Homeಕರ್ನಾಟಕಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ 'ಹಿಂದೂ ಹುಲಿ'ಗಳೆಂದು ಬ್ಯಾನರ್‌...

ಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ ‘ಹಿಂದೂ ಹುಲಿ’ಗಳೆಂದು ಬ್ಯಾನರ್‌ ಹಾಕಿ ಸ್ವಾಗತ!

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಹತ್ಯೆ ಪ್ರಕರಣಗಳ ಆರೋಪಿಗಳಾಗಿರುವ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ ಎಂಬ ಇಬ್ಬರು ವ್ಯಕ್ತಿಗಳನ್ನು ಫೆಬ್ರವರಿ 2ರ ಭಾನುವಾರ ಅವರ ಹುಟ್ಟೂರು ಹುಬ್ಬಳ್ಳಿಯಲ್ಲಿ ಸನ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, “7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು” ಎಂಬುವುದಾಗಿ ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವಾರ್ತಾ ಭಾರತಿ ವರದಿ ಮಾಡಿದೆ.

ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. ಈ ವೇಳೆ ಅವರ ಬೆಂಬಲಿಗರು ಇಬ್ಬರನ್ನೂ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಕುಂಬಳಕಾಯಿ ಒಡೆದು, ಮೆರವಣಿಗೆ ಮೂಲಕ ಸ್ವಾಗತ ಕೋರಿದ್ದಾರೆ.

ನಗರದ ತುಳುಜಾ ಭವಾನಿ ಮಂದಿರದ ಬಳಿಯೂ ಹತ್ಯೆ ಆರೋಪಿಗಳನ್ನು ಸ್ವಾಗತಿಸಿ ಬ್ಯಾನರ್ ಹಾಕಲಾಗಿತ್ತು. ಆದರೆ, ಅದನ್ನು ದೇವಸ್ಥಾನದ ಆಡಳಿತ ಮಂಡಳಿಯವರು ತೆಗೆದು ಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ಯೆ ಆರೋಪಿಗಳಿಗೆ ವಿಜಯಪುರದಲ್ಲೂ ನಡೆದಿತ್ತು ಸನ್ಮಾನ :

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾಗ, ಅಕ್ಟೋಬರ್ 2024ರಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಅವರಿಬ್ಬರನ್ನೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿದ್ದರು.

ಹತ್ಯೆ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು.

2017ರ ಸೆಪ್ಟೆಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಒಟ್ಟು 25 ಜನ ಆರೋಪಿಗಳನ್ನು ಬಂಧಿಸಿತ್ತು.

ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದುಕೊಂಡು ಹೋಗಿ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾರೆ.

ಲೇಖಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಂ.ಎಂ. ಕಲಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿರುವ ಅವರ ಮನೆಯಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಗೌರಿ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಾಲ್ವರು ವ್ಯಕ್ತಿಗಳ ಮೇಲೆ ಕಲ್ಬುರ್ಗಿ ಹತ್ಯೆಗೆ ಸಂಬಂಧಿಸಿದಂತೆಯೂ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಗೌರಿ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಹೇಳಲಾಗುವ ಅಮೋಲ್ ಕಾಳೆ, ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್ ಮತ್ತು ವಾಸುದೇವ ಸೂರ್ಯವಂಶಿ ಸೇರಿದ್ದಾರೆ.

ಅಮಿತ್ ಬದ್ದಿ ಗೌರಿಯವರ ಮೇಲೆ ನಿಗಾ ಇರಿಸಿ ಕೊಲೆ ಮಾಡಲು ಬಳಸಿದ್ದ ಆಯುಧಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ. ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದೊಯ್ದು ಅಲ್ಲಿ ಗುಂಡು ಹಾರಿಸಿದ ವ್ಯಕ್ತಿ. ವಾಸುದೇವ್ ಸೂರ್ಯವಂಶಿ ವಿರುದ್ದ ಮಿಸ್ಕಿನ್ ಮತ್ತು ವಾಘ್ಮೋರೆ ಬಳಸಿದ್ದ ಬೈಕ್ ಕಳವು ಮಾಡಿದ ಆರೋಪವಿದೆ.

‘ಮುಖ್ಯವಾಹಿನಿ ಎಂದರೆ ಶಸ್ತ್ರಾಸ್ತ್ರ ಹೋರಾಟದ ದಾರಿಯಿಂದ ಪ್ರಜಾತಾಂತ್ರಿಕ ಹೋರಾಟಕ್ಕೆ ಮರಳುವುದು’: ನೂರ್ ಶ್ರೀಧರ್ ಅವರೊಂದಿಗೆ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...