Homeಸಿನಿಮಾಕ್ರೀಡೆಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನೀವು ಒಪ್ಪಬಹುದು ಅಥವಾ ಬಿಡಬಹುದು, ಪಾಕ್ ಗೆದ್ದಾಗ ಆ ತಂಡವನ್ನು ಮೊದಲು ಅಭಿನಂದಿಸಿದ ವಿರಾಟ್ ಕೊಹ್ಲಿಯವರ ಸರಿಯಾದ ಸ್ಫೂರ್ತಿಯನ್ನು ತೆಗೆದುಕೊಳ್ಳೋಣ - ಮುಫ್ತಿ

- Advertisement -
- Advertisement -

ಭಾರತ ಪಾಕಿಸ್ತಾನದ ನಡುವೆ ನಡೆದ ಐಸಿಸಿ ಟಿಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿ ಪಾಕ್ ಗೆದ್ದಾಗ ಸಂಭ್ರಮಿಸಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಶ್ರೀನಗರದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(UAPA)ಯ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶ್ರೀ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಶ್ರೀನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಪಾಕ್ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅವುಗಳ ಆಧಾರದ ಮೇಲೆ ಶ್ರೀನಗರದ ಕರಣ್ ನಗರ್ ಮತ್ತು ಸೌರ ಪೊಲೀಸ್ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ಪ್ರಕರಣಗಳ ಅಡಿಯಲ್ಲಿ ಕೇಸು ದಾಖಲಾಗಿಸಲಾಗದೆ.

ಶ್ರೀ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಧಿಕಾರಿಗಳು ಈ ಕುರಿತು ಫ್ಯಾಕ್ಟ್ ಫೈಂಡಿಂಗ್ ಸಮಿತಿ ರಚಿಸಲಾಗಿದ್ದು ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುವುದು ಮತ್ತು ವಿಡಿಯೋ ವೈರಲ್ ಆಗಿದ್ದು ಹೇಗೆ ಎಂದು ತನಿಖೆ ನಡೆಸಲು ನಿರ್ಧರಿಸಿದ್ದಾರೆ. 48 ಗಂಟೆಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. “ನಮ್ಮ ಸಂಸ್ಥೆಯಲ್ಲಿ ಸಂಭ್ರಮಾಚರಣೆ ನಡೆದಿದೆ ಎನ್ನುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಆಗಿದ್ದರೂ ಸತ್ಯಶೋಧನಾ ಸಮಿತಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ವೈರಲ್ ಆಗಿರುವ ವಿಡಿಯೋಗಳನ್ನು ಮತ್ತು ಅವುಗಳಲ್ಲಿರುವ ಜನರನ್ನು ಪರಿಶೀಲಿಸುವಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸರ ಶಿಸ್ತುಕ್ರಮವನ್ನು ಜಮ್ಮು ಕಾಶ್ಮೀರ ಪೀಪಲ್ಸ್ ಕಾನ್ಸರೆನ್ಸ್‌ನ ಮುಖಂಡ ಸಾಜಿದ್ ಲೋನ್ ಬಲವಾಗಿ ಖಂಡಿಸಿದ್ದಾರೆ. “ಇದನ್ನು ನಾನು ಒಪ್ಪುವುದಿಲ್ಲ. ಅವರು ಬೇರೆ ತಂಡಕ್ಕೆ ಹುರಿದುಂಬಿಸಿದ ಕಾರಣ ಅವರು ದೇಶಭಕ್ತರಲ್ಲ ಎಂದು ನೀವು ಭಾವಿಸಿದರೆ- ಅವರು ದೇಶಭಕ್ತಿಯ ದಾರಿ ತಪ್ಪಿದ್ದಾರೆಂದು ನೀವು ಭಾವಿಸಿದರೆ ಅವರನ್ನು ಹಿಂದಕ್ಕೆ ಕರೆತರುವ ಧೈರ್ಯ ಮತ್ತು ನಂಬಿಕೆಯನ್ನು ನೀವು ಹೊಂದಿರಬೇಕು. ದಂಡನಾತ್ಮಕ ಕ್ರಮಗಳು ಸಹಾಯ ಮಾಡುವುದಿಲ್ಲ. ಈ ಹಿಂದೆಯೂ ಸಹಾಯ ಮಾಡಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೆಹಬೂಬ ಮುಫ್ತಿಯವರು ಟ್ವೀಟ್ ಮಾಡಿ, “ಗೃಹ ಸಚಿವರು ಕಾಶ್ಮೀರಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕೇಸು ಹಾಕುವ ಮೂಲಕ ತಮ್ಮ ಮನ್ ಕಿ ಬಾತ್ ಶುರು ಮಾಡಿದ್ದಾರೆ. ವಿದ್ಯಾವಂತ ಯುವಜನರು ಏಕೆ ಪಾಕಿಸ್ತಾನದೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ ಎಂಬುದನ್ನು ಅರಿಯುವ ಬದಲು ಭಾರತ ಸರ್ಕಾರ ಅವರ ಮೇಲೆ ಪ್ರತೀಕಾರದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಕ್ರಮಗಳು ಅವರನ್ನು ಮತ್ತಷ್ಟು ದೂರ ತಳ್ಳುತ್ತವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಪಾಕ್ ಗೆಲುವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿಗಳ ಮೇಲೆ ಇಷ್ಟೊಂದು ಕೋಪ ಏಕೆ? ಕೆಲವರು ದೇಶದ್ರೋಹಿಗಳ ಮೇಲೆ ಗುಂಡು ಹಾರಿಸಿ ಎಂದು ಕೊಲೆಗಡುಕ ಘೋಷಣೆಗಳನ್ನೂ ಕೂಗುತ್ತಿದ್ದಾರೆ. ಜಮ್ಮು ಕಾಶ್ಮೀರ ಛಿದ್ರಗೊಂಡಾಗ ಮತ್ತು ವಿಶೇಷ ಸ್ಥಾನಮಾನವನ್ನು ಕಸಿದುಕೊಂಡಾಗ ಎಷ್ಟು ಮಂದಿ ಸಿಹಿ ಹಂಚಿ ಸಂಭ್ರಮಿಸಿದರು ಎಂಬುದನ್ನು ಯಾರೂ ಮರೆತಿಲ್ಲ. ನೀವು ಒಪ್ಪಬಹುದು ಅಥವಾ ಬಿಡಬಹುದು, ಪಾಕ್ ಗೆದ್ದಾಗ ಆ ತಂಡವನ್ನು ಮೊದಲು ಅಭಿನಂದಿಸಿದ ವಿರಾಟ್ ಕೊಹ್ಲಿಯವರ ಸರಿಯಾದ ಸ್ಫೂರ್ತಿಯನ್ನು ತೆಗೆದುಕೊಳ್ಳೋಣ” ಎಂದು ಮುಫ್ತಿ ಹೇಳಿದ್ದಾರೆ.

ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ ಮೊಹಮ್ಮದ್ ರಿಜ್ವಾನ್‌ರನ್ನು ಅಪ್ಪಿಕೊಂಡು ಅಭಿನಂದಿಸಿದರು. ಮತ್ತೊಬ್ಬ ಆಟಗಾರ ಪಾಕ್ ನಾಯಕ ಬಾಬರ್ ಅಜಂರಿಗೆ ಅಭಿನಂದನೆ ತಿಳಿಸಿದರು. ಈ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ “ನಿಜವಾದ ಕ್ರೀಡಾಸ್ಪೂರ್ತಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ. ಅದೇ ರೀತಿ ಪಂದ್ಯದ ನಂತರ ಭಾರತದ ತಂಡದ ಮೆಂಟರ್ ಮಹೇಂದ್ರ ಸಿಂಗ್ ಧೋನಿ ಪಾಕಿಸ್ತಾನದ ಆಟಗಾರರ ಜೊತೆ ಮಾತುಕತೆ ನಡೆಸಿ ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ.


ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್


ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.

ಪಾಕ್ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ “Spirit of Cricket” ಎಂದು ಬರೆದಿದೆ.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...