Homeಮುಖಪುಟಮೊರ್ಬಿ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳು ಪೊಲೀಸರ ಮುಂದೆ ಶರಣು

ಮೊರ್ಬಿ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳು ಪೊಲೀಸರ ಮುಂದೆ ಶರಣು

- Advertisement -
- Advertisement -

ಗುಜರಾತ್‌ನ ಮೊರ್ಬಿ ದಲಿತ ದೌರ್ಜನ್ಯ ಘಟನೆಯ ಐವರು ಆರೋಪಿಗಳ ಪೈಕಿ ಮೂವರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಗುಜರಾತ್‌ನ ಮೊರ್ಬಿಯ ಉದ್ಯಮಿ ವಿಭೂತಿ ಪಟೇಲ್ ತನ್ನ ಕಂಪೆನಿಯ ಸಿಬ್ಬಂದಿಗಳ ಜೊತೆ ಸೇರಿಕೊಂಡು ಕಂಪೆನಿಯಲ್ಲಿ ಕೆಲಸ ಮಾಡಿದ ವೇತನ ಕೇಳಿದ ದಲಿತ ವ್ಯಕ್ತಿ ಸೇರಿ ಮೂವರ ಮೇಲೆ ಹಲ್ಲೆ ನಡೆಸಿ ಆಕೆಯ ಚಪ್ಪಲಿಯನ್ನು ಬಾಯಲ್ಲಿ ಇರಿಸುವಂತೆ ಬಲವಂತ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿ ಉದ್ಯಮಿ ವಿಭೂತಿ ಪಟೇಲ್ (27), ಆಕೆಯ ಸಹೋದರ ಓಂ ಪಟೇಲ್ ಅಲಿಯಾಸ್ ಓಂ ಸಿತಾಪರಾ (21) ಮತ್ತು ರಾಜ್ ಪಡಶಾಲಾ (23) ಸೋಮವಾರ ಮುಂಜಾನೆ ಮೊರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಸಿ-ಎಸ್‌ಟಿ ಸೆಲ್) ಪ್ರತಿಪಾಲ್‌ಸಿನ್ಹ್ ಝಾಲಾ ಅವರ ಮುಂದೆ ಶರಣಾಗಿದ್ದಾರೆ.

ಆರೋಪಿಗಳು ಸಲ್ಲಿಸಿದ ಬಂಧನ ಪೂರ್ವ ಜಾಮೀನು ಅರ್ಜಿ ತಿರಸ್ಕಾರದ ಬಳಿಕ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಉದ್ಯಮಿ ವಿಭೂತಿ ಪಟೇಲ್ ಅವರ ಸಿರಾಮಿಕ್ ಟೈಲ್ಸ್  ರಫ್ತು ಮಾಡುವ ಕಂಪನಿ ರಾಣಿಬಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (RIPL) ಕಚೇರಿಯಲ್ಲಿ  ನೀಲೇಶ್ ದಲ್ಸಾನಿಯಾ (21), ಅವರ ಸಹೋದರ ಮೆಹುಲ್ ಮತ್ತು ಅವರ ನೆರೆಯ ಭವೇಶ್ ಮಕ್ವಾನಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನ.23ರಂದು ಎ ಡಿವಿಷನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾದ ಪ್ರಥಮ ಮಾಹಿತಿ ವರದಿ ಉಲ್ಲೇಖಿಸಿದೆ.

ಅ.2ರಿಂದ ಅ.18ರವರೆಗೆ ತಾನು ಮಾಡಿದ 16 ದಿನಗಳ ಕೆಲಸಕ್ಕೆ ಸಂಬಳವನ್ನು ಕೇಳಲು ನೀಲೇಶ್ ಕಚೇರಿಗೆ ಹೋದಾಗ ಈ ಘಟನೆ ನಡೆದಿದೆ. ವಿಭೂತಿಯು ನೀಲೇಶ್‌ನನ್ನು ತನ್ನ ಮುಂದೆ ಕುಳಿತು ಅವಳ ಪಾದರಕ್ಷೆಗಳನ್ನು ತೆಗೆದುಕೊಂಡು ಬಾಯಲ್ಲಿ ಇಟ್ಟು ಕ್ಷಮೆಯಾಚಿಸುವಂತೆ ಕೇಳಿದ್ದಾರೆ. ಇದಲ್ಲದೆ ಆರೋಪಿಗಳು ನೀಲೇಶ್‌ನಿಂದ 500 ರೂಪಾಯಿ ಮತ್ತು ಸ್ಮಾರ್ಟ್‌ವಾಚ್ ದೋಚಿದ್ದಾರೆ. ನೀಲೇಶ್ ದಲ್ಸಾನಿಯಾ ಅವರನ್ನು ಕಟ್ಟಡದ ಟೆರೇಸ್‌ಗೆ ಕರೆದೊಯ್ದು ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಐವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (2) (ಅಪರಾಧ ಬೆದರಿಕೆ), 143 (ಕಾನೂನುಬಾಹಿರ ಸಭೆ), 147 (ಗಲಭೆ) ಮತ್ತು 149 ಮತ್ತು ಭಾರತೀಯ ದಂಡ ಸಂಹಿತೆಯ 395 ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಪರೀಕ್ಷಿತ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಶರಣಾಗುವ ಒಂದು ದಿನದ ಮೊದಲು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನು ಓದಿ; ಪಾಕ್‌ ಕಲಾವಿದರನ್ನು ನಿಷೇಧಿಸುವಂತೆ ಅರ್ಜಿ: ಸಂಕುಚಿತ ಮನೋಭಾವ ಬೇಡ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...