Homeಕರ್ನಾಟಕಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

ಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

- Advertisement -
- Advertisement -

ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ.ಜಿ.ಎಂ.ಸಂಜೀವ್ ವಿರುದ್ಧ ತನಿಖೆ ನಡೆಸಲು ಸಮಿತಿ ರಚಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ.

ಡೀನ್‌ ಸಂಜೀವ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಕೋರಿ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ್ದ ಸಿದ್ದರಾಮಯ್ಯ ಅವರು, ಆರೋಪಗಳ ಬಗ್ಗೆ ಪರಿಶೀಲಿಸಿ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ ಅವರಿಗೆ ಸೂಚನೆ ನೀಡಿದ್ದರು.

ತಕ್ಷಣವೇ ತನಿಖೆಗೆ ಕ್ರಮ ವಹಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್‌ ಸಿಂಗ್ ಅವರಿಗೆ ವಂದಿತ ಶರ್ಮಾ ಸೂಚಿಸಿದ್ದರು. ನವೀನ್‌ ಸಿಂಗ್ ಅವರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ.ರವಿ ಮತ್ತು ಮುಖ್ಯ ಆಡಳಿತಾಧಿಕಾರಿ ಕೆ.ಎ.ಉಮಾ ಅವರನ್ನೊಳಗೊಂಡ ತನಿಖಾ ಸಮಿತಿ ರಚನೆ ಮಾಡಿದ್ದಾರೆ.

“ಸಮಿತಿಯು ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಚಾಮರಾಜನಗರ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ತಕ್ಷಣವೇ ಭೇಟಿ ನೀಡಿ ಪರಿಶೀಲಿಸಬೇಕು. ಕೂಡಲೇ ವರದಿ ನೀಡಬೇಕು” ಎಂದು ನವೀನ್ ರಾಜ್ ಸಿಂಗ್ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಪರಿಶಿಷ್ಟರ ಮತಬುಟ್ಟಿಗೆ ಕೈಹಾಕಿ ಬಿಜೆಪಿ ಎಡವಿದ್ದೆಲ್ಲಿ?

“ಸಿಮ್ಸ್‌ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ.ಗಿರೀಶ್ ಮತ್ತು ಡಾ.ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್‌ನ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ.ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಅಂಬೇಡ್ಕರ್‌ ಕುರಿತು ಅವಹೇಳನ ಮಾಡಿರುವ ಸಂಬಂಧ ದೂರು ದಾಖಲಾಗಿರುವುದು ಅಂಬೇಡ್ಕರ್‌ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ತಿಳಿದ ಬಳಿಕ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಿಮ್ಸ್‌ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದರು.

ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್‌ ನಿರ್ದೇಶಕರ ಡಾ. ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು. ಬಳಿಕ ಎರಡೂ ಕಡೆಯಿಂದ ದೂರು ಪ್ರತಿದೂರು ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...