Homeಸಿನಿಮಾಕ್ರೀಡೆಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನೀವು ಒಪ್ಪಬಹುದು ಅಥವಾ ಬಿಡಬಹುದು, ಪಾಕ್ ಗೆದ್ದಾಗ ಆ ತಂಡವನ್ನು ಮೊದಲು ಅಭಿನಂದಿಸಿದ ವಿರಾಟ್ ಕೊಹ್ಲಿಯವರ ಸರಿಯಾದ ಸ್ಫೂರ್ತಿಯನ್ನು ತೆಗೆದುಕೊಳ್ಳೋಣ - ಮುಫ್ತಿ

- Advertisement -
- Advertisement -

ಭಾರತ ಪಾಕಿಸ್ತಾನದ ನಡುವೆ ನಡೆದ ಐಸಿಸಿ ಟಿಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿ ಪಾಕ್ ಗೆದ್ದಾಗ ಸಂಭ್ರಮಿಸಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಶ್ರೀನಗರದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(UAPA)ಯ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶ್ರೀ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಶ್ರೀನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಪಾಕ್ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅವುಗಳ ಆಧಾರದ ಮೇಲೆ ಶ್ರೀನಗರದ ಕರಣ್ ನಗರ್ ಮತ್ತು ಸೌರ ಪೊಲೀಸ್ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ಪ್ರಕರಣಗಳ ಅಡಿಯಲ್ಲಿ ಕೇಸು ದಾಖಲಾಗಿಸಲಾಗದೆ.

ಶ್ರೀ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಧಿಕಾರಿಗಳು ಈ ಕುರಿತು ಫ್ಯಾಕ್ಟ್ ಫೈಂಡಿಂಗ್ ಸಮಿತಿ ರಚಿಸಲಾಗಿದ್ದು ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುವುದು ಮತ್ತು ವಿಡಿಯೋ ವೈರಲ್ ಆಗಿದ್ದು ಹೇಗೆ ಎಂದು ತನಿಖೆ ನಡೆಸಲು ನಿರ್ಧರಿಸಿದ್ದಾರೆ. 48 ಗಂಟೆಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. “ನಮ್ಮ ಸಂಸ್ಥೆಯಲ್ಲಿ ಸಂಭ್ರಮಾಚರಣೆ ನಡೆದಿದೆ ಎನ್ನುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಆಗಿದ್ದರೂ ಸತ್ಯಶೋಧನಾ ಸಮಿತಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ವೈರಲ್ ಆಗಿರುವ ವಿಡಿಯೋಗಳನ್ನು ಮತ್ತು ಅವುಗಳಲ್ಲಿರುವ ಜನರನ್ನು ಪರಿಶೀಲಿಸುವಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸರ ಶಿಸ್ತುಕ್ರಮವನ್ನು ಜಮ್ಮು ಕಾಶ್ಮೀರ ಪೀಪಲ್ಸ್ ಕಾನ್ಸರೆನ್ಸ್‌ನ ಮುಖಂಡ ಸಾಜಿದ್ ಲೋನ್ ಬಲವಾಗಿ ಖಂಡಿಸಿದ್ದಾರೆ. “ಇದನ್ನು ನಾನು ಒಪ್ಪುವುದಿಲ್ಲ. ಅವರು ಬೇರೆ ತಂಡಕ್ಕೆ ಹುರಿದುಂಬಿಸಿದ ಕಾರಣ ಅವರು ದೇಶಭಕ್ತರಲ್ಲ ಎಂದು ನೀವು ಭಾವಿಸಿದರೆ- ಅವರು ದೇಶಭಕ್ತಿಯ ದಾರಿ ತಪ್ಪಿದ್ದಾರೆಂದು ನೀವು ಭಾವಿಸಿದರೆ ಅವರನ್ನು ಹಿಂದಕ್ಕೆ ಕರೆತರುವ ಧೈರ್ಯ ಮತ್ತು ನಂಬಿಕೆಯನ್ನು ನೀವು ಹೊಂದಿರಬೇಕು. ದಂಡನಾತ್ಮಕ ಕ್ರಮಗಳು ಸಹಾಯ ಮಾಡುವುದಿಲ್ಲ. ಈ ಹಿಂದೆಯೂ ಸಹಾಯ ಮಾಡಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೆಹಬೂಬ ಮುಫ್ತಿಯವರು ಟ್ವೀಟ್ ಮಾಡಿ, “ಗೃಹ ಸಚಿವರು ಕಾಶ್ಮೀರಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕೇಸು ಹಾಕುವ ಮೂಲಕ ತಮ್ಮ ಮನ್ ಕಿ ಬಾತ್ ಶುರು ಮಾಡಿದ್ದಾರೆ. ವಿದ್ಯಾವಂತ ಯುವಜನರು ಏಕೆ ಪಾಕಿಸ್ತಾನದೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ ಎಂಬುದನ್ನು ಅರಿಯುವ ಬದಲು ಭಾರತ ಸರ್ಕಾರ ಅವರ ಮೇಲೆ ಪ್ರತೀಕಾರದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಕ್ರಮಗಳು ಅವರನ್ನು ಮತ್ತಷ್ಟು ದೂರ ತಳ್ಳುತ್ತವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಪಾಕ್ ಗೆಲುವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿಗಳ ಮೇಲೆ ಇಷ್ಟೊಂದು ಕೋಪ ಏಕೆ? ಕೆಲವರು ದೇಶದ್ರೋಹಿಗಳ ಮೇಲೆ ಗುಂಡು ಹಾರಿಸಿ ಎಂದು ಕೊಲೆಗಡುಕ ಘೋಷಣೆಗಳನ್ನೂ ಕೂಗುತ್ತಿದ್ದಾರೆ. ಜಮ್ಮು ಕಾಶ್ಮೀರ ಛಿದ್ರಗೊಂಡಾಗ ಮತ್ತು ವಿಶೇಷ ಸ್ಥಾನಮಾನವನ್ನು ಕಸಿದುಕೊಂಡಾಗ ಎಷ್ಟು ಮಂದಿ ಸಿಹಿ ಹಂಚಿ ಸಂಭ್ರಮಿಸಿದರು ಎಂಬುದನ್ನು ಯಾರೂ ಮರೆತಿಲ್ಲ. ನೀವು ಒಪ್ಪಬಹುದು ಅಥವಾ ಬಿಡಬಹುದು, ಪಾಕ್ ಗೆದ್ದಾಗ ಆ ತಂಡವನ್ನು ಮೊದಲು ಅಭಿನಂದಿಸಿದ ವಿರಾಟ್ ಕೊಹ್ಲಿಯವರ ಸರಿಯಾದ ಸ್ಫೂರ್ತಿಯನ್ನು ತೆಗೆದುಕೊಳ್ಳೋಣ” ಎಂದು ಮುಫ್ತಿ ಹೇಳಿದ್ದಾರೆ.

ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ ಮೊಹಮ್ಮದ್ ರಿಜ್ವಾನ್‌ರನ್ನು ಅಪ್ಪಿಕೊಂಡು ಅಭಿನಂದಿಸಿದರು. ಮತ್ತೊಬ್ಬ ಆಟಗಾರ ಪಾಕ್ ನಾಯಕ ಬಾಬರ್ ಅಜಂರಿಗೆ ಅಭಿನಂದನೆ ತಿಳಿಸಿದರು. ಈ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ “ನಿಜವಾದ ಕ್ರೀಡಾಸ್ಪೂರ್ತಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ. ಅದೇ ರೀತಿ ಪಂದ್ಯದ ನಂತರ ಭಾರತದ ತಂಡದ ಮೆಂಟರ್ ಮಹೇಂದ್ರ ಸಿಂಗ್ ಧೋನಿ ಪಾಕಿಸ್ತಾನದ ಆಟಗಾರರ ಜೊತೆ ಮಾತುಕತೆ ನಡೆಸಿ ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ.


ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್


ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.

ಪಾಕ್ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ “Spirit of Cricket” ಎಂದು ಬರೆದಿದೆ.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...