Homeಕರ್ನಾಟಕಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ 'ಹಿಂದೂ ಹುಲಿ'ಗಳೆಂದು ಬ್ಯಾನರ್‌...

ಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ ‘ಹಿಂದೂ ಹುಲಿ’ಗಳೆಂದು ಬ್ಯಾನರ್‌ ಹಾಕಿ ಸ್ವಾಗತ!

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಹತ್ಯೆ ಪ್ರಕರಣಗಳ ಆರೋಪಿಗಳಾಗಿರುವ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ ಎಂಬ ಇಬ್ಬರು ವ್ಯಕ್ತಿಗಳನ್ನು ಫೆಬ್ರವರಿ 2ರ ಭಾನುವಾರ ಅವರ ಹುಟ್ಟೂರು ಹುಬ್ಬಳ್ಳಿಯಲ್ಲಿ ಸನ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, “7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು” ಎಂಬುವುದಾಗಿ ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವಾರ್ತಾ ಭಾರತಿ ವರದಿ ಮಾಡಿದೆ.

ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. ಈ ವೇಳೆ ಅವರ ಬೆಂಬಲಿಗರು ಇಬ್ಬರನ್ನೂ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಕುಂಬಳಕಾಯಿ ಒಡೆದು, ಮೆರವಣಿಗೆ ಮೂಲಕ ಸ್ವಾಗತ ಕೋರಿದ್ದಾರೆ.

ನಗರದ ತುಳುಜಾ ಭವಾನಿ ಮಂದಿರದ ಬಳಿಯೂ ಹತ್ಯೆ ಆರೋಪಿಗಳನ್ನು ಸ್ವಾಗತಿಸಿ ಬ್ಯಾನರ್ ಹಾಕಲಾಗಿತ್ತು. ಆದರೆ, ಅದನ್ನು ದೇವಸ್ಥಾನದ ಆಡಳಿತ ಮಂಡಳಿಯವರು ತೆಗೆದು ಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ಯೆ ಆರೋಪಿಗಳಿಗೆ ವಿಜಯಪುರದಲ್ಲೂ ನಡೆದಿತ್ತು ಸನ್ಮಾನ :

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾಗ, ಅಕ್ಟೋಬರ್ 2024ರಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಅವರಿಬ್ಬರನ್ನೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿದ್ದರು.

ಹತ್ಯೆ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು.

2017ರ ಸೆಪ್ಟೆಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಒಟ್ಟು 25 ಜನ ಆರೋಪಿಗಳನ್ನು ಬಂಧಿಸಿತ್ತು.

ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದುಕೊಂಡು ಹೋಗಿ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾರೆ.

ಲೇಖಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಂ.ಎಂ. ಕಲಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿರುವ ಅವರ ಮನೆಯಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಗೌರಿ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಾಲ್ವರು ವ್ಯಕ್ತಿಗಳ ಮೇಲೆ ಕಲ್ಬುರ್ಗಿ ಹತ್ಯೆಗೆ ಸಂಬಂಧಿಸಿದಂತೆಯೂ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಗೌರಿ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಹೇಳಲಾಗುವ ಅಮೋಲ್ ಕಾಳೆ, ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್ ಮತ್ತು ವಾಸುದೇವ ಸೂರ್ಯವಂಶಿ ಸೇರಿದ್ದಾರೆ.

ಅಮಿತ್ ಬದ್ದಿ ಗೌರಿಯವರ ಮೇಲೆ ನಿಗಾ ಇರಿಸಿ ಕೊಲೆ ಮಾಡಲು ಬಳಸಿದ್ದ ಆಯುಧಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ. ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದೊಯ್ದು ಅಲ್ಲಿ ಗುಂಡು ಹಾರಿಸಿದ ವ್ಯಕ್ತಿ. ವಾಸುದೇವ್ ಸೂರ್ಯವಂಶಿ ವಿರುದ್ದ ಮಿಸ್ಕಿನ್ ಮತ್ತು ವಾಘ್ಮೋರೆ ಬಳಸಿದ್ದ ಬೈಕ್ ಕಳವು ಮಾಡಿದ ಆರೋಪವಿದೆ.

‘ಮುಖ್ಯವಾಹಿನಿ ಎಂದರೆ ಶಸ್ತ್ರಾಸ್ತ್ರ ಹೋರಾಟದ ದಾರಿಯಿಂದ ಪ್ರಜಾತಾಂತ್ರಿಕ ಹೋರಾಟಕ್ಕೆ ಮರಳುವುದು’: ನೂರ್ ಶ್ರೀಧರ್ ಅವರೊಂದಿಗೆ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...