Homeಕರ್ನಾಟಕಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ 'ಹಿಂದೂ ಹುಲಿ'ಗಳೆಂದು ಬ್ಯಾನರ್‌...

ಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ ‘ಹಿಂದೂ ಹುಲಿ’ಗಳೆಂದು ಬ್ಯಾನರ್‌ ಹಾಕಿ ಸ್ವಾಗತ!

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಹತ್ಯೆ ಪ್ರಕರಣಗಳ ಆರೋಪಿಗಳಾಗಿರುವ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ ಎಂಬ ಇಬ್ಬರು ವ್ಯಕ್ತಿಗಳನ್ನು ಫೆಬ್ರವರಿ 2ರ ಭಾನುವಾರ ಅವರ ಹುಟ್ಟೂರು ಹುಬ್ಬಳ್ಳಿಯಲ್ಲಿ ಸನ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, “7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು” ಎಂಬುವುದಾಗಿ ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವಾರ್ತಾ ಭಾರತಿ ವರದಿ ಮಾಡಿದೆ.

ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. ಈ ವೇಳೆ ಅವರ ಬೆಂಬಲಿಗರು ಇಬ್ಬರನ್ನೂ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಕುಂಬಳಕಾಯಿ ಒಡೆದು, ಮೆರವಣಿಗೆ ಮೂಲಕ ಸ್ವಾಗತ ಕೋರಿದ್ದಾರೆ.

ನಗರದ ತುಳುಜಾ ಭವಾನಿ ಮಂದಿರದ ಬಳಿಯೂ ಹತ್ಯೆ ಆರೋಪಿಗಳನ್ನು ಸ್ವಾಗತಿಸಿ ಬ್ಯಾನರ್ ಹಾಕಲಾಗಿತ್ತು. ಆದರೆ, ಅದನ್ನು ದೇವಸ್ಥಾನದ ಆಡಳಿತ ಮಂಡಳಿಯವರು ತೆಗೆದು ಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ಯೆ ಆರೋಪಿಗಳಿಗೆ ವಿಜಯಪುರದಲ್ಲೂ ನಡೆದಿತ್ತು ಸನ್ಮಾನ :

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾಗ, ಅಕ್ಟೋಬರ್ 2024ರಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಅವರಿಬ್ಬರನ್ನೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿದ್ದರು.

ಹತ್ಯೆ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು.

2017ರ ಸೆಪ್ಟೆಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಒಟ್ಟು 25 ಜನ ಆರೋಪಿಗಳನ್ನು ಬಂಧಿಸಿತ್ತು.

ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದುಕೊಂಡು ಹೋಗಿ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾರೆ.

ಲೇಖಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಂ.ಎಂ. ಕಲಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿರುವ ಅವರ ಮನೆಯಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಗೌರಿ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಾಲ್ವರು ವ್ಯಕ್ತಿಗಳ ಮೇಲೆ ಕಲ್ಬುರ್ಗಿ ಹತ್ಯೆಗೆ ಸಂಬಂಧಿಸಿದಂತೆಯೂ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಗೌರಿ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಹೇಳಲಾಗುವ ಅಮೋಲ್ ಕಾಳೆ, ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್ ಮತ್ತು ವಾಸುದೇವ ಸೂರ್ಯವಂಶಿ ಸೇರಿದ್ದಾರೆ.

ಅಮಿತ್ ಬದ್ದಿ ಗೌರಿಯವರ ಮೇಲೆ ನಿಗಾ ಇರಿಸಿ ಕೊಲೆ ಮಾಡಲು ಬಳಸಿದ್ದ ಆಯುಧಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ. ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದೊಯ್ದು ಅಲ್ಲಿ ಗುಂಡು ಹಾರಿಸಿದ ವ್ಯಕ್ತಿ. ವಾಸುದೇವ್ ಸೂರ್ಯವಂಶಿ ವಿರುದ್ದ ಮಿಸ್ಕಿನ್ ಮತ್ತು ವಾಘ್ಮೋರೆ ಬಳಸಿದ್ದ ಬೈಕ್ ಕಳವು ಮಾಡಿದ ಆರೋಪವಿದೆ.

‘ಮುಖ್ಯವಾಹಿನಿ ಎಂದರೆ ಶಸ್ತ್ರಾಸ್ತ್ರ ಹೋರಾಟದ ದಾರಿಯಿಂದ ಪ್ರಜಾತಾಂತ್ರಿಕ ಹೋರಾಟಕ್ಕೆ ಮರಳುವುದು’: ನೂರ್ ಶ್ರೀಧರ್ ಅವರೊಂದಿಗೆ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...