ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದಲ್ಲಿ ರಸ್ತೆ ಬದಿ ಮೇಯುತ್ತಿದ್ದ ದನದ ಕಳ್ಳತನಕ್ಕೆ ಮುಂದಾದ ಮೂವರು ಸಂಘಪರಿವಾರದ ಕಾರ್ಯಕರ್ತರು ಸಿಕ್ಕಿಬಿದ್ದಿದ್ದು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.
ಮುಹಮ್ಮದ್ ಇಮ್ರಾನ್ ಎಂಬುವವರಿಗೆ ಸೇರಿದ ದನದ ಕರುವನ್ನು ನವೀನ ಕುದ್ರೆಬೆಟ್ಟು ಮತ್ತು ಮಾಧವ ಸುದೇಕಾರ್ ಎಂಬ ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದ ಸಂಘಪರಿವಾರದ ಕಾರ್ಯಕರ್ತರು ಕಳ್ಳತನ ಮಾಡಿ ಪಿಕಪ್ ವಾಹನದಲ್ಲಿ ತುಂಬಿದ್ದರು. ಅಷ್ಟರಲ್ಲಿ ವಿಷಯ ತಿಳಿದ ಸ್ಥಳೀಯರು ಬಂದು ಕರು ಬಿಡಿಸಿ ಅವರನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆಯೇ ಸಹ ಇದೇ ಸ್ಥಳದಲ್ಲಿ ಹಲವು ದನ – ಕರುಗಳು ಕಳುವಾದ ಆರೋಪವಿದೆ. ಈದ್ ಹಬ್ಬದ ಹಿನ್ನೆಲೆಯಲ್ಲಿ ಈ ದನದ ಕಳ್ಳತನದ ಪ್ರಯತ್ನ ಶಾಂತಿ ಕದಡುವ ಯತ್ನ, ಹಾಗಾಗಿ ಆರೋಪಿಗಳ ಮೇಲೆ ಎಫ್ಐಆರ್ ದಾಖಲಿಸಿ ಕಾನೂನು ಪ್ರಕಾರ ಶಿಕ್ಷೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಆದರೆ ಈ ಕುರಿತು ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವಾರ್ತಾಭಾರತಿ ವರದಿ ಮಾಡಿದೆ.
ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?