೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿದ್ದರು.

ಹತ್ಯೆ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು.

2017ರ ಸೆಪ್ಟೆಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಒಟ್ಟು 25 ಜನ ಆರೋಪಿಗಳನ್ನು ಬಂಧಿಸಿತ್ತು.

ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದುಕೊಂಡು ಹೋಗಿ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾರೆ.

ಲೇಖಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಂ.ಎಂ. ಕಲಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿರುವ ಅವರ ಮನೆಯಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಗೌರಿ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಾಲ್ವರು ವ್ಯಕ್ತಿಗಳ ಮೇಲೆ ಕಲ್ಬುರ್ಗಿ ಹತ್ಯೆಗೆ ಸಂಬಂಧಿಸಿದಂತೆಯೂ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಗೌರಿ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಹೇಳಲಾಗುವ ಅಮೋಲ್ ಕಾಳೆ, ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್ ಮತ್ತು ವಾಸುದೇವ ಸೂರ್ಯವಂಶಿ ಸೇರಿದ್ದಾರೆ.

ಅಮಿತ್ ಬದ್ದಿ ಗೌರಿಯವರ ಮೇಲೆ ನಿಗಾ ಇರಿಸಿ ಕೊಲೆ ಮಾಡಲು ಬಳಸಿದ್ದ ಆಯುಧಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ. ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದೊಯ್ದು ಅಲ್ಲಿ ಗುಂಡು ಹಾರಿಸಿದ ವ್ಯಕ್ತಿ. ವಾಸುದೇವ್ ಸೂರ್ಯವಂಶಿ ವಿರುದ್ದ ಮಿಸ್ಕಿನ್ ಮತ್ತು ವಾಘ್ಮೋರೆ ಬಳಸಿದ್ದ ಬೈಕ್ ಕಳವು ಮಾಡಿದ ಆರೋಪವಿದೆ.

‘ಮುಖ್ಯವಾಹಿನಿ ಎಂದರೆ ಶಸ್ತ್ರಾಸ್ತ್ರ ಹೋರಾಟದ ದಾರಿಯಿಂದ ಪ್ರಜಾತಾಂತ್ರಿಕ ಹೋರಾಟಕ್ಕೆ ಮರಳುವುದು’: ನೂರ್ ಶ್ರೀಧರ್ ಅವರೊಂದಿಗೆ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...