Homeಮುಖಪುಟನಕಲಿ ಎನ್‌ಕೌಂಟರ್ | "ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ" : ಸುಪ್ರೀಂ...

ನಕಲಿ ಎನ್‌ಕೌಂಟರ್ | “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ” : ಸುಪ್ರೀಂ ಕೋರ್ಟ್

- Advertisement -
- Advertisement -

ಅಸ್ಸಾಂನ ‘ನಕಲಿ ಎನ್‌ಕೌಂಟರ್‌’ ಗಳ ವಿರುದ್ದ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಸುಪ್ರೀಂ ಕೋರ್ಟ್ ಪೀಠ, “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಕಾನೂನಿನಡಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಟೀಕಿಸಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠದ ಭಾಗವಾದ ನ್ಯಾಯಮೂರ್ತಿ ಭುಯಾನ್ ಅವರು ಗೌಹಾಟಿ ಹೈಕೋರ್ಟ್‌ ಆದೇಶದ ವಿರುದ್ಧ ಸಲ್ಲಿಸಲಾಗಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆ ನಡೆಸಿದ್ದಾರೆ.

ಅರ್ಜಿದಾರರು ನಕಲಿ ಎನ್‌ಕೌಂಟರ್‌ಗಳ ಬಗ್ಗೆ ತನಿಖೆ ನಡೆಸಲು ಕೋರಿ ಗೌಹಾಟಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ, ಅವರ ಮನವಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ಪ್ರತಿ ಪ್ರಕರಣದಲ್ಲೂ ರಾಜ್ಯದ ಅಧಿಕಾರಿಗಳು ತನಿಖೆ ನಡೆಸುತ್ತಿರುವುದರಿಂದ ಆಪಾದಿತ ಘಟನೆಗಳ ಬಗ್ಗೆ ಪ್ರತ್ಯೇಕ ತನಿಖೆ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

ಪ್ರಕರಣ ಸಂಬಂಧ ಅಫಿಡವಿಟ್ ಸಲ್ಲಿಸಲು ಅಸ್ಸಾಂ ಸರ್ಕಾರಕ್ಕೆ ಸಮಯ ನೀಡಿರುವ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆ ವೇಳೆ, ನಕಲಿ ಎನ್‌ಕೌಂಟರ್‌ಗಳ ಕುರಿತ ತನಿಖೆಗೆ ನ್ಯಾಯಾಲಯ ಆಯೋಗ ರಚಿಸಲು ಉದ್ದೇಶಿಸಿರುವುದನ್ನು ನ್ಯಾಯಮೂರ್ತಿ ಕಾಂತ್ ಅವರು ಪುನರುಚ್ಚರಿಸಿದ್ದಾರೆ. ಆಯೋಗಕ್ಕೆ ನೇಮಕ ಮಾಡಲು ನಿವೃತ್ತ ನ್ಯಾಯಾಧೀಶರ ಹೆಸರನ್ನು ಸೂಚಿಸಲು ಕಕ್ಷಿದಾರಿಗೆ ಕೋರಿದ್ದಾರೆ.

ಒಂದು ಹಂತದಲ್ಲಿ, ಅಸ್ಸಾಂನ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಳಿನ್ ಕೊಹ್ಲಿ ಅವರು, ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಯಾವುದೇ ಪೊಲೀಸ್ ಸಿಬ್ಬಂದಿಗೆ ಬಡ್ತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಭುಯಾನ್ ಅವರು “ಆರೋಪಿಗಳು ಸುಖಾ ಸುಮ್ಮನೆ ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವುದು ಕಾನೂನಿನಲ್ಲಿ ಒಳ್ಳೆಯದಲ್ಲ” ಎಂದಿದ್ದಾರೆ.

ಅಸ್ಸಾಂನ ವಕೀಲರಾದ ಆರಿಫ್ ಎಂಡಿ ಯಾಸಿನ್ ಜ್ವಾಡ್ಡರ್ ಅವರು, ಅಸ್ಸಾಂನಲ್ಲಿ ರಾಜ್ಯ ಪೊಲೀಸರು ನಡೆಸಿದ ಎನ್‌ಕೌಂಟರ್ ವಿಷಯವನ್ನು ಪ್ರಸ್ತಾಪಿಸಿ ಅರ್ಜಿ ಸಲ್ಲಿಸಿದ್ದಾರೆ.

ಮೇ 2021ರಿಂದ (ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರ ವಹಿಸಿಕೊಂಡಾಗಿಂದ) ಅಸ್ಸಾಂ ಪೊಲೀಸರು ಮತ್ತು ವಿವಿಧ ಪ್ರಕರಣಗಳ ಆರೋಪಿಗಳ ನಡುವೆ 80ಕ್ಕೂ ಹೆಚ್ಚು ನಕಲಿ ಎನ್‌ಕೌಂಟರ್‌ಗಳು ನಡೆದಿವೆ ಎಂದು ಆರೋಪಿಸಿರುವ ಅರ್ಜಿದಾರರು, ಸಿಬಿಐ, ಎಸ್‌ಐಟಿ ಅಥವಾ ಇತರ ರಾಜ್ಯಗಳ ಪೊಲೀಸ್ ತಂಡದಂತಹ ಸ್ವತಂತ್ರ ಏಜೆನ್ಸಿಯಿಂದ ಈ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.

ಅರ್ಜಿ ಸಂಬಂಧ, ಕಳೆದ ವರ್ಷದ ಜುಲೈ 17ರಂದು ಅಸ್ಸಾಂ ಸರ್ಕಾರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಅಸ್ಸಾಂ ಮಾನವ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಈ ವರ್ಷದ ಏಪ್ರಿಲ್‌ನಲ್ಲಿ, ಅರ್ಜಿದಾರರು ಕೆಲವು ಹೆಚ್ಚುವರಿ ಮಾಹಿತಿಗಳನ್ನು ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಅದರಂತೆ ಅವರು ಟಿನ್ಸುಕಿಯಾ ಎನ್‌ಕೌಂಟರ್ ಪ್ರಕರಣದ ಸಂತ್ರಸ್ತರ ಅಫಿಡವಿಟ್‌ಗಳನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗ್ತಿದೆ. ಈ ಪ್ರಕರಣದಲ್ಲಿ ಮೂವರು ವ್ಯಕ್ತಿಗಳು (ದೀಪಜ್ಯೋತಿ ನಿಯೋಗ್, ಬಿಸ್ವನಾಥ್ ಬರ್ಗೋಹೈನ್ ಮತ್ತು ಮನೋಜ್ ಬುರಾಗೊಹೈನ್) ಪೊಲೀಸ್ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಟಿನ್ಸುಕಿಯಾ ಎನ್‌ಕೌಂಟರ್ ಪ್ರಕರಣದ ಇಬ್ಬರು ಬಲಿಪಶುಗಳ ಕುಟುಂಬ ಸದಸ್ಯರು, ಅಂದರೆ. ಬಿಸ್ವನಾಥ್ ಮತ್ತು ಮನೋಜ್‌ನ ಕುಟುಂಬಸ್ಥರು ಇಬ್ವರು ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಲು ಮುಂದಾಗಿದ್ದರು. ಆದರೆ, ಅವರು ನಿಷೇಧಿತ ಉಗ್ರಗಾಮಿ ಸಂಘಟನೆ ಉಲ್ಫಾಗೆ ಸೇರಲು ತೆರಳಿದ್ದಾರೆ ಎಂದು ಒಪ್ಪಿಕೊಳ್ಳದ ಹೊರತು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಸ್ಥಳೀಯರ ಪೊಲೀಸರು ನಿರಾಕರಿಸಿದ್ದಾರೆ. ಎನ್‌ಕೌಂಟರ್ ಬಳಿಕ ಸಂತ್ರಸ್ತರ ಮೇಲೆಯೇ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಅಸ್ಸಾಂನ ಧೋಲ್ಲಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಹಾಜರಿದ್ದರು. ಅವರ ಪಿಸ್ತೂಲ್ ಅನ್ನು ಸಂತ್ರಸ್ತೆ ದೀಪಜ್ಯೋತಿ ನಿಯೋಗ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಿರುವಾಗ, ಅದೇ ಪೊಲೀಸ್ ಅಧಿಕಾರಿ ತನ್ನನ್ನೇ ಪ್ರಕರಣದ ತನಿಖಾಧಿಕಾರಿಯಾಗಿ ನೇಮಿಸಿಕೊಂಡಿದ್ದಾರೆ ಎಂದು ಅರ್ಜಿದಾರ ನ್ಯಾಯಾಲಯಕ್ಕೆ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...