Homeಮುಖಪುಟಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ತಮಿಳುನಾಡು ಮಾಜಿ ಎಡಿಜಿಪಿ ರಾಜೇಶ್ ದಾಸ್‌ಗೆ 3ವರ್ಷ ಜೈಲು...

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ತಮಿಳುನಾಡು ಮಾಜಿ ಎಡಿಜಿಪಿ ರಾಜೇಶ್ ದಾಸ್‌ಗೆ 3ವರ್ಷ ಜೈಲು ಶಿಕ್ಷೆ

- Advertisement -
- Advertisement -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾಜಿ ಹಿರಿಯ ಪೊಲೀಸ್ ಅಧಿಕಾರಿ ಎಡಿಜಿಪಿ ರಾಜೇಶ್ ದಾಸ್ ಅವರನ್ನು ತಮಿಳುನಾಡು ನ್ಯಾಯಾಲಯ ಶುಕ್ರವಾರ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಇಂದು ವಿಧಿಸಿ ಆದೇಶ ಹೊರಡಿಸಿದೆ.

ಮಾಜಿ ಎಡಿಜಿಪಿ ರಾಜೇಶ್ ದಾಸ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 10,000ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ. 2021ರ ಆರಂಭದಲ್ಲಿ ನೀಡಿದ ದೂರಿನ ಪ್ರಕಾರ, ಅವರು ಕಿರಿಯ ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಫೆಬ್ರವರಿ 21, 2021ರಲ್ಲಿ ಹಿರಿಯ ಅಧಿಕಾರಿ ರಾಜೇಶ್ ದಾಸ್ ವಿರುದ್ಧ ದೂರು ದಾಖಲಿಸಿದ್ದರು. ರಾಜೇಶ್ ದಾಸ್ ಅವರು ಅಂದಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸಾಮಿ ಅವರ ಭದ್ರತೆಗಾಗಿ ಕರ್ತವ್ಯದ ಮೇಲೆ ಹೋಗುತ್ತಿದ್ದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪದಲ್ಲಿ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿಗೆ ವಿಲ್ಲುಪುರಂ ನ್ಯಾಯಾಲಯವು ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ; ಪೋಕ್ಸೊ ಕೈಬಿಡಲು ಶಿಫಾರಸು

ಮಾಜಿ ಎಡಿಜಿಪಿ ರಾಜೇಶ್ ದಾಸ್ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯಿದೆ, 1998 ರ ಹಲವು ವಿಭಾಗಗಳ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಎಐಎಡಿಎಂಕೆ ಸರ್ಕಾರ ದಾಸ್ ಅವರನ್ನು ಅಮಾನತುಗೊಳಿಸಿತ್ತು. ಅಂದಿನ ಸರ್ಕಾರ ತನಿಖೆಗಾಗಿ ಆರು ಸದಸ್ಯರ ಸಮಿತಿಯನ್ನು ರಚಿಸಿತ್ತು. ಪ್ರಾಸಿಕ್ಯೂಷನ್ ಪೊಲೀಸ್ ಸಿಬ್ಬಂದಿ ಸೇರಿದಂತೆ 68 ಜನರ ಹೇಳಿಕೆಗಳನ್ನು ದಾಖಲಿಸಿದೆ. ರಾಜೇಶ್ ದಾಸ್ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದು, ತಕ್ಷಣದ ಜಾಮೀನು ಪಡೆಯಬಹುದು ಎಂದು ಪ್ರಾಸಿಕ್ಯೂಷನ್ ತಂಡದ ಸದಸ್ಯರೊಬ್ಬರು ಹೇಳಿದರು.

ಈ ವಿಷಯವು 2021ರಲ್ಲಿ ಚುನಾವಣಾ ವಿಷಯವಾಗಿ ಮಾರ್ಪಟ್ಟಿತ್ತು ಮತ್ತು ಆಗಿನ ವಿರೋಧ ಪಕ್ಷದ ನಾಯಕ ಎಂಕೆ ಸ್ಟಾಲಿನ್ ನಾವು ಅಧಿಕಾರಕ್ಕೆ ಬಂದರೆ ಈ ಬಗ್ಗೆ ಸರಿಯಾದ ಕ್ರಮವನ್ನು ಕೈಗೊಳ್ಳಲಾಗುವುದು ಮತ್ತು ಶಿಕ್ಷೆಯನ್ನು ನೀಡಲಾಗುವುದು ಭರವಸೆ ನೀಡಿದ್ದರು.

2021ರಲ್ಲಿ, ಮದ್ರಾಸ್ ಹೈಕೋರ್ಟ್ ಈ ವಿಷಯದ ಬಗ್ಗೆ ಸ್ವಯಂ ಮೋಟೋ ಸೂಚನೆಯನ್ನು ತೆಗೆದುಕೊಂಡಿತು. ಈ ಪ್ರಕರಣ ತಮಿಳುನಾಡು ಪೊಲೀಸ್ ಪಡೆಗಳಲ್ಲಿನ ಮಹಿಳಾ ಅಧಿಕಾರಿಗಳಿಗೆ ”ಆಘಾತಕಾರಿ” ವಿಚಾರವಾಗಿದೆ ಎಂದು ವಿವರಿಸಿತು.

ನ್ಯಾಯಾಲಯವು ಈ ಘಟನೆಯನ್ನು ತೀವ್ರವಾಗಿ ಖಂಡಿಸಿತು ಮತ್ತು ತನಿಖೆಯ ಮೇಲ್ವಿಚಾರಣೆಯ ಅಗತ್ಯವಿರುವ ಅಸಾಧಾರಣ ಪ್ರಕರಣವೆಂದು ಗುರುತಿಸಿದೆ. ನ್ಯಾಯಾಲಯದ ನಿರ್ದೇಶನವನ್ನು ಅನುಸರಿಸಿ, ತಮಿಳುನಾಡು ಸರ್ಕಾರವು ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...