Homeಮುಖಪುಟಮೊರ್ಬಿ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳು ಪೊಲೀಸರ ಮುಂದೆ ಶರಣು

ಮೊರ್ಬಿ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳು ಪೊಲೀಸರ ಮುಂದೆ ಶರಣು

- Advertisement -
- Advertisement -

ಗುಜರಾತ್‌ನ ಮೊರ್ಬಿ ದಲಿತ ದೌರ್ಜನ್ಯ ಘಟನೆಯ ಐವರು ಆರೋಪಿಗಳ ಪೈಕಿ ಮೂವರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಗುಜರಾತ್‌ನ ಮೊರ್ಬಿಯ ಉದ್ಯಮಿ ವಿಭೂತಿ ಪಟೇಲ್ ತನ್ನ ಕಂಪೆನಿಯ ಸಿಬ್ಬಂದಿಗಳ ಜೊತೆ ಸೇರಿಕೊಂಡು ಕಂಪೆನಿಯಲ್ಲಿ ಕೆಲಸ ಮಾಡಿದ ವೇತನ ಕೇಳಿದ ದಲಿತ ವ್ಯಕ್ತಿ ಸೇರಿ ಮೂವರ ಮೇಲೆ ಹಲ್ಲೆ ನಡೆಸಿ ಆಕೆಯ ಚಪ್ಪಲಿಯನ್ನು ಬಾಯಲ್ಲಿ ಇರಿಸುವಂತೆ ಬಲವಂತ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿ ಉದ್ಯಮಿ ವಿಭೂತಿ ಪಟೇಲ್ (27), ಆಕೆಯ ಸಹೋದರ ಓಂ ಪಟೇಲ್ ಅಲಿಯಾಸ್ ಓಂ ಸಿತಾಪರಾ (21) ಮತ್ತು ರಾಜ್ ಪಡಶಾಲಾ (23) ಸೋಮವಾರ ಮುಂಜಾನೆ ಮೊರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಸಿ-ಎಸ್‌ಟಿ ಸೆಲ್) ಪ್ರತಿಪಾಲ್‌ಸಿನ್ಹ್ ಝಾಲಾ ಅವರ ಮುಂದೆ ಶರಣಾಗಿದ್ದಾರೆ.

ಆರೋಪಿಗಳು ಸಲ್ಲಿಸಿದ ಬಂಧನ ಪೂರ್ವ ಜಾಮೀನು ಅರ್ಜಿ ತಿರಸ್ಕಾರದ ಬಳಿಕ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಉದ್ಯಮಿ ವಿಭೂತಿ ಪಟೇಲ್ ಅವರ ಸಿರಾಮಿಕ್ ಟೈಲ್ಸ್  ರಫ್ತು ಮಾಡುವ ಕಂಪನಿ ರಾಣಿಬಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (RIPL) ಕಚೇರಿಯಲ್ಲಿ  ನೀಲೇಶ್ ದಲ್ಸಾನಿಯಾ (21), ಅವರ ಸಹೋದರ ಮೆಹುಲ್ ಮತ್ತು ಅವರ ನೆರೆಯ ಭವೇಶ್ ಮಕ್ವಾನಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನ.23ರಂದು ಎ ಡಿವಿಷನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾದ ಪ್ರಥಮ ಮಾಹಿತಿ ವರದಿ ಉಲ್ಲೇಖಿಸಿದೆ.

ಅ.2ರಿಂದ ಅ.18ರವರೆಗೆ ತಾನು ಮಾಡಿದ 16 ದಿನಗಳ ಕೆಲಸಕ್ಕೆ ಸಂಬಳವನ್ನು ಕೇಳಲು ನೀಲೇಶ್ ಕಚೇರಿಗೆ ಹೋದಾಗ ಈ ಘಟನೆ ನಡೆದಿದೆ. ವಿಭೂತಿಯು ನೀಲೇಶ್‌ನನ್ನು ತನ್ನ ಮುಂದೆ ಕುಳಿತು ಅವಳ ಪಾದರಕ್ಷೆಗಳನ್ನು ತೆಗೆದುಕೊಂಡು ಬಾಯಲ್ಲಿ ಇಟ್ಟು ಕ್ಷಮೆಯಾಚಿಸುವಂತೆ ಕೇಳಿದ್ದಾರೆ. ಇದಲ್ಲದೆ ಆರೋಪಿಗಳು ನೀಲೇಶ್‌ನಿಂದ 500 ರೂಪಾಯಿ ಮತ್ತು ಸ್ಮಾರ್ಟ್‌ವಾಚ್ ದೋಚಿದ್ದಾರೆ. ನೀಲೇಶ್ ದಲ್ಸಾನಿಯಾ ಅವರನ್ನು ಕಟ್ಟಡದ ಟೆರೇಸ್‌ಗೆ ಕರೆದೊಯ್ದು ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಐವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (2) (ಅಪರಾಧ ಬೆದರಿಕೆ), 143 (ಕಾನೂನುಬಾಹಿರ ಸಭೆ), 147 (ಗಲಭೆ) ಮತ್ತು 149 ಮತ್ತು ಭಾರತೀಯ ದಂಡ ಸಂಹಿತೆಯ 395 ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಪರೀಕ್ಷಿತ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಶರಣಾಗುವ ಒಂದು ದಿನದ ಮೊದಲು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನು ಓದಿ; ಪಾಕ್‌ ಕಲಾವಿದರನ್ನು ನಿಷೇಧಿಸುವಂತೆ ಅರ್ಜಿ: ಸಂಕುಚಿತ ಮನೋಭಾವ ಬೇಡ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...