Homeಮುಖಪುಟಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ಈದ್ ಹಬ್ಬದ ಹಿನ್ನೆಲೆಯಲ್ಲಿ ಈ ದನದ ಕಳ್ಳತನದ ಪ್ರಯತ್ನ ಶಾಂತಿ ಕದಡುವ ಯತ್ನ ಎಂದು ಸ್ಥಳೀಯರು ದೂರಿದ್ದಾರೆ.

- Advertisement -
- Advertisement -

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದಲ್ಲಿ ರಸ್ತೆ ಬದಿ ಮೇಯುತ್ತಿದ್ದ ದನದ ಕಳ್ಳತನಕ್ಕೆ ಮುಂದಾದ ಮೂವರು ಸಂಘಪರಿವಾರದ ಕಾರ್ಯಕರ್ತರು ಸಿಕ್ಕಿಬಿದ್ದಿದ್ದು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.

ಮುಹಮ್ಮದ್ ಇಮ್ರಾನ್ ಎಂಬುವವರಿಗೆ ಸೇರಿದ ದನದ ಕರುವನ್ನು ನವೀನ ಕುದ್ರೆಬೆಟ್ಟು ಮತ್ತು ಮಾಧವ ಸುದೇಕಾರ್ ಎಂಬ ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದ ಸಂಘಪರಿವಾರದ ಕಾರ್ಯಕರ್ತರು ಕಳ್ಳತನ ಮಾಡಿ ಪಿಕಪ್ ವಾಹನದಲ್ಲಿ ತುಂಬಿದ್ದರು. ಅಷ್ಟರಲ್ಲಿ ವಿಷಯ ತಿಳಿದ ಸ್ಥಳೀಯರು ಬಂದು ಕರು ಬಿಡಿಸಿ ಅವರನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೇ ಸಹ ಇದೇ ಸ್ಥಳದಲ್ಲಿ ಹಲವು ದನ – ಕರುಗಳು ಕಳುವಾದ ಆರೋಪವಿದೆ. ಈದ್ ಹಬ್ಬದ ಹಿನ್ನೆಲೆಯಲ್ಲಿ ಈ ದನದ ಕಳ್ಳತನದ ಪ್ರಯತ್ನ ಶಾಂತಿ ಕದಡುವ ಯತ್ನ, ಹಾಗಾಗಿ ಆರೋಪಿಗಳ ಮೇಲೆ ಎಫ್‌ಐಆರ್ ದಾಖಲಿಸಿ ಕಾನೂನು ಪ್ರಕಾರ ಶಿಕ್ಷೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಆದರೆ ಈ ಕುರಿತು ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವಾರ್ತಾಭಾರತಿ ವರದಿ ಮಾಡಿದೆ.


ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...