Homeಕರ್ನಾಟಕಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ 'ಹಿಂದೂ ಹುಲಿ'ಗಳೆಂದು ಬ್ಯಾನರ್‌...

ಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ ‘ಹಿಂದೂ ಹುಲಿ’ಗಳೆಂದು ಬ್ಯಾನರ್‌ ಹಾಕಿ ಸ್ವಾಗತ!

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಹತ್ಯೆ ಪ್ರಕರಣಗಳ ಆರೋಪಿಗಳಾಗಿರುವ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ ಎಂಬ ಇಬ್ಬರು ವ್ಯಕ್ತಿಗಳನ್ನು ಫೆಬ್ರವರಿ 2ರ ಭಾನುವಾರ ಅವರ ಹುಟ್ಟೂರು ಹುಬ್ಬಳ್ಳಿಯಲ್ಲಿ ಸನ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, “7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು” ಎಂಬುವುದಾಗಿ ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವಾರ್ತಾ ಭಾರತಿ ವರದಿ ಮಾಡಿದೆ.

ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. ಈ ವೇಳೆ ಅವರ ಬೆಂಬಲಿಗರು ಇಬ್ಬರನ್ನೂ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಕುಂಬಳಕಾಯಿ ಒಡೆದು, ಮೆರವಣಿಗೆ ಮೂಲಕ ಸ್ವಾಗತ ಕೋರಿದ್ದಾರೆ.

ನಗರದ ತುಳುಜಾ ಭವಾನಿ ಮಂದಿರದ ಬಳಿಯೂ ಹತ್ಯೆ ಆರೋಪಿಗಳನ್ನು ಸ್ವಾಗತಿಸಿ ಬ್ಯಾನರ್ ಹಾಕಲಾಗಿತ್ತು. ಆದರೆ, ಅದನ್ನು ದೇವಸ್ಥಾನದ ಆಡಳಿತ ಮಂಡಳಿಯವರು ತೆಗೆದು ಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ಯೆ ಆರೋಪಿಗಳಿಗೆ ವಿಜಯಪುರದಲ್ಲೂ ನಡೆದಿತ್ತು ಸನ್ಮಾನ :

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾಗ, ಅಕ್ಟೋಬರ್ 2024ರಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಅವರಿಬ್ಬರನ್ನೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿದ್ದರು.

ಹತ್ಯೆ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು.

2017ರ ಸೆಪ್ಟೆಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಒಟ್ಟು 25 ಜನ ಆರೋಪಿಗಳನ್ನು ಬಂಧಿಸಿತ್ತು.

ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದುಕೊಂಡು ಹೋಗಿ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾರೆ.

ಲೇಖಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಂ.ಎಂ. ಕಲಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿರುವ ಅವರ ಮನೆಯಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಗೌರಿ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಾಲ್ವರು ವ್ಯಕ್ತಿಗಳ ಮೇಲೆ ಕಲ್ಬುರ್ಗಿ ಹತ್ಯೆಗೆ ಸಂಬಂಧಿಸಿದಂತೆಯೂ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಗೌರಿ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಹೇಳಲಾಗುವ ಅಮೋಲ್ ಕಾಳೆ, ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್ ಮತ್ತು ವಾಸುದೇವ ಸೂರ್ಯವಂಶಿ ಸೇರಿದ್ದಾರೆ.

ಅಮಿತ್ ಬದ್ದಿ ಗೌರಿಯವರ ಮೇಲೆ ನಿಗಾ ಇರಿಸಿ ಕೊಲೆ ಮಾಡಲು ಬಳಸಿದ್ದ ಆಯುಧಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ. ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದೊಯ್ದು ಅಲ್ಲಿ ಗುಂಡು ಹಾರಿಸಿದ ವ್ಯಕ್ತಿ. ವಾಸುದೇವ್ ಸೂರ್ಯವಂಶಿ ವಿರುದ್ದ ಮಿಸ್ಕಿನ್ ಮತ್ತು ವಾಘ್ಮೋರೆ ಬಳಸಿದ್ದ ಬೈಕ್ ಕಳವು ಮಾಡಿದ ಆರೋಪವಿದೆ.

‘ಮುಖ್ಯವಾಹಿನಿ ಎಂದರೆ ಶಸ್ತ್ರಾಸ್ತ್ರ ಹೋರಾಟದ ದಾರಿಯಿಂದ ಪ್ರಜಾತಾಂತ್ರಿಕ ಹೋರಾಟಕ್ಕೆ ಮರಳುವುದು’: ನೂರ್ ಶ್ರೀಧರ್ ಅವರೊಂದಿಗೆ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....