Homeಮುಖಪುಟಮೊರ್ಬಿ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳು ಪೊಲೀಸರ ಮುಂದೆ ಶರಣು

ಮೊರ್ಬಿ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳು ಪೊಲೀಸರ ಮುಂದೆ ಶರಣು

- Advertisement -
- Advertisement -

ಗುಜರಾತ್‌ನ ಮೊರ್ಬಿ ದಲಿತ ದೌರ್ಜನ್ಯ ಘಟನೆಯ ಐವರು ಆರೋಪಿಗಳ ಪೈಕಿ ಮೂವರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಗುಜರಾತ್‌ನ ಮೊರ್ಬಿಯ ಉದ್ಯಮಿ ವಿಭೂತಿ ಪಟೇಲ್ ತನ್ನ ಕಂಪೆನಿಯ ಸಿಬ್ಬಂದಿಗಳ ಜೊತೆ ಸೇರಿಕೊಂಡು ಕಂಪೆನಿಯಲ್ಲಿ ಕೆಲಸ ಮಾಡಿದ ವೇತನ ಕೇಳಿದ ದಲಿತ ವ್ಯಕ್ತಿ ಸೇರಿ ಮೂವರ ಮೇಲೆ ಹಲ್ಲೆ ನಡೆಸಿ ಆಕೆಯ ಚಪ್ಪಲಿಯನ್ನು ಬಾಯಲ್ಲಿ ಇರಿಸುವಂತೆ ಬಲವಂತ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿ ಉದ್ಯಮಿ ವಿಭೂತಿ ಪಟೇಲ್ (27), ಆಕೆಯ ಸಹೋದರ ಓಂ ಪಟೇಲ್ ಅಲಿಯಾಸ್ ಓಂ ಸಿತಾಪರಾ (21) ಮತ್ತು ರಾಜ್ ಪಡಶಾಲಾ (23) ಸೋಮವಾರ ಮುಂಜಾನೆ ಮೊರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಸಿ-ಎಸ್‌ಟಿ ಸೆಲ್) ಪ್ರತಿಪಾಲ್‌ಸಿನ್ಹ್ ಝಾಲಾ ಅವರ ಮುಂದೆ ಶರಣಾಗಿದ್ದಾರೆ.

ಆರೋಪಿಗಳು ಸಲ್ಲಿಸಿದ ಬಂಧನ ಪೂರ್ವ ಜಾಮೀನು ಅರ್ಜಿ ತಿರಸ್ಕಾರದ ಬಳಿಕ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಉದ್ಯಮಿ ವಿಭೂತಿ ಪಟೇಲ್ ಅವರ ಸಿರಾಮಿಕ್ ಟೈಲ್ಸ್  ರಫ್ತು ಮಾಡುವ ಕಂಪನಿ ರಾಣಿಬಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (RIPL) ಕಚೇರಿಯಲ್ಲಿ  ನೀಲೇಶ್ ದಲ್ಸಾನಿಯಾ (21), ಅವರ ಸಹೋದರ ಮೆಹುಲ್ ಮತ್ತು ಅವರ ನೆರೆಯ ಭವೇಶ್ ಮಕ್ವಾನಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನ.23ರಂದು ಎ ಡಿವಿಷನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾದ ಪ್ರಥಮ ಮಾಹಿತಿ ವರದಿ ಉಲ್ಲೇಖಿಸಿದೆ.

ಅ.2ರಿಂದ ಅ.18ರವರೆಗೆ ತಾನು ಮಾಡಿದ 16 ದಿನಗಳ ಕೆಲಸಕ್ಕೆ ಸಂಬಳವನ್ನು ಕೇಳಲು ನೀಲೇಶ್ ಕಚೇರಿಗೆ ಹೋದಾಗ ಈ ಘಟನೆ ನಡೆದಿದೆ. ವಿಭೂತಿಯು ನೀಲೇಶ್‌ನನ್ನು ತನ್ನ ಮುಂದೆ ಕುಳಿತು ಅವಳ ಪಾದರಕ್ಷೆಗಳನ್ನು ತೆಗೆದುಕೊಂಡು ಬಾಯಲ್ಲಿ ಇಟ್ಟು ಕ್ಷಮೆಯಾಚಿಸುವಂತೆ ಕೇಳಿದ್ದಾರೆ. ಇದಲ್ಲದೆ ಆರೋಪಿಗಳು ನೀಲೇಶ್‌ನಿಂದ 500 ರೂಪಾಯಿ ಮತ್ತು ಸ್ಮಾರ್ಟ್‌ವಾಚ್ ದೋಚಿದ್ದಾರೆ. ನೀಲೇಶ್ ದಲ್ಸಾನಿಯಾ ಅವರನ್ನು ಕಟ್ಟಡದ ಟೆರೇಸ್‌ಗೆ ಕರೆದೊಯ್ದು ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಐವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (2) (ಅಪರಾಧ ಬೆದರಿಕೆ), 143 (ಕಾನೂನುಬಾಹಿರ ಸಭೆ), 147 (ಗಲಭೆ) ಮತ್ತು 149 ಮತ್ತು ಭಾರತೀಯ ದಂಡ ಸಂಹಿತೆಯ 395 ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಪರೀಕ್ಷಿತ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಶರಣಾಗುವ ಒಂದು ದಿನದ ಮೊದಲು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನು ಓದಿ; ಪಾಕ್‌ ಕಲಾವಿದರನ್ನು ನಿಷೇಧಿಸುವಂತೆ ಅರ್ಜಿ: ಸಂಕುಚಿತ ಮನೋಭಾವ ಬೇಡ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...