Homeಮುಖಪುಟನಕಲಿ ಎನ್‌ಕೌಂಟರ್ | "ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ" : ಸುಪ್ರೀಂ...

ನಕಲಿ ಎನ್‌ಕೌಂಟರ್ | “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ” : ಸುಪ್ರೀಂ ಕೋರ್ಟ್

- Advertisement -
- Advertisement -

ಅಸ್ಸಾಂನ ‘ನಕಲಿ ಎನ್‌ಕೌಂಟರ್‌’ ಗಳ ವಿರುದ್ದ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಸುಪ್ರೀಂ ಕೋರ್ಟ್ ಪೀಠ, “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಕಾನೂನಿನಡಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಟೀಕಿಸಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠದ ಭಾಗವಾದ ನ್ಯಾಯಮೂರ್ತಿ ಭುಯಾನ್ ಅವರು ಗೌಹಾಟಿ ಹೈಕೋರ್ಟ್‌ ಆದೇಶದ ವಿರುದ್ಧ ಸಲ್ಲಿಸಲಾಗಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆ ನಡೆಸಿದ್ದಾರೆ.

ಅರ್ಜಿದಾರರು ನಕಲಿ ಎನ್‌ಕೌಂಟರ್‌ಗಳ ಬಗ್ಗೆ ತನಿಖೆ ನಡೆಸಲು ಕೋರಿ ಗೌಹಾಟಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ, ಅವರ ಮನವಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ಪ್ರತಿ ಪ್ರಕರಣದಲ್ಲೂ ರಾಜ್ಯದ ಅಧಿಕಾರಿಗಳು ತನಿಖೆ ನಡೆಸುತ್ತಿರುವುದರಿಂದ ಆಪಾದಿತ ಘಟನೆಗಳ ಬಗ್ಗೆ ಪ್ರತ್ಯೇಕ ತನಿಖೆ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

ಪ್ರಕರಣ ಸಂಬಂಧ ಅಫಿಡವಿಟ್ ಸಲ್ಲಿಸಲು ಅಸ್ಸಾಂ ಸರ್ಕಾರಕ್ಕೆ ಸಮಯ ನೀಡಿರುವ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆ ವೇಳೆ, ನಕಲಿ ಎನ್‌ಕೌಂಟರ್‌ಗಳ ಕುರಿತ ತನಿಖೆಗೆ ನ್ಯಾಯಾಲಯ ಆಯೋಗ ರಚಿಸಲು ಉದ್ದೇಶಿಸಿರುವುದನ್ನು ನ್ಯಾಯಮೂರ್ತಿ ಕಾಂತ್ ಅವರು ಪುನರುಚ್ಚರಿಸಿದ್ದಾರೆ. ಆಯೋಗಕ್ಕೆ ನೇಮಕ ಮಾಡಲು ನಿವೃತ್ತ ನ್ಯಾಯಾಧೀಶರ ಹೆಸರನ್ನು ಸೂಚಿಸಲು ಕಕ್ಷಿದಾರಿಗೆ ಕೋರಿದ್ದಾರೆ.

ಒಂದು ಹಂತದಲ್ಲಿ, ಅಸ್ಸಾಂನ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಳಿನ್ ಕೊಹ್ಲಿ ಅವರು, ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಯಾವುದೇ ಪೊಲೀಸ್ ಸಿಬ್ಬಂದಿಗೆ ಬಡ್ತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಭುಯಾನ್ ಅವರು “ಆರೋಪಿಗಳು ಸುಖಾ ಸುಮ್ಮನೆ ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವುದು ಕಾನೂನಿನಲ್ಲಿ ಒಳ್ಳೆಯದಲ್ಲ” ಎಂದಿದ್ದಾರೆ.

ಅಸ್ಸಾಂನ ವಕೀಲರಾದ ಆರಿಫ್ ಎಂಡಿ ಯಾಸಿನ್ ಜ್ವಾಡ್ಡರ್ ಅವರು, ಅಸ್ಸಾಂನಲ್ಲಿ ರಾಜ್ಯ ಪೊಲೀಸರು ನಡೆಸಿದ ಎನ್‌ಕೌಂಟರ್ ವಿಷಯವನ್ನು ಪ್ರಸ್ತಾಪಿಸಿ ಅರ್ಜಿ ಸಲ್ಲಿಸಿದ್ದಾರೆ.

ಮೇ 2021ರಿಂದ (ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರ ವಹಿಸಿಕೊಂಡಾಗಿಂದ) ಅಸ್ಸಾಂ ಪೊಲೀಸರು ಮತ್ತು ವಿವಿಧ ಪ್ರಕರಣಗಳ ಆರೋಪಿಗಳ ನಡುವೆ 80ಕ್ಕೂ ಹೆಚ್ಚು ನಕಲಿ ಎನ್‌ಕೌಂಟರ್‌ಗಳು ನಡೆದಿವೆ ಎಂದು ಆರೋಪಿಸಿರುವ ಅರ್ಜಿದಾರರು, ಸಿಬಿಐ, ಎಸ್‌ಐಟಿ ಅಥವಾ ಇತರ ರಾಜ್ಯಗಳ ಪೊಲೀಸ್ ತಂಡದಂತಹ ಸ್ವತಂತ್ರ ಏಜೆನ್ಸಿಯಿಂದ ಈ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.

ಅರ್ಜಿ ಸಂಬಂಧ, ಕಳೆದ ವರ್ಷದ ಜುಲೈ 17ರಂದು ಅಸ್ಸಾಂ ಸರ್ಕಾರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಅಸ್ಸಾಂ ಮಾನವ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಈ ವರ್ಷದ ಏಪ್ರಿಲ್‌ನಲ್ಲಿ, ಅರ್ಜಿದಾರರು ಕೆಲವು ಹೆಚ್ಚುವರಿ ಮಾಹಿತಿಗಳನ್ನು ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಅದರಂತೆ ಅವರು ಟಿನ್ಸುಕಿಯಾ ಎನ್‌ಕೌಂಟರ್ ಪ್ರಕರಣದ ಸಂತ್ರಸ್ತರ ಅಫಿಡವಿಟ್‌ಗಳನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗ್ತಿದೆ. ಈ ಪ್ರಕರಣದಲ್ಲಿ ಮೂವರು ವ್ಯಕ್ತಿಗಳು (ದೀಪಜ್ಯೋತಿ ನಿಯೋಗ್, ಬಿಸ್ವನಾಥ್ ಬರ್ಗೋಹೈನ್ ಮತ್ತು ಮನೋಜ್ ಬುರಾಗೊಹೈನ್) ಪೊಲೀಸ್ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಟಿನ್ಸುಕಿಯಾ ಎನ್‌ಕೌಂಟರ್ ಪ್ರಕರಣದ ಇಬ್ಬರು ಬಲಿಪಶುಗಳ ಕುಟುಂಬ ಸದಸ್ಯರು, ಅಂದರೆ. ಬಿಸ್ವನಾಥ್ ಮತ್ತು ಮನೋಜ್‌ನ ಕುಟುಂಬಸ್ಥರು ಇಬ್ವರು ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಲು ಮುಂದಾಗಿದ್ದರು. ಆದರೆ, ಅವರು ನಿಷೇಧಿತ ಉಗ್ರಗಾಮಿ ಸಂಘಟನೆ ಉಲ್ಫಾಗೆ ಸೇರಲು ತೆರಳಿದ್ದಾರೆ ಎಂದು ಒಪ್ಪಿಕೊಳ್ಳದ ಹೊರತು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಸ್ಥಳೀಯರ ಪೊಲೀಸರು ನಿರಾಕರಿಸಿದ್ದಾರೆ. ಎನ್‌ಕೌಂಟರ್ ಬಳಿಕ ಸಂತ್ರಸ್ತರ ಮೇಲೆಯೇ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಅಸ್ಸಾಂನ ಧೋಲ್ಲಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಹಾಜರಿದ್ದರು. ಅವರ ಪಿಸ್ತೂಲ್ ಅನ್ನು ಸಂತ್ರಸ್ತೆ ದೀಪಜ್ಯೋತಿ ನಿಯೋಗ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಿರುವಾಗ, ಅದೇ ಪೊಲೀಸ್ ಅಧಿಕಾರಿ ತನ್ನನ್ನೇ ಪ್ರಕರಣದ ತನಿಖಾಧಿಕಾರಿಯಾಗಿ ನೇಮಿಸಿಕೊಂಡಿದ್ದಾರೆ ಎಂದು ಅರ್ಜಿದಾರ ನ್ಯಾಯಾಲಯಕ್ಕೆ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...